ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆದ ಇಬ್ಬರು ಯುವಕರು

ನೋಯ್ಡಾದ ಕಾರ್ ಶೋರೂಂಗೆ ಇಬ್ಬರು ವ್ಯಕ್ತಿಗಳು ಗುರುವಾರ ಭೇಟಿ ನೀಡಿದ್ದು,ಎಸ್ ಯುವಿ ಖರೀದಿಸುವುದಾಗಿ ಹೇಳಿದ್ದರು. ಆದರಂತೆ ಮಾಲೀಕ ತನ್ನ ಸಿಬ್ಬಂದಿಯೊಬ್ಬನ ಜೊತೆ ಕಾರನ್ನು ಟೆಸ್ಟ್ ಡ್ರೈವ್‌ಗೆ ಕಳುಹಿಸಿದ್ದಾನೆ. ಆದರೆ ಸ್ವಲ್ಪ ದೂರ ಹೋದ ಈ ಕಿರಾತಕರು ಶೋರೂಂ ಉದ್ಯೋಗಿಯನ್ನು ಕಾರಿನಿಂದ ಹೊರಗೆ ತಳ್ಳಿ ಕಾರಿನೊಂದಿಗೆ ಎಸ್ಕೇಪ್ ಆಗಿದ್ದಾರೆ.

ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆದ ಇಬ್ಬರು ಯುವಕರು
Follow us
|

Updated on: Sep 27, 2024 | 10:15 AM

ಉತ್ತರ ಪ್ರದೇಶ: ಕಾರು ಖರೀದಿಸುವ ಮುನ್ನ ಟೆಸ್ಟ್‌ ಡ್ರೈವ್‌ ಅನ್ನೊದು ಬಹಳ ಮುಖ್ಯವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆಗುವ ಕಿರಾತಕರ ಸಂಖ್ಯೆ ಜಾಸ್ತಿಯಾಗಿದೆ. ಇದೀಗ ಅಂತದ್ದೇ ಘಟನೆ ಗುರುವಾರ (ಸೆ. 26) ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಇಲ್ಲಿ ಯುವಕರಿಬ್ಬರು ಟೆಸ್ಟ್ ಡ್ರೈವ್​​ಗೆಂದು ಕೇಳಿ ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಎಷ್ಟೇ ಹೊತ್ತಾದರೂ ಬಾರದೇ ಇದ್ದಿದ್ದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರೇಟರ್ ನೋಯ್ಡಾದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂಗೆ ಇಬ್ಬರು ವ್ಯಕ್ತಿಗಳು ಗುರುವಾರ ಭೇಟಿ ನೀಡಿದ್ದರು. ಇಡೀ ಶೋರೂಮ್ ಪರಿಶೀಲಿಸಿ ಎಸ್ ಯುವಿ ಖರೀದಿಸುವುದಾಗಿ ಹೇಳಿದ್ದರು. ಆದರಂತೆ ಮಾಲೀಕನ ಬಳಿ ಟೆಸ್ಟ್ ಡ್ರೈವ್ ಕೇಳಿದ್ದರು. ಅವರು ತಮ್ಮ ಸಿಬ್ಬಂದಿಯನ್ನು ಯಾರನ್ನಾದರೂ ಕರೆದುಕೊಂಡು ಹೋಗುವಂತೆ ಹೇಳಿ ಕಾರನ್ನು ಟೆಸ್ಟ್ ಡ್ರೈವ್‌ಗೆ ನೀಡಿದ್ದರು.

ಆದರೆ ಈ ಕಿರಾತಕರು ಸ್ವಲ್ಪ ದೂರ ಹೋದ ನಂತರ ಶೋರೂಂ ಉದ್ಯೋಗಿಯನ್ನು ಕಾರಿನಿಂದ ಕೆಳಕ್ಕೆ ತಳ್ಳಿ ಇಬ್ಬರು ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಕಾರು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಶೋರೂಂನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಕಾರನ್ನು ಹೊರಗೆ ತೆಗೆದುಕೊಂಡು ಹೋದವರು ವಾಪಸ್ ಬರದ ಕಾರಣ ಶೋರೂಂ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Mysterious Necklace: ಹರಾಜಾಗಲಿದೆ ಭಾರತೀಯ ನಂಟು ಹೊಂದಿರುವ 500 ವಜ್ರಗಳ ಈ ನಿಗೂಢ ನೆಕ್ಲೇಸ್

ಮಾಹಿತಿ ಪಡೆದ ನಾಲೆಡ್ಜ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೆ, ಕಾರು ಮಾಲೀಕರು ಮತ್ತು ಖರೀದಿಸಲು ಬಂದವರ ನಡುವೆ ಏನಾದರೂ ವಿವಾದ ಉಂಟಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಾರನ್ನು ಹಸ್ತಾಂತರಿಸುವ ಮುನ್ನ ಖರೀದಿದಾರರ ವಿವರ ತನಗೆ ತಿಳಿದಿಲ್ಲ ಎಂದು ಮಾಲೀಕ ಹೇಳಿದ್ದರಿಂದ ದಾಳಿಕೋರರ ಗುರುತು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
ಗರುಡ ಪುರಾಣ ಮನೆಯಲ್ಲಿ ಇಟ್ಟುಕೊಳ್ಳಬಹುದಾ? ಇಲ್ಲಿದೆ ಉತ್ತರ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ಶುಕ್ರವಾರದ ಗ್ರಹಗಳ ಸಂಚಾರ, ರಾಶಿ ಭವಿಷ್ಯ ತಿಳಿಯಿರಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಅಪ್ಪು ಅಭಿಮಾನಕ್ಕೆ ಫ್ಯಾನ್ಸ್ ಕಟ್ಟಿದ ದೇವಸ್ಥಾನ ಉದ್ಘಾಟಿಸಿದ ಅಶ್ವಿನಿ
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಶ್ರೀಗಳ ಉಪಟಳ ಹೆಚ್ಚಳ: ತಿರುಪತಿ ಲಡ್ಡು ಬಗ್ಗೆ ಕೋಡಿಶ್ರೀ ಮಾತು
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಕ್ಲಾಸ್​ರೂಂನಲ್ಲೇ ಶಿಕ್ಷಕಿಗೆ ಬೆದರಿಕೆ ಹಾಕಿ, ಉಗುಳಿದ ಎಂಬಿಎ ವಿದ್ಯಾರ್ಥಿ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಸಿದ್ದರಾಮಯ್ಯಗೆ ಮುಡಾ ಸಂಕಷ್ಟ: ಈ ಹಿಂದೆ ಕೋಡಿಶ್ರೀ ನುಡಿದಿದ್ದ ಭವಿಷ್ಯ ನಿಜ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಕಂಠಪೂರ್ತಿ ಕುಡಿದು ಅಪ್ಪನ ತಲೆಗೆ ಇಟ್ಟಿಗೆಯಿಂದ ಹೊಡೆದು ಕೊಂದ ಮಗ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಬೆಂಗಳೂರಿನ ‘ಏರಿಯಾನ್ ಟೆಕ್ನಾಲಜಿ ಕಂಪನಿ’ಯಲ್ಲಿ ಅಗ್ನಿ ಅವಘಡ;ತಪ್ಪಿದ ಅನಾಹುತ
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ಅಮ್ಮ-ಮಗು ಮೇಲೆ ಬೀದಿ ನಾಯಿಗಳ ದಾಳಿ; ಶಾಕಿಂಗ್ ವಿಡಿಯೋ ವೈರಲ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್
ನ್ಯಾಯಾಂಗ ನಿಂದನೆ ತೂಗುಗತ್ತಿ ಬೆನ್ನಲ್ಲೇ ಎಚ್ಚೆತ್ತುಕೊಂಡ ಜಮೀರ್