AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿಯ ಬಂಧನ

ತನ್ನದೇ ಹಸ್ತಮೈಥುನದ ವಿಡಿಯೋ ಕಳುಹಿಸಿ ವಿದ್ಯಾರ್ಥಿಯನ್ನು ತನ್ನ ಕಾಮದ ಬಲೆಗೆ ಬೀಳಿಸಿ, ಪ್ರತಿದಿನ ಮನೆಗೆ ಬರುವಂತೆ ಒತ್ತಾಯಿಸುತ್ತಿದ್ದ ಶಿಕ್ಷಕಿಯನ್ನು ಪೊಲೀಸರು ಬಂಧಿಸಿದ್ದಾರೆ. ಮಾನಸಿಕವಾಗಿ ಒತ್ತಡಕ್ಕೆ ಒಳಗಾದ ಬಾಲಕ ಪೋಷಕರಿಗೆ ಎಲ್ಲ ವಿಷಯವನ್ನು ತಿಳಿಸಿದ್ದರಿಂದ ಶಿಕ್ಷಕಿಯ ನೀಚ ಕೃತ್ಯ ಬೆಳಕಿಗೆ ಬಂದಿದೆ.

ಹಸ್ತಮೈಥುನ ವಿಡಿಯೋ ಕಳುಹಿಸಿ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿಯ ಬಂಧನ
ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ
ಅಕ್ಷತಾ ವರ್ಕಾಡಿ
|

Updated on: Aug 10, 2024 | 4:35 PM

Share

ಆಸ್ಟ್ರೇಲಿಯಾ: ತನ್ನದೇ ಹಸ್ತಮೈಥುನದ ವಿಡಿಯೋ ಕಳುಹಿಸಿ ವಿದ್ಯಾರ್ಥಿಗಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಶಿಕ್ಷಕಿ ಈಗ ಜೈಲಿನಲ್ಲಿ ಕಂಬಿ ಎನಿಸುತ್ತಿದ್ದಾಳೆ. ಈ ಘಟನೆ ಆಸ್ಟ್ರೇಲಿಯಾದ ಸಿಡ್ನಿಯಲ್ಲಿ ನಡೆದಿದೆ. ಇತ್ತೀಚಿಗಷ್ಟೇ ಈ ಶಿಕ್ಷಕಿ ತನ್ನ 17 ವರ್ಷದ ವಿದ್ಯಾರ್ಥಿಗೆ ಆಕೆಯ ಹಸ್ತಮೈಥುನದ ವಿಡಿಯೋ ಕಳುಹಿಸಿದ್ದಳು. ಇದಲ್ಲದೆ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಳು ಎಂಬ ಆರೋಪ ಕೇಳಿಬಂದಿದೆ. ವಿಡಿಯೋ ಆಧಾರದ ಮೇಲೆ ಸಿಡ್ನಿ ಪೊಲೀಸರು ಶಿಕ್ಷಕಿಯನ್ನು ಬಂಧಿಸಿದ್ದಾರೆ.

ಗಾರ್ಡಿಯನ್ ಪ್ರಕಾರ, ನೈಋತ್ಯ ಸಿಡ್ನಿಯ ಲುರ್ನಿಯಾ ಹೈಸ್ಕೂಲ್ನ 30 ವರ್ಷದ ಶಿಕ್ಷಕಿ ತೈಲಾ ಬ್ರೈಲಿಯನ್ನು ಲೈಂಗಿಕ ಕಿರುಕುಳದ ಆರೋಪದ ಮೇಲೆ ಬಂಧಿಸಲಾಗಿದೆ. ಶಿಕ್ಷಕಿಯನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು, ಅಲ್ಲಿ ಅವರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿದೆ. ಜೊತೆಗೆ ಶಿಕ್ಷಕಿಯನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ.

ಸ್ನಾಪ್‌ಚಾಟ್ ಮೂಲಕ ಪ್ರಾರಂಭದಲ್ಲಿ ತನ್ನ 17 ವರ್ಷದ ವಿದ್ಯಾರ್ಥಿಗೆ ಮೆಸೇಜ್ ಮಾಡಲು ಆರಂಭಿಸಿದ್ದ ಈಕೆ, ಸಲುಗೆಯಿಂದ ಮಾತಾಡಿ ತನ್ನ ಬಲೆಗೆ ಬೀಳಿಸಿದ್ದಾಳೆ. ಬಳಿಕ ವಿದ್ಯಾರ್ಥಿಗೆ ನಗ್ನ ಫೋಟೋಗಳನ್ನು ಕಳುಹಿಸುತ್ತಿದ್ದ ಶಿಕ್ಷಕಿ ಒಂದು ದಿನ ತನ್ನ ಮನೆಗೆ ಕರೆಸಿ ವಿದ್ಯಾರ್ಥಿಯೊಂದಿಗೆ ಲೈಂಗಿಕ ಸಂಪರ್ಕ ಬೆಳೆಸಿದ್ದಾಳೆ. ಇಷ್ಟಕ್ಕೆ ಆಕೆಗೆ ಸಮಾಧಾನವಾಗಿಲ್ಲ, ವಿದ್ಯಾರ್ಥಿಯನ್ನು ಆಕೆ ಕರೆದಾಗಲೆಲ್ಲ ಬರುವಂತೆ ಒತ್ತಾಯಿಸಿದ್ದಾಳೆ.

ಇದನ್ನೂ ಓದಿ: ಲೈಂಗಿಕ ಕ್ರಿಯೆ ಮುನ್ನ ಹಣ ಕೇಳ್ತಿದ್ದ ಪತ್ನಿ; ಬೇಸತ್ತು ವಿಚ್ಛೇದನ ನೀಡಿದ ಪತಿ

ಮಾನಸಿಕವಾಗಿ ಒತ್ತಡಕ್ಕೆ ಒಳಗಾದ ಬಾಲಕ ಪೋಷಕರಿಗೆ ಎಲ್ಲ ವಿಷಯವನ್ನು ತಿಳಿಸಿದ್ದು, ಪೋಷಕರ ದೂರಿನ ಆಧಾರದ ಮೇಲೆ ಇದೀಗ ಶಿಕ್ಷಕಿ ಮೇಲೆ ಕೇಸು ದಾಖಲಿಸಿದ್ದು, ಸ್ಥಳೀಯ ನ್ಯಾಯಾಲಯದಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಹೊರಬಂದಿದ್ದಾಳೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು