AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ನಿಮಗಿದು ಗೊತ್ತಾ?; ಈ ಕಾಳಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೂಡಲ್ಸ್ ನೀಡಲಾಗುತ್ತೆ!

Chinese Kali Temple | ಭಾರತ ಮತ್ತು ಚೀನೀಯರ ಸಂಸ್ಕೃತಿಯ ಮಿಶ್ರಣ ಇರುವುದರಿಂದ ಈ ಕಾಳಿ ದೇವಸ್ಥಾನದಲ್ಲಿ ಪ್ರಸಾದವಾಗಿ ಫ್ರೈಡ್ ರೈಸ್ ಹಾಗೂ ನೂಡಲ್ಸ್​ ಕೂಡ ನೀಡಲಾಗುತ್ತದೆ.

Viral News: ನಿಮಗಿದು ಗೊತ್ತಾ?; ಈ ಕಾಳಿ ದೇವಸ್ಥಾನದಲ್ಲಿ ಪ್ರಸಾದವಾಗಿ ನೂಡಲ್ಸ್ ನೀಡಲಾಗುತ್ತೆ!
ಕೊಲ್ಕತ್ತಾದಲ್ಲಿರುವ ಕಾಳಿ ದೇವಸ್ಥಾನ
TV9 Web
| Edited By: |

Updated on: Aug 27, 2021 | 9:48 PM

Share

ಕೊಲ್ಕತ್ತಾ: ಸಾಮಾನ್ಯವಾಗಿ ದೇವಸ್ಥಾನಗಳಲ್ಲಿ ಪ್ರಸಾದವಾಗಿ ಪೊಂಗಲ್, ಪುಳಿಯೋಗರೆ, ಉಸಲಿ, ಪಂಚಕಜ್ಜಾಯ ಕೊಡುವುದು ರೂಢಿ. ಕೆಲವು ದೇವಸ್ಥಾನಗಳ ಪ್ರಸಾದವನ್ನು ಸವಿಯಲೆಂದೇ ಹಲವರು ದೇಗುಲಗಳಿಗೆ ಹೋಗುವುದೂ ಉಂಟು. ಆದರೆ, ಈ ದೇವಸ್ಥಾನದಲ್ಲಿ ಪ್ರಸಾದವಾಗಿ ನೂಡಲ್ಸ್ ನೀಡಲಾಗುತ್ತದೆ! ಇಲ್ಲಿ ಭಾರತ ಮತ್ತು ಚೀನೀಯರ ಸಂಸ್ಕೃತಿಯ ಮಿಶ್ರಣ ಇರುವುದರಿಂದ ಪ್ರಸಾದವಾಗಿ ಅನ್ನದ ಜೊತೆಗೆ ನೂಡಲ್ಸ್​ ಕೂಡ ನೀಡಲಾಗುತ್ತದೆ.

ಕೊಲ್ಕತ್ತಾದ ಕಾಳಿ ದೇವಸ್ಥಾನದಲ್ಲಿ ನೂಡಲ್ಸ್, ಫ್ರೈಡ್​ ರೈಸ್ ಮತ್ತು ಚಾಪ್ಸ್ ಸೂಯಿಯನ್ನು ಪ್ರಸಾದ ರೂಪದಲ್ಲಿ ನೀಡುತ್ತಾರಂತೆ. ಪಶ್ಚಿಮ ಬಂಗಾಳದಲ್ಲಿರುವ ಅನೇಕ ದೇವಸ್ಥಾನಗಳಲ್ಲಿ ಈ ರೀತಿಯ ವಿಭಿನ್ನ ರೀತಿಯ ಪ್ರಸಾದವನ್ನು ನೀಡಲಾಗುತ್ತದೆ. ಕೊಲ್ಕತ್ತಾದ ಚೈನೀಸ್ ಕಾಳಿ ದೇವಸ್ಥಾನದಲ್ಲಿ ದಿನಕ್ಕೆ ಎರಡು ಬಾರಿ ನೂಡಲ್ಸ್​ ಅನ್ನು ಪ್ರಸಾದವಾಗಿ ನೀಡಲಾಗುತ್ತದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ನಡೆಸಲಾಗುವ ವಿಶೇಷ ಪೂಜೆಯಲ್ಲಿ ನೂಡಲ್ಸ್​ ಅನ್ನು ಪ್ರಸಾದವಾಗಿ ನೀಡಲಾಗುತ್ತದೆ. ಈ ಬಗ್ಗೆ www.tourmyindia.com ವೆಬ್​ಸೈಟ್​ನಲ್ಲಿ ಮಾಹಿತಿ ಇದೆ. ಈ ಕಾಳಿ ದೇವಸ್ಥಾನಕ್ಕೆ 60 ವರ್ಷಗಳ ಇತಿಹಾಸವಿದೆ. ಈ ದೇವಸ್ಥಾನ ಹಿಂದೂ ಮತ್ತು ಚೈನೀಸ್ ಸಮುದಾಯದ ಐಕ್ಯತೆಗೆ ಉತ್ತಮ ಉದಾಹರಣೆಯಾಗಿದೆ.

ಕೊಲ್ಕತ್ತಾದ ಟಂಗ್ರಾ ಎಂಬ ಪ್ರದೇಶದಲ್ಲಿ ಈ ಕಾಳಿ ಮಂದಿರವಿದೆ. ಈ ಪ್ರದೇಶದಲ್ಲಿ ಟಿಬೇಟಿಯನ್ ಮತ್ತು ಏಷ್ಯಾದ ಸಂಸ್ಕೃತಿಯ ಮಿಶ್ರಣವಿದೆ. ಹೀಗಾಗಿ, ಇಲ್ಲಿನ ಕಾಳಿ ದೇವಸ್ಥಾನದಲ್ಲೂ ಭಾರತ ಮತ್ತು ಚೀನಾದ ಸಂಸ್ಕೃತಿಯ ಮಿಶ್ರಣವಿದೆ. ಟಂಗ್ರಾ ಪ್ರದೇಶದಲ್ಲಿರುವ ಈ ಚೈನೀಸ್ ಕಾಳಿ ದೇವಸ್ಥಾನವನ್ನು ಬಂಗಾಳಿಗಳು ಮತ್ತು ಚೈನೀಸ್ ಸಮುದಾಯವರ ಸಹಕಾರದಿಂದ ಕಟ್ಟಲಾಗಿದೆ.

ಈ ಕಾಳಿ ಮಂದಿರ ಬೆಳಗ್ಗೆ ಮತ್ತು ಸಂಜೆ ಮಾತ್ರ ತೆರೆದಿರುತ್ತದೆ. ಸೋಮವಾರದಿಂದ ಭಾನುವಾರದವರೆಗೂ ಇಲ್ಲಿ ಭಕ್ತರು ಕಾಳಿ ಮಾತೆಯ ದರ್ಶನ ಪಡೆಯಬಹುದು. ಕೊರೊನಾದಿಂದಾಗಿ ಈಗ ಹೊರ ರಾಜ್ಯದ ಪ್ರಯಾಣಿಕರು ಇಲ್ಲಿ ಬರಲು ಕೊವಿಡ್ ನೆಗೆಟಿವ್ ವರದು ನೀಡಬೇಕಾದುದು ಕಡ್ಡಾಯ.

ಇದನ್ನೂ ಓದಿ: Viral News: ಮನೆ ಖರೀದಿಸಲು ಯೋಚಿಸುತ್ತಿದ್ದೀರಾ?; ಈ ಊರಿನಲ್ಲಿ 87 ರೂ.ಗೆ ಮನೆ ಮಾರಾಟಕ್ಕಿದೆ!

Viral News | ಬರೋಬ್ಬರಿ 1 ಕೋಟಿಗೆ ಹರಾಜಾಯ್ತು ವಿಸ್ಕಿ ಬಾಟಲ್; ಇದರ ವಿಶೇಷತೆ ಕೇಳಿದರೆ ಕಿಕ್ ಏರುತ್ತೆ!

(This Chinese Kali Temple In Kolkata Serves Noodles As Prasad)

Follow Us
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​