ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿ; ಸಿಟಿ ಸ್ಕ್ಯಾನ್ ನೋಡಿ ಬೆಚ್ಚಿಬಿದ್ದ ವೈದ್ಯರು

ತೀವ್ರ ಹೊಟ್ಟೆನೋವಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯ ಸಿಟಿ ಸ್ಕ್ಯಾನ್ ಕಂಡು ವೈದ್ಯರು ಬೆಚ್ಚಿಬಿದ್ದಿದ್ದಾರೆ. ಈತನ ಹೊಟ್ಟೆಯಲ್ಲಿ 9 ಸೆಂ.ಮೀ ಉದ್ದದ ಗಾಜಿನ ತುಂಡು ಕಂಡು ಬಂದಿದ್ದು, ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆಯ ಮೂಲಕ ಗಾಜಿನ ತುಂಡನ್ನು ಹೊರತೆಗೆದಿದ್ದಾರೆ.

ತೀವ್ರ ಹೊಟ್ಟೆ ನೋವಿನಿಂದ ಆಸ್ಪತ್ರೆಗೆ ದಾಖಲಾದ ವ್ಯಕ್ತಿ;  ಸಿಟಿ ಸ್ಕ್ಯಾನ್ ನೋಡಿ ಬೆಚ್ಚಿಬಿದ್ದ ವೈದ್ಯರು
Follow us
|

Updated on:Jul 25, 2024 | 10:37 AM

ಸಾಮಾನ್ಯವಾಗಿ ಹೊಟ್ಟೆ ನೋವು ಬಂದರೆ ಹೊಟ್ಟೆ ಕೆಟ್ಟಿರಬಹುದು ಎಂದು ಮನೆಮದ್ದುಗಳಿಂದ ಹೊಟ್ಟೆ ನೋವು ಗುಣ ಪಡಿಸುವವರೇ ಹೆಚ್ಚು. ಹೊಟ್ಟೆ ನೋವಿಗೆ ಚಿಕಿತ್ಸೆ ಪಡೆಯಲು ಆಸ್ಪತ್ರೆಗೆ ಹೋಗುವವರು ತೀರಾ ಕಡಿಮೆ. ಇದೀಗ ಅಂತದ್ದೇ ಘಟನೆಯೊಂದು ಭಾರೀ ಸುದ್ದಿಯಲ್ಲಿದೆ. ರಷ್ಯಾದ ವ್ಯಕ್ತಿಯೊಬ್ಬರು ಕಳೆದ 9 ವರ್ಷಗಳಿಂದ ಹೊಟ್ಟೆ ನೋವಿನಿಂದ ಬಳಲುತ್ತಿದ್ದು,ಇದಕ್ಕಾಗಿ ವರ್ಷಗಳಿಂದ ಮನೆಮದ್ದುಗಳನ್ನೇ ಮಾಡಿಕೊಂಡು ಬಂದಿದ್ದಾರೆ. ಆದರೆ ಇತ್ತೀಚಿಗಷ್ಟೇ ಆರೋಗ್ಯ ತೀವ್ರವಾಗಿ ಹದಗೆಟ್ಟಿದ್ದು, ಆತನ ಸಂಬಂಧಿಕರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಚಿಕಿತ್ಸೆಗೆ ಒಳಪಡಿಸಿದ ವೈದ್ಯರು ತನ ಸಿಟಿ ಸ್ಕ್ಯಾನ್ ಕಂಡು ಬೆಚ್ಚಿಬಿದ್ದಿದ್ದಾರೆ.

ವ್ಯಕ್ತಿಯ ಹೆಸರು ಬಹಿರಂಗವಾಗಿಲ್ಲ ಆದರೆ ಆತನಿಗೆ 53 ವರ್ಷ ಎಂದು ಹೇಳಲಾಗಿದೆ. ಆಡಿಟಿ ಸೆಂಟ್ರಲ್ ವೆಬ್‌ಸೈಟ್‌ನ ವರದಿಯ ಪ್ರಕಾರ, ರಷ್ಯಾದ ಕಿರೋವ್ ಕ್ಲಿನಿಕಲ್ ಆಸ್ಪತ್ರೆಗೆ ದಾಖಲಾದ ರೋಗಿಯು ದೀರ್ಘಕಾಲದವರೆಗೆ ಪಕ್ಕೆಲುಬುಗಳ ಅಡಿಯಲ್ಲಿ ದೇಹದ ಬಲಭಾಗದಲ್ಲಿ ತೀವ್ರವಾದ ನೋವು ಮತ್ತು ಅಸ್ವಸ್ಥತೆಯನ್ನು ಅನುಭವಿಸುತ್ತಿರುವುದಾಗಿ ವೈದ್ಯರಿಗೆ ತಿಳಿಸಿದ್ದಾರೆ. ಆದರೆ ನೋವಿನ ಬಗ್ಗೆ ವೈದ್ಯರ ಬಳಿ ಹೋಗಲೇ ಇಲ್ಲ. ಅಂತಿಮವಾಗಿ 9 ವರ್ಷಗಳ ನಂತರ ಅವರು ವೈದ್ಯರ ಬಳಿಗೆ ಹೋಗಲು ನಿರ್ಧರಿಸಿದ್ದರು, ಈ ವೇಳೆ ಅವರಿಗೆ ಸಿಟಿ ಸ್ಕ್ಯಾನ್ ಮಾಡಲಾಗಿದೆ. ಸಿಟಿ ಸ್ಕ್ಯಾನ್​​​ನಲ್ಲಿ ಯಕೃತ್ತಿನ ಬಲಭಾಗದಲ್ಲಿ ಚೂಪಾದ ವಸ್ತು ಸಿಕ್ಕಿಕೊಂಡಿರುವುದು ಕಂಡುಬಂದಿದೆ.

ಇದನ್ನೂ ಓದಿ: ಬೀದಿ ಬದಿ ಟೀ ಮಾರುತ್ತಿದ್ದ ವ್ಯಕ್ತಿಯ ಮಗಳು ಸಿಎ ಪಾಸ್​​​; ವಿಡಿಯೋ ವೈರಲ್​​

ಯಕೃತ್ತಿನಲ್ಲಿ 9 ಸೆಂ.ಮೀ ಉದ್ದದ ಗಾಜಿನ ತುಂಡು

ಯಾವಾಗ ಗಾಯವಾಯಿತು ಎಂದು ವೈದ್ಯರು ರೋಗಿಯನ್ನು ಕೇಳಿದಾಗ, ರೋಗಿಯು ತನಗೆ ಯಾವುದೇ ಗಾಯದ ಬಗ್ಗೆ ನೆನಪಿಲ್ಲ, ಯಾವುದೇ ಚೂಪಾದ ವಸ್ತುವು ಚುಚ್ಚಿದ್ದು ನೆನಪಿಲ್ಲ ಎಂದು ಹೇಳಿದ್ದಾರೆ. ನಂತರ, ವೈದ್ಯರು ರೋಗಿಯ ಮೇಲೆ ಲ್ಯಾಪರೊಸ್ಕೋಪಿಕ್ ಶಸ್ತ್ರಚಿಕಿತ್ಸೆ ನಡೆಸಿ 9 ಸೆಂ.ಮೀ ಉದ್ದದ ಗಾಜಿನ ತುಂಡನ್ನು ಯಕೃತ್ತಿನಿಂದ ಹೊರತೆಗೆದಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:36 am, Thu, 25 July 24

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್