AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆದ ಇಬ್ಬರು ಯುವಕರು

ನೋಯ್ಡಾದ ಕಾರ್ ಶೋರೂಂಗೆ ಇಬ್ಬರು ವ್ಯಕ್ತಿಗಳು ಗುರುವಾರ ಭೇಟಿ ನೀಡಿದ್ದು,ಎಸ್ ಯುವಿ ಖರೀದಿಸುವುದಾಗಿ ಹೇಳಿದ್ದರು. ಆದರಂತೆ ಮಾಲೀಕ ತನ್ನ ಸಿಬ್ಬಂದಿಯೊಬ್ಬನ ಜೊತೆ ಕಾರನ್ನು ಟೆಸ್ಟ್ ಡ್ರೈವ್‌ಗೆ ಕಳುಹಿಸಿದ್ದಾನೆ. ಆದರೆ ಸ್ವಲ್ಪ ದೂರ ಹೋದ ಈ ಕಿರಾತಕರು ಶೋರೂಂ ಉದ್ಯೋಗಿಯನ್ನು ಕಾರಿನಿಂದ ಹೊರಗೆ ತಳ್ಳಿ ಕಾರಿನೊಂದಿಗೆ ಎಸ್ಕೇಪ್ ಆಗಿದ್ದಾರೆ.

ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆದ ಇಬ್ಬರು ಯುವಕರು
ಅಕ್ಷತಾ ವರ್ಕಾಡಿ
|

Updated on: Sep 27, 2024 | 10:15 AM

Share

ಉತ್ತರ ಪ್ರದೇಶ: ಕಾರು ಖರೀದಿಸುವ ಮುನ್ನ ಟೆಸ್ಟ್‌ ಡ್ರೈವ್‌ ಅನ್ನೊದು ಬಹಳ ಮುಖ್ಯವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆಗುವ ಕಿರಾತಕರ ಸಂಖ್ಯೆ ಜಾಸ್ತಿಯಾಗಿದೆ. ಇದೀಗ ಅಂತದ್ದೇ ಘಟನೆ ಗುರುವಾರ (ಸೆ. 26) ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಇಲ್ಲಿ ಯುವಕರಿಬ್ಬರು ಟೆಸ್ಟ್ ಡ್ರೈವ್​​ಗೆಂದು ಕೇಳಿ ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಎಷ್ಟೇ ಹೊತ್ತಾದರೂ ಬಾರದೇ ಇದ್ದಿದ್ದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರೇಟರ್ ನೋಯ್ಡಾದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂಗೆ ಇಬ್ಬರು ವ್ಯಕ್ತಿಗಳು ಗುರುವಾರ ಭೇಟಿ ನೀಡಿದ್ದರು. ಇಡೀ ಶೋರೂಮ್ ಪರಿಶೀಲಿಸಿ ಎಸ್ ಯುವಿ ಖರೀದಿಸುವುದಾಗಿ ಹೇಳಿದ್ದರು. ಆದರಂತೆ ಮಾಲೀಕನ ಬಳಿ ಟೆಸ್ಟ್ ಡ್ರೈವ್ ಕೇಳಿದ್ದರು. ಅವರು ತಮ್ಮ ಸಿಬ್ಬಂದಿಯನ್ನು ಯಾರನ್ನಾದರೂ ಕರೆದುಕೊಂಡು ಹೋಗುವಂತೆ ಹೇಳಿ ಕಾರನ್ನು ಟೆಸ್ಟ್ ಡ್ರೈವ್‌ಗೆ ನೀಡಿದ್ದರು.

ಆದರೆ ಈ ಕಿರಾತಕರು ಸ್ವಲ್ಪ ದೂರ ಹೋದ ನಂತರ ಶೋರೂಂ ಉದ್ಯೋಗಿಯನ್ನು ಕಾರಿನಿಂದ ಕೆಳಕ್ಕೆ ತಳ್ಳಿ ಇಬ್ಬರು ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಕಾರು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಶೋರೂಂನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಕಾರನ್ನು ಹೊರಗೆ ತೆಗೆದುಕೊಂಡು ಹೋದವರು ವಾಪಸ್ ಬರದ ಕಾರಣ ಶೋರೂಂ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Mysterious Necklace: ಹರಾಜಾಗಲಿದೆ ಭಾರತೀಯ ನಂಟು ಹೊಂದಿರುವ 500 ವಜ್ರಗಳ ಈ ನಿಗೂಢ ನೆಕ್ಲೇಸ್

ಮಾಹಿತಿ ಪಡೆದ ನಾಲೆಡ್ಜ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೆ, ಕಾರು ಮಾಲೀಕರು ಮತ್ತು ಖರೀದಿಸಲು ಬಂದವರ ನಡುವೆ ಏನಾದರೂ ವಿವಾದ ಉಂಟಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಾರನ್ನು ಹಸ್ತಾಂತರಿಸುವ ಮುನ್ನ ಖರೀದಿದಾರರ ವಿವರ ತನಗೆ ತಿಳಿದಿಲ್ಲ ಎಂದು ಮಾಲೀಕ ಹೇಳಿದ್ದರಿಂದ ದಾಳಿಕೋರರ ಗುರುತು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!