Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಶಾಲೆಯಲ್ಲೇ ಶಿಕ್ಷಕರ ರೀಲ್ಸ್​​​​​, ಇನ್ಸ್ಟಾಗ್ರಾಮ್​​ನಲ್ಲಿ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ

ಅಪ್ಲೋಡ್​​ ಮಾಡಿರುವ ವಿಡಿಯೋದ ವೀಕ್ಷಣೆ ಹೆಚ್ಚಾಗಲು ಮತ್ತು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫಾಲೋವರ್ಸ್​ ಹೆಚ್ಚಾಗಲು ಪ್ರತೀ ವಿದ್ಯಾರ್ಥಿಗಳ ಮೇಲೆ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫಾಲೋ ಮಾಡುವಂತೆ ಒತ್ತಡ ಹೇರಲಾಗಿದೆ. ಲೈಕ್​​​, ಫಾಲೋ ಮಾಡದಿದ್ದರೆ ಹೊಡೆಯುವುದಾಗಿ ಹೆದರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಆರೋಪಿಸಿದ್ದಾರೆ.

Viral News: ಶಾಲೆಯಲ್ಲೇ ಶಿಕ್ಷಕರ ರೀಲ್ಸ್​​​​​, ಇನ್ಸ್ಟಾಗ್ರಾಮ್​​ನಲ್ಲಿ ಫಾಲೋ ಮಾಡುವಂತೆ ವಿದ್ಯಾರ್ಥಿಗಳಿಗೆ ಒತ್ತಡ
Viral News
Follow us
ಅಕ್ಷತಾ ವರ್ಕಾಡಿ
|

Updated on: Sep 30, 2023 | 4:14 PM

ಉತ್ತರ ಪ್ರದೇಶ: ಅಮ್ರೋಹಾ ಜಿಲ್ಲೆಯ ಪ್ರಾಥಮಿಕ ಶಾಲಾ ಶಿಕ್ಷಕರ ಗುಂಪೊಂದು ಶಾಲೆಯಲ್ಲಿ ರೀಲ್ಸ್​​​​​ ಮಾಡಿ ಸೋಶಿಯಲ್​​ ಮೀಡಿಯಾಗಳಲ್ಲಿ ಹಂಚಿಕೊಳ್ಳುವುದು ಮಾತ್ರವಲ್ಲದೇ ಲೈಕ್ಸ್​​​​ ಹಾಗೂ ಫಾಲೋವರ್ಸ್ಗಳು ಹೆಚ್ಚಾಗಲು ವಿದ್ಯಾರ್ಥಿಗಳ ಮೇಲೆ ಒತ್ತಡ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಇಂಡಿಯಾ ಟುಡೇ ವರದಿಯ ಪ್ರಕಾರ, ಮೂವರು ಶಿಕ್ಷಕರು ವಿಡಿಯೋದಲ್ಲಿ ಕಾಣಿಸಿಕೊಂಡರೆ, ಮತ್ತೊಬ್ಬರು ವಿಡಿಯೋ ಚಿತ್ರೀಕರಿಸಿ, ನಂತರ ‘ರವಿಪೂಜಾ’ ಎಂಬ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೊಗಳನ್ನು ಹಂಚಿಕೊಳ್ಳುತ್ತಿದ್ದರು ಎಂದು ತಿಳಿದುಬಂದಿದೆ.

ಇದಷ್ಟೇ ಅಲ್ಲ, ಅಪ್ಲೋಡ್​​ ಮಾಡಿರುವ ವಿಡಿಯೋದ ವೀಕ್ಷಣೆ ಹೆಚ್ಚಾಗಲು ಮತ್ತು ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫಾಲೋವರ್ಸ್​ ಹೆಚ್ಚಾಗಲು ಪ್ರತೀ ವಿದ್ಯಾರ್ಥಿಗಳ ಮೇಲೆ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ಫಾಲೋ ಮಾಡುವಂತೆ ಒತ್ತಡ ಹೇರಲಾಗಿದ್ದು, ಲೈಕ್​​​, ಫಾಲೋ ಮಾಡದಿದ್ದರೆ ಹೊಡೆಯುವುದಾಗಿ ಹೆದರಿಸಿದ್ದಾರೆ ಎಂದು ವಿದ್ಯಾರ್ಥಿಗಳು ಹೇಳಿರುವುದು ಇಂಡಿಯಾ ಟುಡೇಗೆ ವರದಿ ಮಾಡಿದೆ.

ಇದನ್ನೂ ಓದಿ: ರಸ್ತೆಬದಿ ತರಕಾರಿ ಮಾರಲು ಔಡಿ ಎ4 ಕಾರಿನಲ್ಲಿ ಬರುವ ಕೇರಳದ ರೈತ

ಸರ್ಕಾರಿ ಶಾಲಾ ಶಿಕ್ಷಕರ ವಿರುದ್ಧ ಕ್ರಮ ಕೈಗೊಳ್ಳುವಂತೆ ಪೋಷಕರು ಜಿಲ್ಲಾಧಿಕಾರಿಯನ್ನು ಸಂಪರ್ಕಿಸಿ ದೂರು ನೀಡಿದ್ದು, ದೂರಿನಲ್ಲಿ ಅಂಬಿಕಾ ಗೋಯಲ್, ಪೂನಂ ಸಿಂಗ್, ನೀತು ಕಶ್ಯಪ್ ಶಿಕ್ಷಕಿಯರ ಹೆಸರನ್ನು ನಮೂದಿಸಲಾಗಿದೆ. ಆದರೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೆಲ್ಲವು ಸುಳ್ಳು. ಮಕ್ಕಳಿಗೆ ಕಲಿಕೆಯ ವಿಷಯವಾಗಿ ಕೆಲವೊಂದು ವಿಡಿಯೋಗಳನ್ನು ಮಾಡುತ್ತೇವೆ ಎಂದು ಶಿಕ್ಷಕಿ ಅಂಬಿಕಾ ಗೋಯಲ್ ತನ್ನ ಮೇಲಿನ ಆರೋಪವನ್ನು ತಳ್ಳಿ ಹಾಕಿದ್ದಾರೆ.

ರೀಲ್ಸ್ ಮಾಡಿದ ಆರೋಪದ ಹೊರತಾಗಿ ಇತರ ಶಿಕ್ಷಕರ ವಿರುದ್ಧವೂ ಶಾಲೆಯ ವಿದ್ಯಾರ್ಥಿಗಳು ಕಳಪೆ ಬೋಧನೆ ಆರೋಪವನ್ನು ಮಾಡಿದ್ದಾರೆ. ಈ ಬಗ್ಗೆ ಹೆಚ್ಚಿನ ತನಿಖೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಬ್ಲಾಕ್ ಶಿಕ್ಷಣಾಧಿಕಾರಿ ಗಂಗೇಶ್ವರಿ ಆರತಿ ಸುದ್ದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ಹರಿಯಾಣದ ಸೋನಿಪತ್ ಕಾರ್ಖಾನೆಯಲ್ಲಿ ಭಾರಿ ಬೆಂಕಿ ಅವಘಡ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ರಜತ್ ಕಿಶನ್ ರೀಲ್ಸ್ ಕೇಸ್: ಪೊಲೀಸ್ ಠಾಣೆಗೆ ಅಲೆದಾಡಿದ ಪತ್ನಿ ಅಕ್ಷಿತಾ
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ಹೇಳಿದ ಸತ್ಯವನ್ನು ಬಿಜೆಪಿಗೆ ಜೀರ್ಣಿಸಿಕೊಳ್ಳಲಾಗುತ್ತಿಲ್ಲ: ಶಿವಕುಮಾರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ರಾಜಣ್ಣ ನನಗೆ ದೂರು ನೀಡಲು ಬರಲ್ಲ, ಪೊಲೀಸ್ ಠಾಣೆಗೆ ನೀಡಬೇಕು: ಪರಮೇಶ್ವರ್
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಶಿವಕುಮಾರ್ ತಮಿಳುನಾಡುನಿಂದ ಒಪ್ಪಿಗೆ ತಂದರೆಂದು ಭಾವಿಸಿದ್ದೆ: ಸಿಟಿ ರವಿ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಮೀಸಲಾತಿ ಕುರಿತು ನಿತೀಶ್ ಕುಮಾರ್, ರಾಬ್ರಿ ದೇವಿ ನಡುವೆ ತೀವ್ರ ವಾಗ್ವಾದ
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ಹನಿಟ್ರ್ಯಾಪ್​: ರಾಜಣ್ಣ, ಪರಮೇಶ್ವರ್​ ದಿಢೀರ್ ಜಂಟಿ ಸುದ್ದಿಗೋಷ್ಠಿ ಲೈವ್​
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ವಿನಯ್-ರಜತ್ ಅವರ ಮಹಜರಿಗೆ ಕರೆತಂದ ಪೊಲೀಸರು: ವಿಡಿಯೋ
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಕೇವಲ ಒಬ್ಬ ಕಾರ್ಯಕರ್ತನ ಹಿಂದೆ ಹತ್ತಾರು ಪೊಲೀಸರು!
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?
ಹನಿಟ್ರ್ಯಾಪ್‌ನಲ್ಲಿ ನನ್ನದೂ ತಪ್ಪಿದೆ ಎಂದಿದ್ಯಾಕೆ ರಾಜಣ್ಣ..?