Viral News: ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ

ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ.ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ಅಲ್ಲಿಂದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳುವ ವೇಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಹೋಗಿದ್ದಾಳೆ.

Viral News: ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
ಕಚ್ಚಿದ ಹಾವನ್ನು ಕೊಂದು ಆಸ್ಪತ್ರೆಗೆ ತೆಗೆದುಕೊಂಡು ಬಂದ ಮಹಿಳೆ
Follow us
|

Updated on: Apr 18, 2024 | 10:21 AM

ತೆಲಂಗಾಣ: ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ. ತಕ್ಷಣ ಮಹಿಳೆ ಹಾವನ್ನು ಹೊಡೆದು ಕೊಂದಿದ್ದು, ಬಳಿಕ ಸತ್ತ ಹಾವನ್ನು ಡಬ್ಬಿಯಲ್ಲಿ ಹಾಕಿ ಆಸ್ಪತ್ರೆಗೆ ತೆಗೆದುಕೊಂಡು ಬಂದಿದ್ದಾರೆ. ಈಘಟನೆ ತೆಲಂಗಾಣದ ಮುಳುಗು ಜಿಲ್ಲೆಯಲ್ಲಿ ನಡೆದಿದೆ. ಮಹಿಳೆಯ ಕೈಯಲ್ಲಿ ಹಾವು ಇದ್ದುದನ್ನು ಕಂಡು ವೈದ್ಯಕೀಯ ಸಿಬ್ಬಂದಿ ಗಾಬರಿಗೊಂಡಿದ್ದಾರೆ.

ಮುಳುಗು ಜಿಲ್ಲೆಯ ವೆಂಕಟಾಪುರಂ ಮಂಡಲದ ಮುಕುನೂರುಪಾಲೆಂ ಗ್ರಾಮದ ಶಾಂತಾ ಎಂಬ ಮಹಿಳೆ ಎಂದಿನಂತೆ ಕೂಲಿ ಕೆಲಸಕ್ಕೆ ಹೋಗಿದ್ದ ಮಹಿಳೆಗೆ ಹಾವು ಕಚ್ಚಿದೆ.ಕೂಡಲೇ ಎಚ್ಚೆತ್ತ ಮಹಿಳೆ ತನ್ನ ಸಹ ಕಾರ್ಮಿಕರೊಂದಿಗೆ ಸೇರಿ ಹಾವನ್ನು ಹೊಡೆದು ಸಾಯಿಸಿದ್ದಾರೆ. ಅಲ್ಲಿಂದ ಕೂಡಲೇ ವೆಂಕಟಾಪುರ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ತೆರಳಿದ್ದಾರೆ. ಆದರೆ ಹೊರಡುವಾಗ ಆಕೆಗೆ ಅನುಮಾನವೊಂದು ಹುಟ್ಟಿಕೊಂಡಿದೆ. ಆಸ್ಪತ್ರೆಗೆ ಹೋದರೆ ಯಾವ ಹಾವು ಕಚ್ಚಿದೆ ಎಂದು ವೈದ್ಯರು ಕೇಳಿದರೆ ಏನು ಮಾಡಲಿ ಎಂದು ತಿಳಿಯದೇ ಮಹಿಳೆ ಕೊಂದ ಹಾವನ್ನು ಡಬ್ಬಿಯೊಂದರಲ್ಲಿ ಹಾಕಿಕೊಂಡು ಆಸ್ಪತ್ರೆಗೆ ಹೋಗಿದ್ದಾಳೆ.

ಇದನ್ನೂ ಓದಿ: Bengaluru: ಇದು ಬೇಜವಾಬ್ದಾರಿತನದ ಪರಮಾವಧಿ, ಫೂಟ್ ರೆಸ್ಟ್ ಮೇಲೆ ಮಗುವನ್ನು ನಿಲ್ಲಿಸಿಕೊಂಡು ದಂಪತಿಗಳ ಸ್ಕೂಟರ್ ಸವಾರಿ 

ತಬ್ಬಿಬ್ಬಾದ ವೈದ್ಯಕೀಯ ಸಿಬ್ಬಂದಿ ಮಹಿಳೆಯ ಕೈಯಲ್ಲಿ ಸತ್ತ ಹಾವನ್ನು ಕಂಡು ಬೆಚ್ಚಿಬಿದ್ದಿದ್ದಾರೆ. ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತಕ್ಷಣವೇ ವೈದ್ಯಕೀಯ ಸೇವೆ ಒದಗಿಸಲಾಗಿದೆ. ಸದ್ಯ ಶಾಂತಾ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ