AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಚಿರತೆಯೊಂದಿಗೆ ಸೆಣಸಾಡಿ 6 ವರ್ಷದ ಮಗಳನ್ನು ಸಾವಿನ ದವಡೆಯಿಂದ ಕಾಪಾಡಿದ ಮಹಿಳೆ!

6 ವರ್ಷದ ಬಾಲಕಿ ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಚಿರತೆ ಆಕೆಯ ಮೇಲೆ ಎರಗಿತ್ತು. ಮಗಳ ಕಿರುಚಾಟ ಕೇಳಿದ ಮಹಿಳೆ ಓಡಿ ಬಂದು ನೋಡಿದಾಗ ಮಗಳ ಮೇಲೆ ಎರಗಿದ್ದ ಚಿರತೆಯನ್ನು ನೋಡಿ ಕಂಗಾಲಾದರು.

Viral News: ಚಿರತೆಯೊಂದಿಗೆ ಸೆಣಸಾಡಿ 6 ವರ್ಷದ ಮಗಳನ್ನು ಸಾವಿನ ದವಡೆಯಿಂದ ಕಾಪಾಡಿದ ಮಹಿಳೆ!
ಚಿರತೆ
TV9 Web
| Updated By: ಸುಷ್ಮಾ ಚಕ್ರೆ|

Updated on: Feb 05, 2022 | 4:50 PM

Share

ಬಹ್ರೈಚ್: ಮಕ್ಕಳಿಗಾಗಿ ತಾಯಿ ಎಂತಹ ಸವಾಲನ್ನು ಬೇಕಾದರೂ ಎದುರಿಸುತ್ತಾಳೆ. ತನ್ನ ಜೀವವನ್ನೇ ಒತ್ತಿಯಿಟ್ಟು ಮಕ್ಕಳನ್ನು ಕಾಪಾಡಿರುವ ಅದೆಷ್ಟೋ ತಾಯಂದಿರ ಉದಾಹರಣೆಗಳು ನಮ್ಮ ಮುಂದಿವೆ. ಅದೇ ರೀತಿ ಮಹಿಳೆಯೊಬ್ಬರು ತನ್ನ ಎದುರು ಬಂದ ಚಿರತೆಯನ್ನು (Leopard) ಎದುರಿಸಿ, ತನ್ನ 6 ವರ್ಷದ ಮಗಳನ್ನು ಸಾವಿನ ದವಡೆಯಿಂದ ರಕ್ಷಿಸಿದ್ದಾರೆ. ಉತ್ತರ ಪ್ರದೇಶದ ಬಹ್ರೈಚ್ ಜಿಲ್ಲೆಯ ಖೈರಿಘಾಟ್ ಪೊಲೀಸ್ ಠಾಣೆ ವ್ಯಾಪ್ತಿಯ ಗಿರ್ದಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ತನ್ನ ತಾಯಿಯಿಂದ ರಕ್ಷಿಸಲ್ಪಟ್ಟ ಬಾಲಕಿಯ ಸ್ಥಿತಿ ಗಂಭೀರವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 

6 ವರ್ಷದ ಬಾಲಕಿ ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಚಿರತೆ ಆಕೆಯ ಮೇಲೆ ಎರಗಿತ್ತು. ಮಗಳ ಕಿರುಚಾಟ ಕೇಳಿದ ಮಹಿಳೆ ಓಡಿ ಬಂದು ನೋಡಿದಾಗ ಮಗಳ ಮೇಲೆ ಎರಗಿದ್ದ ಚಿರತೆಯನ್ನು ನೋಡಿ ಕಂಗಾಲಾದರು. ಆದರೆ, ಯೋಚಿಸುತ್ತಾ ಕೂರಲು ಸಮಯವಿರಲಿಲ್ಲ. ಏನಾದರೂ ಮಾಡಿ ಮಗಳನ್ನು ಕಾಪಾಡಲೇ ಬೇಕಿತ್ತು. ಸ್ವಲ್ಪ ತಡವಾದರೂ ಆ ಬಾಲಕಿಯನ್ನು ಚಿರತೆ ಎಳೆದುಕೊಂಡು ಹೋಗಿ ಕೊಂದು ತಿನ್ನುತ್ತಿತ್ತು. ತಕ್ಷಣ ಅಂಗಳದ ಬದಿಯಲ್ಲಿ ಬಿದ್ದಿದ್ದ ದೊಣ್ಣೆಯನ್ನು ಎತ್ತಿಕೊಂಡ ಆ ಮಹಿಳೆ ಚಿರತೆಗೆ ಅದರಿಂದ ಹೊಡೆದಿದ್ದಾರೆ. ತನ್ನ ಮೇಲಾದ ದಾಳಿಯಿಂದ ಗಲಿಬಿಲಿಗೊಂಡ ಚಿರತೆ ಮಗುವಿನ ಮೇಲಿದ್ದ ತನ್ನ ಹಿಡಿತವನ್ನು ಸಡಿಲಗೊಳಿಸಿತ್ತು. ಆ ಕೂಡಲೇ ತನ್ನ ಮಗಳನ್ನು ತನ್ನತ್ತ ಎಳೆದುಕೊಂಡ ಆ ಮಹಿಳೆ ಮನೆಯೊಳಗೆ ಓಡಿ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ.

ಆ ಮಹಿಳೆಯ ಸಮಯಪ್ರಜ್ಞೆಯಿಂದ ಮಗು ಸಾವಿನ ಅಂಚಿನಿಂದ ಪಾರಾಗಿದೆ. ಆದರೆ, ಚಿರತೆ ದಾಳಿಯಿಂದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಾಳೆ. ಈ ಘಟನೆಯ ಬಗ್ಗೆ ಮಾಹಿತಿ ತಿಳಿದ ಕೂಡಲೆ ಅರಣ್ಯ ಅಧಿಕಾರಿಗಳ ತಂಡವು ಸ್ಥಳಕ್ಕೆ ಆಗಮಿಸಿದೆ. ವನ್ಯಜೀವಿ ರಕ್ಷಕ ರಶೀದ್ ಜಮೀಲ್ ಕೂಡ ಸ್ಥಳಕ್ಕೆ ಆಗಮಿಸಿದ್ದು, ಗಾಯಗೊಂಡಿದ್ದ ಬಾಲಕಿಯನ್ನು ಶಿವಪುರ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದೊಯ್ದು ಅಲ್ಲಿಂದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಾಲಕಿಯ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗಿದೆ.

6 ವರ್ಷದ ಬಾಲಕಿ ಕಾಜಲ್ ತನ್ನ ಮನೆಯ ಅಂಗಳದಲ್ಲಿ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಯ ಮೇಲೆ ಚಿರತೆ ದಾಳಿ ನಡೆಸಿದ್ದು, ಬಹ್ರೈಚ್ ಅರಣ್ಯ ವಿಭಾಗದ ನಾನ್‌ಪಾರಾ ವ್ಯಾಪ್ತಿಯಿಂದ ಚಿರತೆ ಊರಿನೊಳಗೆ ಬಂದಿತ್ತು.

ಆ ವೇಳೆ ಕಾಜಲ್ ತಾಯಿ ರೀನಾ ದೇವಿ ಮನೆಯನ್ನು ಗುಡಿಸುತ್ತಿದ್ದರು. ಚಿರತೆ ಏಕಾಏಕಿ ಮನೆಯ ಅಂಗಳಕ್ಕೆ ನುಗ್ಗಿ ಬಾಲಕಿಯ ಮೇಲೆ ದಾಳಿ ನಡೆಸಿ ಬಾಲಕಿಯನ್ನು ಎಳೆದೊಯ್ಯಲು ಯತ್ನಿಸಿದೆ. ತಕ್ಷಣ ಮನೆಯಿಂದ ಹೊರಬಂದ ರೀನಾ ಕೋಲು ತೆಗೆದುಕೊಂಡು ಚಿರತೆಗೆ ಹೊಡೆದು, ಓಡಿಸಿದ್ದಾರೆ. ಆ ಬಾಲಕಿಯ ಮುಖ ಮತ್ತು ತಲೆಗೆ ಗಾಯಗಳಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ: Shocking News: ಪೊಲೀಸರು ತಂದ ಕೈದಿಯ ಶವ ಪೋಸ್ಟ್​ ಮಾರ್ಟಂ ವೇಳೆ ಎದ್ದು ಕುಳಿತಿತ್ತು!

Shocking News: ಮಾರ್ಗ ಮಧ್ಯೆ ಶಿಫ್ಟ್ ಮುಗಿದಿದ್ದರಿಂದ ವಿಮಾನ ಹಾರಿಸೋದಿಲ್ಲ ಎಂದ ಪೈಲಟ್; ಆಮೇಲೇನಾಯ್ತು?

ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್
ಡಿಕೆ ಶಿವಕುಮಾರ್ ಕೂಡ ಸಿಎಂ ಆಗ್ಲಿ ಅಂತ ನನ್ನಾಸೆ! ಜಮೀರ್ ಅಹ್ಮದ್