ಪ್ರಿಯತಮೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಪತಿರಾಯ

ಪವನ್ ಪಟೇಲ್ ಎಂಬಾತ ತನ್ನ ಮೊದಲ ಪತ್ನಿ ಜೀವಂತವಾಗಿರುವಾಗಲೇ ಆಕೆಯ ಶ್ರಾದ್ಧ ಮಾಡಿ, ಮತ್ತೊಬ್ಬಳನ್ನು ಮದುವೆಯಾಗಿದ್ದಾನೆ. ಪತ್ನಿ ತವರಿಗೆ ಹೋದಾಗ ಈ ಕೃತ್ಯ ಎಸಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ಪತ್ನಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಪವನ್ ಪರಾರಿಯಾಗಿದ್ದಾನೆ. ಈ ಆಘಾತಕಾರಿ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.

ಪ್ರಿಯತಮೆಯನ್ನು ಮದುವೆಯಾಗಲು ಮೊದಲ ಪತ್ನಿಗೆ ಶ್ರಾದ್ಧ ಮಾಡಿ ಪಿಂಡ ಬಿಟ್ಟ ಪತಿರಾಯ

Updated on: Oct 25, 2024 | 6:12 PM

ಉತ್ತರಪ್ರದೇಶ: ಪುರುಷನೊಬ್ಬ ತನ್ನ ಮೊದಲ ಪತ್ನಿ ಜೀವಂತವಾಗಿರುವಾಗಲೇ ಆಕೆಗೆ ಶ್ರಾದ್ಧ ಮಾಡಿದ್ದಾನೆ. ಬಳಿಕ ತನ್ನ ಪ್ರಿಯತಮೆಗೆ ತನ್ನ ಪತ್ನಿ ಸತ್ತಿರುವುದಾಗಿ ಹೇಳಿ ಮದುವೆಯಾಗಿದ್ದಾನೆ. ವಿಚಾರ ತಿಳಿಯುತ್ತಿದ್ದಂತೆ ಆತನ ಮೊದಲ ಪತ್ನಿ ತನ್ನ ತವರು ಮನೆಯಿಂದ ಓಡೋಡಿ ಬಂದು ತಾಳಗ್ರಾಮ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ನೀಡಿದ್ದಾನೆ. ಈ ಘಟನೆ ಉತ್ತರಪ್ರದೇಶದ ಕನೌಜ್‌ನಲ್ಲಿ ನಡೆದಿದೆ.

ಪತ್ನಿ ಬದುಕಿರುವಾಗಲೇ ಶ್ರಾದ್ಧ ಕಾರ್ಯಕ್ರಮ ಮಾಡಿರುವ ವ್ಯಕ್ತಿಯನ್ನು ಪವನ್ ಪಟೇಲ್ ಎಂದು ಗುರುತಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಇದೀಗ ಪವನ್ ಪಟೇಲ್ ಬಂಧನಕ್ಕೆ ಸಜ್ಜಾಗಿದ್ದಾರೆ. ಇತ್ತ ಪತ್ನಿ ಪೊಲೀಸ್ ಠಾಣೆ ಮೆಟ್ಟಿಲೇರುತ್ತಿದ್ದಂತೆ ಪವನ್ ಪಟೇಲ್ ನಾಪತ್ತೆಯಾಗಿದ್ದಾನೆ ಎಂದು ವರದಿಯಾಗಿದೆ.

ಇದನ್ನೂ ಓದಿ: ಈ ಊರಿನಲ್ಲಿ ಒಂದೇ ಮನೆಯ ಅಣ್ಣ-ತಮ್ಮಂದಿರು ಒಬ್ಬಳೇ ಯುವತಿಯನ್ನು ಮದುವೆಯಾಗಬೇಕು!

ಮದುವೆಯಾದ ಮೇಲೂ ಬೇರೆ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ಪವನ್ ಪಟೇಲ್,ಸಾಕಷ್ಟು ದಿನಗಳಿಂದ ಪತ್ನಿಗೆ ಚಿತ್ರಹಿಂಸೆ ನೀಡುತ್ತಿದ್ದ. ಇದಲ್ಲದೇ ಇಬ್ಬರು ಮಕ್ಕಳನ್ನು ಆಕೆಯಿಂದ ದೂರ ಮಾಡಿದ್ದ. ಇದರಿಂದ ನೊಂದಿದ್ದ ಪತ್ನಿ ತವರು ಮನೆಗೆ ಹೋಗಿದ್ದಾಳೆ. ಇದನ್ನೇ ಒಳ್ಳೆ ಸಮಯ ಎಂದುಕೊಂಡು ಆಕೆ ಬದುಕಿರುವಾಗಲೇ ಶ್ರಾದ್ಧ ಕಾರ್ಯಕ್ರಮ ಮಾಡಿ ಇನ್ನೊಬ್ಬಳನ್ನು ಮದುವೆಯಾಗಿದ್ದಾನೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us