AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಪತಿಗೆ ರಾಖಿ ಕಟ್ಟಿ ಅಣ್ಣ-ತಂಗಿಯ ಬಾಂಧವ್ಯ ಬೆಸೆದ ಪತ್ನಿ; ಏನಿದು ಘಟನೆ?

ಹಿರಿಯರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾದ ಪತಿಗೆ ತನ್ನ ಮೊದಲ ರಾತ್ರಿಯಂದೇ ಪತ್ನಿ ರಾಖಿ ಕಟ್ಟಿದ್ದಾಳೆ. ಇದಲ್ಲದೇ ತನ್ನನ್ನು ತನ್ನ ಮೊದಲ ಪತಿಯೊಂದಿಗೆ ಜೀವನ ನಡೆಸಲು ಬಿಡಿ ಎಂದು ಬೇಡಿಕೊಂಡಿದ್ದಾಳೆ.

ತನ್ನ ಪತಿಗೆ ರಾಖಿ ಕಟ್ಟಿ ಅಣ್ಣ-ತಂಗಿಯ ಬಾಂಧವ್ಯ ಬೆಸೆದ ಪತ್ನಿ; ಏನಿದು ಘಟನೆ?
ಪತಿಗೆ ರಾಖಿ ಕಟ್ಟಿದ ಪತ್ನಿImage Credit source: Giftalove
ಅಕ್ಷತಾ ವರ್ಕಾಡಿ
|

Updated on: Jun 13, 2023 | 11:34 AM

Share

ರಾಜಸ್ಥಾನದ ಜೋಧಪುರದಲ್ಲಿ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಹಿರಿಯರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾದ ಪತಿಗೆ  ಮೊದಲ ರಾತ್ರಿಯಂದೇ ಪತ್ನಿ ರಾಖಿ ಕಟ್ಟಿದ್ದಾಳೆ. ಇದಲ್ಲದೇ ತನ್ನನ್ನು ತನ್ನ ಮೊದಲ ಪತಿಯೊಂದಿಗೆ ಜೀವನ ನಡೆಸಲು ಬಿಡಿ ಎಂದು ಬೇಡಿಕೊಂಡಿದ್ದಾಳೆ. ಇದೀಗ ಈ ಪ್ರಕರಣ ರಾಜಸ್ಥಾನದಲ್ಲಿ ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಸಂಚಲನ ಮೂಡಿಸಿದೆ.

ರಾಜಸ್ಥಾನದ ಬಲೇಸರ್ ಮೂಲದ ತರುಣಾ ಶರ್ಮಾ ಎಂಬ ಯುವತಿ ತನ್ನ ಬಾಲ್ಯದ ಗೆಳೆಯ ಸುರೇಂದ್ರ ಸಂಖ್ಲಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಹುಡುಗಿಯ ಮನೆಯವರು ಹುಡುಗ ಬೇರೆ ಜಾತಿ ಎಂಬ ಕಾರಣಕ್ಕೆ ಮದುವೆಗೆ ನಿರಾಕರಿಸಿದ್ದಾರೆ. ಇದಾದ ಕೆಲವೇ ದಿನಗಳ ಬಳಿಕ ತರುಣಾ ಮನೆಯವರು ಆಕೆಯ ಗಂಡನಿಂದ ಬೇರ್ಪಡಿಸಿ, ಛತ್ತೀಸ್‌ಗಢದ ಜಿತೇಂದ್ರ ಜೋಶಿ ಎಂಬಾತನೊಂದಿಗೆ ಎರಡನೇ ಮದುವೆ ಮಾಡಿಸಿದ್ದಾರೆ. ಬಲವಂತವಾಗಿ ಮದುವೆ ಮಾಡಿಸಿರುವುದರಿಂದ ಮೊದಲ ರಾತ್ರಿಯಂದೇ ತನ್ನ ಎರಡನೇ ಪತಿಯ ಕೈಗೆ ರಾಖಿ ಕಟ್ಟಿ ತನ್ನ ಮೊದಲ ಪತಿಯೊಂದಿಗೆ ಕಳುಹಿಸುವಂತೆ ಬೇಡಿಕೊಂಡಿದ್ದಾಳೆ.

ಇದನ್ನೂ ಓದಿ: ಫೇಸ್‌ಬುಕ್‌ ಲವ್​​​ ಸ್ಟೋರಿ ವಿವಾಹಿತ ಮಹಿಳೆಯ ಮತಾಂತರ; ವ್ಯಕ್ತಿಯ ಬಂಧನ

ಆದರೆ, ಇದನ್ನು ಲೆಕ್ಕಿಸದೆ ಜಿತೇಂದ್ರ(ಎರಡನೇ ಪತಿ) ಆಕೆಗೆ ಕಿರುಕುಳ ನೀಡಿದ್ದಾನೆ. ಮೊದಲ ಪತಿಯೊಂದಿಗೆ ಬಾಳಲು ಆರೋಗ್ಯ ಸರಿಯಿಲ್ಲ ಎಂಬ ನೆಪ ಒಡ್ಡಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಅಲ್ಲಿ ಇತರರಿಂದ ಮೊಬೈಲ್ ಪಡೆದು ತನ್ನ ಮೊದಲ ಪತಿಗೆ ಮಾಹಿತಿ ನೀಡಿದ್ದಾಳೆ. ಅಷ್ಟೇ ಅಲ್ಲ.. ತನ್ನ ಸಂಕಷ್ಟವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಜೊತೆಗೆ ಬಾಲಿವುಡ್ ಸ್ಟಾರ್ ನಟ ಸೋನುಸೂದ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಘಟನೆ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಸದ್ಯ ಮಹಿಳೆಯ ಆರೋಪದ ಮೇರೆಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ಮಹಿಳೆಯನ್ನು ಕಂಕೇರ್‌ನ ಸಖಿ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ