AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bihar: ಮದುವೆಗೆ ಬಂದ ವೀಡಿಯೊಗ್ರಾಫರ್, ವರನ ಅಪ್ರಾಪ್ತ ಸಹೋದರಿಯೊಂದಿಗೆ ಪರಾರಿ

ವರನ ಸಹೋದರಿ ನಾಪತ್ತೆಯಾದ ದಿನದಿಂದ ವಿಡಿಯೋಗ್ರಾಫರ್ ಕೂಡ ಕಾಣದೇ ಇದ್ದಿದ್ದರಿಂದ ಅನುಮಾನ ಹುಟ್ಟಿಕೊಂಡಿದೆ. ಬಳಿಕ ಬಾಲಕಿಯ ಸಂಬಂಧಿಕರು ಅಹಿಯಾಪುರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದಾರೆ. ವಿಡಿಯೋಗ್ರಾಫರ್ ಬಾಲಕಿಗೆ ಸುಳ್ಳು ಹೇಳಿ ಅಪಹರಿಸಿರುವುದಾಗಿ ದೂರಿನಲ್ಲಿ ದಾಖಲಿಸಲಾಗಿದೆ.

Bihar: ಮದುವೆಗೆ ಬಂದ ವೀಡಿಯೊಗ್ರಾಫರ್, ವರನ ಅಪ್ರಾಪ್ತ ಸಹೋದರಿಯೊಂದಿಗೆ ಪರಾರಿ
ವೀಡಿಯೊಗ್ರಾಫರ್, ವರನ ಅಪ್ರಾಪ್ತ ಸಹೋದರಿಯೊಂದಿಗೆ ಪರಾರಿImage Credit source: Pinterest
ಅಕ್ಷತಾ ವರ್ಕಾಡಿ
|

Updated on: Mar 13, 2024 | 4:11 PM

Share

ಮುಜಾಫರ್‌ಪುರ: ಮದುವೆಯ ಚಿತ್ರೀಕರಣಕ್ಕೆಂದು ಬಂದಿದ್ದ ವೀಡಿಯೊಗ್ರಾಫರ್ ಯುವಕ ಅಲ್ಲೇ ಮಂಟಪದಲ್ಲಿದ್ದ ವರನ ಅಪ್ರಾಪ್ತ ವಯಸ್ಸಿನ ಸಹೋದರಿಯೊಂದಿಗೆ ಓಡಿಹೋಗಿರುವ ಘಟನೆ ಬಿಹಾರದ ಮುಜಾಫರ್‌ಪುರದಲ್ಲಿ ನಡೆದಿದೆ. ಅಹಿಯಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಚಂದವಾರ ಘಾಟ್ ದಾಮೋದರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಮದುವೆ ಸಮಾರಂಭ ಮುಗಿಯುತ್ತಿದ್ದಂತೆ ವರನ ಸಹೋದರ ಎಲ್ಲೂ ಕಾಣದೇ ಇರುವ ಕಾರಣ ಗಾಬರಿಗೊಂಡ ಕುಟುಂಬಸ್ಥರು ಹುಡುಕಾಟ ನಡೆಸಿದ್ದಾರೆ. ಈ ವೇಳೆ ವಿಡಿಯೋಗ್ರಾಫರ್ ಕೂಡ ನಾಪತ್ತೆಯಾಗಿರುವುದರಿಂದ ಹೆಚ್ಚಿನ ತನಿಖೆ ನಡೆಸಿದಾಗ ವೀಡಿಯೊಗ್ರಾಫರ್ ಯುವಕ ವರನ ಅಪ್ರಾಪ್ತ ಸಹೋದರಿಯೊಂದಿಗೆ ಪರಾರಿಯಾಗಿರುವುದು ತಿಳಿದುಬಂದಿದೆ.

ಮದುವೆ ಸಮಾರಂಭದ ವಿಡಿಯೋ ಚಿತ್ರೀಕರಣಕ್ಕೆ ವರನ ಸೋದರಮಾವ ತನ್ನ ಗ್ರಾಮದಿಂದ ಛಾಯಾಗ್ರಾಹಕನನ್ನು ಕರೆತಂದಿದ್ದಾನೆ. ಮದುವೆಯ ಕೆಲಸದಲ್ಲಿ ಎಲ್ಲವೂ ಬ್ಯುಸಿಯಾಗಿರುವಾಗ ಫೋಟೋಗ್ರಾಫರ್, ವರನ ತಂಗಿಯ ಜೊತೆ ಮಾತಾಡಿದ್ದಾನೆ. ಮದುವೆ ಕಾರ್ಯಕ್ರಮ ಮುಗಿಯುತ್ತಿದ್ದಂತೆ ವೀಡಿಯೋಗ್ರಾಫರ್ ಜೊತೆ ವರನ ತಂಗಿ ಓಡಿಹೋಗಿದ್ದಾಳೆ.

ಇದನ್ನೂ ಓದಿ: ಸಂಪೂರ್ಣವಾಗಿ ಚಿನ್ನ, ವಜ್ರದಿಂದ ವಿನ್ಯಾಸಗೊಳಿಸಿದ ಬ್ಲೌಸ್‌ ತೊಟ್ಟು ಮಿಂಚಿದ ಅಂಬಾನಿಯ ಏಕೈಕ ಪುತ್ರಿ

ಎರಡು ದಿನಗಳಿಂದ ಹಲವೆಡೆ ಹುಡುಕಾಟ ನಡೆಸಿದರೂ ಬಾಲಕಿ ಪತ್ತೆಯಾಗಿಲ್ಲ. ಮತ್ತೊಂದೆಡೆ ವರನ ಸಹೋದರಿ ನಾಪತ್ತೆಯಾದ ದಿನದಿಂದ ವಿಡಿಯೋಗ್ರಾಫರ್ ಕೂಡ ಕಾಣದೇ ಇದ್ದಿದ್ದರಿಂದ ಅನುಮಾನ ಹುಟ್ಟಿಕೊಂಡಿದೆ. ಬಳಿಕ ಬಾಲಕಿಯ ಸಂಬಂಧಿಕರು ಅಹಿಯಾಪುರ ಪೊಲೀಸ್ ಠಾಣೆಯಲ್ಲಿ ಅಪಹರಣ ಪ್ರಕರಣ ದಾಖಲಿಸಿದ್ದಾರೆ. ವಿಡಿಯೋಗ್ರಾಫರ್ ಬಾಲಕಿಗೆ ಸುಳ್ಳು ಹೇಳಿ ಅಪಹರಿಸಿರುವುದಾಗಿ ದೂರಿನಲ್ಲಿ ದಾಖಲಿಸಲಾಗಿದೆ. ಬಳಿಕ ಮಾತಾನಾಡಿದ ಅಹಿಯಾಪುರ ಠಾಣೆ ಪ್ರಭಾರಿ ರೋಹನ್ ಕುಮಾರ್ “ಬಾಲಕಿ ನಾಪತ್ತೆಯಾಗಿರುವ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದೇವೆ. ಆರೋಪಿಗಳಿಗಾಗಿ ತೀವ್ರ ಶೋಧ ನಡೆಯುತ್ತಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ