AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆದ ಇಬ್ಬರು ಯುವಕರು

ನೋಯ್ಡಾದ ಕಾರ್ ಶೋರೂಂಗೆ ಇಬ್ಬರು ವ್ಯಕ್ತಿಗಳು ಗುರುವಾರ ಭೇಟಿ ನೀಡಿದ್ದು,ಎಸ್ ಯುವಿ ಖರೀದಿಸುವುದಾಗಿ ಹೇಳಿದ್ದರು. ಆದರಂತೆ ಮಾಲೀಕ ತನ್ನ ಸಿಬ್ಬಂದಿಯೊಬ್ಬನ ಜೊತೆ ಕಾರನ್ನು ಟೆಸ್ಟ್ ಡ್ರೈವ್‌ಗೆ ಕಳುಹಿಸಿದ್ದಾನೆ. ಆದರೆ ಸ್ವಲ್ಪ ದೂರ ಹೋದ ಈ ಕಿರಾತಕರು ಶೋರೂಂ ಉದ್ಯೋಗಿಯನ್ನು ಕಾರಿನಿಂದ ಹೊರಗೆ ತಳ್ಳಿ ಕಾರಿನೊಂದಿಗೆ ಎಸ್ಕೇಪ್ ಆಗಿದ್ದಾರೆ.

ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆದ ಇಬ್ಬರು ಯುವಕರು
ಅಕ್ಷತಾ ವರ್ಕಾಡಿ
|

Updated on: Sep 27, 2024 | 10:15 AM

Share

ಉತ್ತರ ಪ್ರದೇಶ: ಕಾರು ಖರೀದಿಸುವ ಮುನ್ನ ಟೆಸ್ಟ್‌ ಡ್ರೈವ್‌ ಅನ್ನೊದು ಬಹಳ ಮುಖ್ಯವಾಗಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಟೆಸ್ಟ್ ಡ್ರೈವ್ ಹೆಸರಿನಲ್ಲಿ ಕಾರಿನೊಂದಿಗೆ ಎಸ್ಕೇಪ್ ಆಗುವ ಕಿರಾತಕರ ಸಂಖ್ಯೆ ಜಾಸ್ತಿಯಾಗಿದೆ. ಇದೀಗ ಅಂತದ್ದೇ ಘಟನೆ ಗುರುವಾರ (ಸೆ. 26) ಉತ್ತರ ಪ್ರದೇಶದ ನೋಯ್ಡಾದಲ್ಲಿ ನಡೆದಿದೆ. ಇಲ್ಲಿ ಯುವಕರಿಬ್ಬರು ಟೆಸ್ಟ್ ಡ್ರೈವ್​​ಗೆಂದು ಕೇಳಿ ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಎಷ್ಟೇ ಹೊತ್ತಾದರೂ ಬಾರದೇ ಇದ್ದಿದ್ದನ್ನು ಕಂಡು ಪೊಲೀಸರಿಗೆ ದೂರು ನೀಡಿದ್ದಾರೆ.

ಗ್ರೇಟರ್ ನೋಯ್ಡಾದಲ್ಲಿರುವ ಸೆಕೆಂಡ್ ಹ್ಯಾಂಡ್ ಕಾರ್ ಶೋರೂಂಗೆ ಇಬ್ಬರು ವ್ಯಕ್ತಿಗಳು ಗುರುವಾರ ಭೇಟಿ ನೀಡಿದ್ದರು. ಇಡೀ ಶೋರೂಮ್ ಪರಿಶೀಲಿಸಿ ಎಸ್ ಯುವಿ ಖರೀದಿಸುವುದಾಗಿ ಹೇಳಿದ್ದರು. ಆದರಂತೆ ಮಾಲೀಕನ ಬಳಿ ಟೆಸ್ಟ್ ಡ್ರೈವ್ ಕೇಳಿದ್ದರು. ಅವರು ತಮ್ಮ ಸಿಬ್ಬಂದಿಯನ್ನು ಯಾರನ್ನಾದರೂ ಕರೆದುಕೊಂಡು ಹೋಗುವಂತೆ ಹೇಳಿ ಕಾರನ್ನು ಟೆಸ್ಟ್ ಡ್ರೈವ್‌ಗೆ ನೀಡಿದ್ದರು.

ಆದರೆ ಈ ಕಿರಾತಕರು ಸ್ವಲ್ಪ ದೂರ ಹೋದ ನಂತರ ಶೋರೂಂ ಉದ್ಯೋಗಿಯನ್ನು ಕಾರಿನಿಂದ ಕೆಳಕ್ಕೆ ತಳ್ಳಿ ಇಬ್ಬರು ಕಾರಿನೊಂದಿಗೆ ಪರಾರಿಯಾಗಿದ್ದಾರೆ. ಕಾರು ತೆಗೆದುಕೊಂಡು ಹೋಗುತ್ತಿರುವ ದೃಶ್ಯಗಳು ಶೋರೂಂನಲ್ಲಿರುವ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿವೆ. ಕಾರನ್ನು ಹೊರಗೆ ತೆಗೆದುಕೊಂಡು ಹೋದವರು ವಾಪಸ್ ಬರದ ಕಾರಣ ಶೋರೂಂ ಮಾಲೀಕರು ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: Mysterious Necklace: ಹರಾಜಾಗಲಿದೆ ಭಾರತೀಯ ನಂಟು ಹೊಂದಿರುವ 500 ವಜ್ರಗಳ ಈ ನಿಗೂಢ ನೆಕ್ಲೇಸ್

ಮಾಹಿತಿ ಪಡೆದ ನಾಲೆಡ್ಜ್ ಪಾರ್ಕ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಅಲ್ಲದೆ, ಕಾರು ಮಾಲೀಕರು ಮತ್ತು ಖರೀದಿಸಲು ಬಂದವರ ನಡುವೆ ಏನಾದರೂ ವಿವಾದ ಉಂಟಾಗಿದೆಯೇ ಎಂಬ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ. ಆದರೆ, ಕಾರನ್ನು ಹಸ್ತಾಂತರಿಸುವ ಮುನ್ನ ಖರೀದಿದಾರರ ವಿವರ ತನಗೆ ತಿಳಿದಿಲ್ಲ ಎಂದು ಮಾಲೀಕ ಹೇಳಿದ್ದರಿಂದ ದಾಳಿಕೋರರ ಗುರುತು ಪತ್ತೆ ಹಚ್ಚುವುದು ಸವಾಲಾಗಿ ಪರಿಣಮಿಸಿದೆ.

ಮತ್ತಷ್ಟು ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ಪುರಸಭೆ ಮುಖ್ಯಾಧಿಕಾರಿಗೆ ಚಳಿಬಿಡಿಸಿದ ಸಂಸದ ಸುನೀಲ್​​ ಬೋಸ್: ವಿಡಿಯೋ ವೈರಲ್
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ವಿದೇಶದಲ್ಲಿ ಹವಾಲಾ ಮೂಲಕ ಪಕ್ಷಗಳಿಗೆ ಹಣ ಸಂದಾಯ ಮಾಡಿದ್ದರಾ ರಾಯ್?
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಪಕ್ಷದ ನಾಯಕನ ಜತೆಗೆ ಪತ್ನಿಯ ಅಕ್ರಮ ಸಂಬಂಧ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಸಿಜೆ ರಾಯ್ ಹೃದಯ ಸೀಳಿದ ಬುಲೆಟ್ ಹೊರ ತೆಗೆದ ಡಾಕ್ಟರ್ ಹೇಳಿದ್ದೇನು ನೋಡಿ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಹೆಚ್ಚಿತು ಯಶ್ ತಾಯಿ ನಿವೇಶನ ವ್ಯಾಜ್ಯ ಪ್ರಕರಣ; ಜೋರಾದ ವಾಗ್ವಾದ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಅನುಶ್ರೀ ಮೇಲೆ ಮಿಮಿಕ್ರಿ; ನೀವು ಹೊಟ್ಟೆ ಹುಣ್ಣಾಗುವಂತೆ ನಗೋದು ಖಚಿತ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ಕಾನ್ಫಿಡೆಂಟ್ ಗ್ರೂಪ್ ಸಿಜೆ ರಾಯ್ ಸಾವಿನ ಬಗ್ಗೆ ಎಂಡಿ ದೂರಲ್ಲಿ ಅಚ್ಚರಿಯ ಅಂಶ
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
ನಾನು ತಂದೆ ಆಗ್ತಿರೋದು ಇನ್​​​ಸ್ಟಾಗ್ರಾಮ್​​​ಗೂ ಗೊತ್ತಾಗಿದೆ: ಧನಂಜಯ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
'ಹ್ಯಾಟ್ರಿಕ್' ಹೀರೋ ಸ್ಯಾಮ್ ಕರನ್
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ
ಎಲ್ಲಾ ಲಿಂಗಾಯತರು, ಬ್ರಾಹ್ಮಣರು ಮಾಂಸ ತಿಂತಾರಾ ಎಂದು ಕೇಳೋದು ತಪ್ಪು; ಧನಂಜಯ