AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ

ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ.ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳುವ ವೇಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಹೋಗಿದ್ದಾಳೆ.

Viral News: ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
ಅಕ್ಷತಾ ವರ್ಕಾಡಿ
|

Updated on: Apr 18, 2024 | 10:21 AM

Share

ತೆಲಂಗಾಣ: ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ. ತಕ್ಷಣ ಮಹಿಳೆ ಹಾವನ್ನು ಹೊಡೆದು ಕೊಂದಿದ್ದು, ಬಳಿಕ ಸತ್ತ ಹಾವನ್ನು ಡಬ್ಬಿಯಲ್ಲಿ ಹಾಕಿ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಈಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಕೈಯಲ್ಲಿ ಹಾವು ಇದ್ದುದನ್ನು ಕಂಡು ವೈದ್ಯಕೀಯ ಸಿಬ್ಬಂದಿ ಗಾಬರಿಗೊಂಡಿದ್ದಾರೆ.

ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲದ ಮುಕುನೂರುಪಾಲೆಂ ಗ್ರಾಮದ ಶಾಂತಾ ಎಂಬ ಮಹಿಳೆ ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ.ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ಅಲ್ಲಿಂದ ಕೂಡಲೇ ವೆಂಕಟಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆದರೆ ಹೊರಡುವಾಗ ಆಕೆಗೆ ಅನುಮಾನವೊಂದು ಹುಟ್ಟಿಕೊಂಡಿದೆ. ಆಸ್ಪತ್ರೆಗೆ ಹೋದರೆ ಯಾವ ಹಾವು ಕಚ್ಚಿದೆ ಎಂದು ವೈದ್ಯರು ಕೇಳಿದರೆ ಏನು ಮಾಡಲಿ ಎಂದು ತಿಳಿಯದೇ ಮಹಿಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಹೋಗಿದ್ದಾಳೆ.

ಇದನ್ನೂ ಓದಿ: Bengaluru: ಇದು ಬೇಜವಾಬ್ದಾರಿತನದ ಪರಮಾವಧಿ, ಫೂಟ್ ರೆಸ್ಟ್ ಮೇಲೆ ಮಗುವನ್ನು ನಿಲ್ಲಿಸಿಕೊಂಡು ದಂಪತಿಗಳ ಸ್ಕೂಟರ್ ಸವಾರಿ 

ತಬ್ಬಿಬ್ಬಾದ ವೈದ್ಯಕೀಯ ಸಿಬ್ಬಂದಿ ಮಹಿಳೆಯ ಕೈಯಲ್ಲಿ ಸತ್ತ ಹಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಕ್ಷಣವೇ ವೈದ್ಯಕೀಯ ಸೇವೆ ಒದಗಿಸಲಾಗಿದೆ. ಸದ್ಯ ಶಾಂತಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
VIDEO: 6 ಎಸೆತಗಳಲ್ಲಿ 7 ರನ್​: ಡೆಲ್ಲಿ ಕ್ಯಾಪಿಟಲ್ಸ್​ಗೆ ಇದೆಂಥ ಸೋಲು..!
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ನಂದಿ ಹಿಲ್ಸ್ ರಸ್ತೆ ಬಳಿ ಚಿರತೆ ಪ್ರತ್ಯಕ್ಷ: ಪ್ರವಾಸಿಗರೇ ಎಚ್ಚರ
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಜಮ್ಮು-ಕಾಶ್ಮೀರದ ಗಡಿಯಲ್ಲಿ 5 ಪಾಕಿಸ್ತಾನಿ ಡ್ರೋನ್​ಗಳು ಪತ್ತೆ, ಹೈ ಅಲರ್ಟ್​
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಪತಿಯ ಅಂತ್ಯಕ್ರಿಯೆಗೆ ಕಂದನ ಜತೆ ಸ್ಟ್ರೆಚರ್​ನಲ್ಲಿ ಬಂದ ಸೈನಿಕನ ಪತ್ನಿ
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಶುಕ್ರವಾರದಂದು ಹುಳಿ ಪದಾರ್ಥ ತಿನ್ನಲೇಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್