AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತನ್ನ ಪತಿಗೆ ರಾಖಿ ಕಟ್ಟಿ ಅಣ್ಣ-ತಂಗಿಯ ಬಾಂಧವ್ಯ ಬೆಸೆದ ಪತ್ನಿ; ಏನಿದು ಘಟನೆ?

ಹಿರಿಯರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾದ ಪತಿಗೆ ತನ್ನ ಮೊದಲ ರಾತ್ರಿಯಂದೇ ಪತ್ನಿ ರಾಖಿ ಕಟ್ಟಿದ್ದಾಳೆ. ಇದಲ್ಲದೇ ತನ್ನನ್ನು ತನ್ನ ಮೊದಲ ಪತಿಯೊಂದಿಗೆ ಜೀವನ ನಡೆಸಲು ಬಿಡಿ ಎಂದು ಬೇಡಿಕೊಂಡಿದ್ದಾಳೆ.

ತನ್ನ ಪತಿಗೆ ರಾಖಿ ಕಟ್ಟಿ ಅಣ್ಣ-ತಂಗಿಯ ಬಾಂಧವ್ಯ ಬೆಸೆದ ಪತ್ನಿ; ಏನಿದು ಘಟನೆ?
ಪತಿಗೆ ರಾಖಿ ಕಟ್ಟಿದ ಪತ್ನಿImage Credit source: Giftalove
ಅಕ್ಷತಾ ವರ್ಕಾಡಿ
|

Updated on: Jun 13, 2023 | 11:34 AM

Share

ರಾಜಸ್ಥಾನದ ಜೋಧಪುರದಲ್ಲಿ ಕುತೂಹಲಕಾರಿ ಘಟನೆಯೊಂದು ನಡೆದಿದೆ. ಹಿರಿಯರ ಸಮ್ಮುಖದಲ್ಲಿ ಸಾಂಪ್ರದಾಯಿಕವಾಗಿ ವಿವಾಹವಾದ ಪತಿಗೆ  ಮೊದಲ ರಾತ್ರಿಯಂದೇ ಪತ್ನಿ ರಾಖಿ ಕಟ್ಟಿದ್ದಾಳೆ. ಇದಲ್ಲದೇ ತನ್ನನ್ನು ತನ್ನ ಮೊದಲ ಪತಿಯೊಂದಿಗೆ ಜೀವನ ನಡೆಸಲು ಬಿಡಿ ಎಂದು ಬೇಡಿಕೊಂಡಿದ್ದಾಳೆ. ಇದೀಗ ಈ ಪ್ರಕರಣ ರಾಜಸ್ಥಾನದಲ್ಲಿ ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲೂ ಸಂಚಲನ ಮೂಡಿಸಿದೆ.

ರಾಜಸ್ಥಾನದ ಬಲೇಸರ್ ಮೂಲದ ತರುಣಾ ಶರ್ಮಾ ಎಂಬ ಯುವತಿ ತನ್ನ ಬಾಲ್ಯದ ಗೆಳೆಯ ಸುರೇಂದ್ರ ಸಂಖ್ಲಾ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಆದರೆ, ಹುಡುಗಿಯ ಮನೆಯವರು ಹುಡುಗ ಬೇರೆ ಜಾತಿ ಎಂಬ ಕಾರಣಕ್ಕೆ ಮದುವೆಗೆ ನಿರಾಕರಿಸಿದ್ದಾರೆ. ಇದಾದ ಕೆಲವೇ ದಿನಗಳ ಬಳಿಕ ತರುಣಾ ಮನೆಯವರು ಆಕೆಯ ಗಂಡನಿಂದ ಬೇರ್ಪಡಿಸಿ, ಛತ್ತೀಸ್‌ಗಢದ ಜಿತೇಂದ್ರ ಜೋಶಿ ಎಂಬಾತನೊಂದಿಗೆ ಎರಡನೇ ಮದುವೆ ಮಾಡಿಸಿದ್ದಾರೆ. ಬಲವಂತವಾಗಿ ಮದುವೆ ಮಾಡಿಸಿರುವುದರಿಂದ ಮೊದಲ ರಾತ್ರಿಯಂದೇ ತನ್ನ ಎರಡನೇ ಪತಿಯ ಕೈಗೆ ರಾಖಿ ಕಟ್ಟಿ ತನ್ನ ಮೊದಲ ಪತಿಯೊಂದಿಗೆ ಕಳುಹಿಸುವಂತೆ ಬೇಡಿಕೊಂಡಿದ್ದಾಳೆ.

ಇದನ್ನೂ ಓದಿ: ಫೇಸ್‌ಬುಕ್‌ ಲವ್​​​ ಸ್ಟೋರಿ ವಿವಾಹಿತ ಮಹಿಳೆಯ ಮತಾಂತರ; ವ್ಯಕ್ತಿಯ ಬಂಧನ

ಆದರೆ, ಇದನ್ನು ಲೆಕ್ಕಿಸದೆ ಜಿತೇಂದ್ರ(ಎರಡನೇ ಪತಿ) ಆಕೆಗೆ ಕಿರುಕುಳ ನೀಡಿದ್ದಾನೆ. ಮೊದಲ ಪತಿಯೊಂದಿಗೆ ಬಾಳಲು ಆರೋಗ್ಯ ಸರಿಯಿಲ್ಲ ಎಂಬ ನೆಪ ಒಡ್ಡಿ ಆಸ್ಪತ್ರೆಗೆ ದಾಖಲಾಗಿದ್ದಾಳೆ. ಅಲ್ಲಿ ಇತರರಿಂದ ಮೊಬೈಲ್ ಪಡೆದು ತನ್ನ ಮೊದಲ ಪತಿಗೆ ಮಾಹಿತಿ ನೀಡಿದ್ದಾಳೆ. ಅಷ್ಟೇ ಅಲ್ಲ.. ತನ್ನ ಸಂಕಷ್ಟವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾಳೆ. ಜೊತೆಗೆ ಬಾಲಿವುಡ್ ಸ್ಟಾರ್ ನಟ ಸೋನುಸೂದ್ ಅವರನ್ನು ಟ್ಯಾಗ್ ಮಾಡಿದ್ದಾರೆ. ಈ ಘಟನೆ ಎಲ್ಲೆಡೆ ಭಾರೀ ವೈರಲ್​ ಆಗಿದೆ. ಸದ್ಯ ಮಹಿಳೆಯ ಆರೋಪದ ಮೇರೆಗೆ ಪೊಲೀಸರು ಕೇಸು ದಾಖಲಿಸಿಕೊಂಡಿದ್ದು, ಮಹಿಳೆಯನ್ನು ಕಂಕೇರ್‌ನ ಸಖಿ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ವೈರಲ್​​ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಮೊದಲ ಸಂಪುಟ ಸಭೆಯಲ್ಲೇ ಡಿಕೆ ಶಿವಕುಮಾರ್​​ ಗುಡ್​ ನ್ಯೂಸ್: 6 ಕೊಡುಗೆ ಘೋಷಣೆ
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ