AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆದ ಇಬ್ಬರು ಯುವಕರು

ನೋಯ್ಡಾದ ಕಾರ್ ಶೋರೂಂಗೆ ಇಬ್ಬರು ವ್ಯಕ್ತಿಗಳು ಗುರುವಾರ ಭೇಟಿ ನೀಡಿದ್ದು,ಎಸ್ ಯುವಿ ಖರೀದಿಸುವುದಾಗಿ ಹೇಳಿದ್ದರು. ಆದರಂತೆ ಮಾಲೀಕ ತನ್ನ ಸಿಬ್ಬಂದಿಯೊಬ್ಬನ ಜೊತೆ ಕಾರನ್ನು ಟೆಸ್ಟ್ ಡ್ರೈವ್‌ಗೆ ಕಳುಹಿಸಿದ್ದಾನೆ. ಆದರೆ ಸ್ವಲ್ಪ ದೂರ ಹೋದ ಈ ಕಿರಾತಕರು ಶೋರೂಂ ಉದ್ಯೋಗಿಯನ್ನು ಕಾರಿನಿಂದ ಹೊರಗೆ ತಳ್ಳಿ ಕಾರಿನೊಂದಿಗೆ ಎಸ್ಕೇಪ್ ಆಗಿದ್ದಾರೆ.

ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆದ ಇಬ್ಬರು ಯುವಕರು
ಅಕ್ಷತಾ ವರ್ಕಾಡಿ
|

Updated on: Sep 27, 2024 | 10:15 AM

Share

ಉತ್ತರ ಪ್ರದೇಶ: ಕಾರು ಖರೀದಿಸುವ ಮುನ್ನ ಟೆಸ್ಟ್‌ ಡ್ರೈವ್‌ ಅನ್ನೊದು ಬಹಳ ಮುಖ್ಯವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆಗುವ ಕಿರಾತಕರ ಸಂಖ್ಯೆ ಜಾಸ್ತಿಯಾಗಿದೆ. ಇದೀಗ ಅಂತದ್ದೇ ಘಟನೆ ಗುರುವಾರ (ಸೆ. 26) ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಇಲ್ಲಿ ಯುವಕರಿಬ್ಬರು ಟೆಸ್ಟ್ ಡ್ರೈವ್​​ಗೆಂದು ಕೇಳಿ ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಎಷ್ಟೇ ಹೊತ್ತಾದರೂ ಬಾರದೇ ಇದ್ದಿದ್ದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರೇಟರ್ ನೋಯ್ಡಾದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂಗೆ ಇಬ್ಬರು ವ್ಯಕ್ತಿಗಳು ಗುರುವಾರ ಭೇಟಿ ನೀಡಿದ್ದರು. ಇಡೀ ಶೋರೂಮ್ ಪರಿಶೀಲಿಸಿ ಎಸ್ ಯುವಿ ಖರೀದಿಸುವುದಾಗಿ ಹೇಳಿದ್ದರು. ಆದರಂತೆ ಮಾಲೀಕನ ಬಳಿ ಟೆಸ್ಟ್ ಡ್ರೈವ್ ಕೇಳಿದ್ದರು. ಅವರು ತಮ್ಮ ಸಿಬ್ಬಂದಿಯನ್ನು ಯಾರನ್ನಾದರೂ ಕರೆದುಕೊಂಡು ಹೋಗುವಂತೆ ಹೇಳಿ ಕಾರನ್ನು ಟೆಸ್ಟ್ ಡ್ರೈವ್‌ಗೆ ನೀಡಿದ್ದರು.

ಆದರೆ ಈ ಕಿರಾತಕರು ಸ್ವಲ್ಪ ದೂರ ಹೋದ ನಂತರ ಶೋರೂಂ ಉದ್ಯೋಗಿಯನ್ನು ಕಾರಿನಿಂದ ಕೆಳಕ್ಕೆ ತಳ್ಳಿ ಇಬ್ಬರು ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಕಾರು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಶೋರೂಂನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಕಾರನ್ನು ಹೊರಗೆ ತೆಗೆದುಕೊಂಡು ಹೋದವರು ವಾಪಸ್ ಬರದ ಕಾರಣ ಶೋರೂಂ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Mysterious Necklace: ಹರಾಜಾಗಲಿದೆ ಭಾರತೀಯ ನಂಟು ಹೊಂದಿರುವ 500 ವಜ್ರಗಳ ಈ ನಿಗೂಢ ನೆಕ್ಲೇಸ್

ಮಾಹಿತಿ ಪಡೆದ ನಾಲೆಡ್ಜ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೆ, ಕಾರು ಮಾಲೀಕರು ಮತ್ತು ಖರೀದಿಸಲು ಬಂದವರ ನಡುವೆ ಏನಾದರೂ ವಿವಾದ ಉಂಟಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಾರನ್ನು ಹಸ್ತಾಂತರಿಸುವ ಮುನ್ನ ಖರೀದಿದಾರರ ವಿವರ ತನಗೆ ತಿಳಿದಿಲ್ಲ ಎಂದು ಮಾಲೀಕ ಹೇಳಿದ್ದರಿಂದ ದಾಳಿಕೋರರ ಗುರುತು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ