AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ದೇವರ ವಿಗ್ರಹ ಕೆಡವಲು ಬಂದ ವ್ಯಕ್ತಿ ಏಕಾಏಕಿ ವಿಗ್ರಹದ ಮುಂದೆಯೇ ಬಿದ್ದು ಸಾವು

ಕಂಠ ಪೂರ್ತಿ ಕುಡಿದ ವ್ಯಕ್ತಿಯೊರ್ವ ಬೌದ್ಧ ಮಂದಿರಕ್ಕೆ ನುಗ್ಗಿ ಅಲ್ಲಿರುವ ಬುದ್ಧನ ಪ್ರತಿಮೆಯನ್ನು ಏರಿ ವಿಗ್ರಹ ಕೆಡವಲು ಯತ್ನಿಸಿದ್ದಾನೆ. ಈ ವೇಳೆ ಪ್ರತಿಮೆಯ ಚೂಪಾದ ಭಾಗವೊಂದು ಆತನ ಎದೆಗೆ ಚುಚ್ಚಿಕೊಂಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಅಲ್ಲೇ ಬಿದ್ದು ಸಾವನ್ನಪ್ಪಿದ್ದಾನೆ.

Viral News: ದೇವರ ವಿಗ್ರಹ ಕೆಡವಲು ಬಂದ ವ್ಯಕ್ತಿ ಏಕಾಏಕಿ ವಿಗ್ರಹದ ಮುಂದೆಯೇ ಬಿದ್ದು ಸಾವು
ಅಕ್ಷತಾ ವರ್ಕಾಡಿ
|

Updated on: May 22, 2024 | 2:57 PM

Share

ಥಾಯ್ಲೆಂಡ್‌: ಕುಡುಕನೊಬ್ಬ ಬೌದ್ಧ ಮಂದಿರಕ್ಕೆ ನುಗ್ಗಿ ಸಾಕಷ್ಟು ವಿಧ್ವಂಸಕ ಕೃತ್ಯ ಎಸಗಿದ ಕೆಲ ಹೊತ್ತಿನಲ್ಲಿ  ದೇವಾಲಯದ ಮುಂದೇಯೇ ಬಿದ್ದು ಮೃತಪಟ್ಟಿರುವ ಘಟನೆ ಥಾಯ್ಲೆಂಡ್‌ನ ಚೋನ್‌ಬುರಿ ಪ್ರಾಂತ್ಯದ ಬಾನ್‌ಬಂಗ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ದೇವಾಲಯದ ಒಳಗೆ ಏಕಾಏಕಿ ನುಗ್ಗಿ ವಿಧ್ವಂಸಕ ಕೃತ್ಯ ಎಸಗುತ್ತಿದ್ದಂತೆ ಅಲ್ಲಿದ್ದ ಬೌದ್ಧ ಸನ್ಯಾಸಿಗಳು ಆತನನ್ನು ತಡೆಯಲು ಪ್ರಯತ್ನಿಸಿದ್ದರು, ಆದರೆ ಬೌದ್ಧ ಸನ್ಯಾಸಿಗಳ ಮೇಲೂ ಹಲ್ಲೆ ನಡೆಸಿ ದೇವರ ವಿಗ್ರಹವನ್ನು ಕೆಡವಲು ಮುಂದಾದ ವೇಳೆ ಏಕಾಏಕಿ ನೆಲದ ಮೇಲೆ ಬಿದ್ದು ಅಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಸಾಕಷ್ಟು ನೆಟ್ಟಿಗರು ಇದು ‘ಕರ್ಮದ ಫಲ’ ಎಂದು ಕಾಮೆಂಟ್​​ ಮಾಡಿದ್ದಾರೆ.

ಈ 49 ವರ್ಷದ ಥಾಯ್ ಎಂಬ ವ್ಯಕ್ತಿ ದೇವಾಲಯದ ಮುಖ್ಯ ಸಭಾಂಗಣವನ್ನು ಧ್ವಂಸಗೊಳಿಸುತ್ತಿದ್ದಾಗ, ಬುದ್ಧನ ಪ್ರತಿಮೆಯ ತೀಕ್ಷ್ಣವಾದ ಭಾಗವೊಂದು ಅವನ ತಲೆ ಮತ್ತು ಎದೆಗೆ ಚುಚ್ಚಿದೆ. ಇದರಿಂದಾಗಿ ತೀವ್ರ ರಕ್ತಸ್ರಾವವಾಗಿ ಅವನು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಫೆಬ್ರವರಿ 27ರಂದು ಈ ಘಟನೆ ನಡೆದಿದ್ದು, ಗಲಭೆ ವೇಳೆ ಸಂಭವಿಸಿದ ಈ ವಿಚಿತ್ರ ಸಾವು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಯಲ್ಲಿದೆ.

ಇದನ್ನೂ ಓದಿ: ರಸ್ತೆಯಿಂದ ಸೀದಾ ಮನೆಯ ಛಾವಣಿಗೆ, ಇದಕ್ಕೆ ಹೇಳುವುದು ಇಂತ ವಿಷಯದಲ್ಲಿ ಹುಡುಗಿಯರನ್ನು ನಂಬಬಾರದು 

The Thaiger ನ ವರದಿಯ ಪ್ರಕಾರ, ಪೊಲೀಸರು ದೇವಸ್ಥಾನದ ಒಳಗೆ ಹೋಗಿ ನೋಡಿದಾಗ ರಕ್ತದಲ್ಲಿ ಮಡುವಿನಲ್ಲಿ ವ್ಯಕ್ತಿಯ ಶವ ಕಂಡು ಬೆಚ್ಚಿಬಿದ್ದಿದ್ದರು. ಆತ ಅತಿ ಎತ್ತರದ ಬುದ್ಧನ ಪ್ರತಿಮೆಯನ್ನು ಏರಿ ಒಡೆಯಲು ಯತ್ನಿಸುತ್ತಿದ್ದಾಗ, ಪ್ರತಿಮೆಯ ಚೂಪಾದ ಭಾಗವೊಂದು ಆತನ ಎದೆಗೆ ಚುಚ್ಚಿಕೊಂಡಿದ್ದು, ತೀವ್ರ ರಕ್ತಸ್ರಾವ ಉಂಟಾಗಿ ಅಲ್ಲೇ ಬಿದ್ದು ಸಾವನ್ನಪ್ಪಿರುವುದು ತನಿಖೆಯಿಂದ ತಿಳಿದುಬಂದಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಅಹಮದಾಬಾದ್‌ನಲ್ಲೂ ಆರ್‌ಸಿಬಿ ಅಲೆ!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ