AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ತನ್ನ ಬಲೆಗೆ ಬೀಳಿಸಿ 4 ಕೋಟಿ ರೂ. ದೋಚಿದ ಮಹಿಳೆ

ವರದಿಯ ಪ್ರಕಾರ, ಮಹಿಳೆ ಆರಂಭದಲ್ಲಿ ಹಣಕಾಸಿನ ತೊಂದರೆಯಿಂದಾಗಿ ಸಾಲದ ಅಗತ್ಯವಿದೆ ಎಂದು ಬ್ಯಾಂಕ್ ಸಿಇಒ ಅವರನ್ನು ಸಂಪರ್ಕಿಸಿದ್ದಾಳೆ. ಸಾಲ ಪ್ರಕ್ರಿಯೆಯ ಸಮಯದಲ್ಲಿ, ಸಿಇಒ ಆಕೆಯ ಮನೆಯ ಸಮೀಕ್ಷೆಗೆ ಹೋಗಿದ್ದಾನೆ. ಈ ವೇಳೆ ಮಹಿಳೆ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದುವಂತೆ ಒತ್ತಾಯಿಸಿದ್ದು, ಬಳಿಕ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ ಎಂದು ಸಿಇಒ ನೀಡಿದ ದೂರಿನಲ್ಲಿ ದಾಖಲಾಗಿದೆ.

ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ತನ್ನ ಬಲೆಗೆ ಬೀಳಿಸಿ 4 ಕೋಟಿ ರೂ. ದೋಚಿದ ಮಹಿಳೆ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Jun 22, 2024 | 2:34 PM

Share

ಮುಂಬೈ: ಸಹಕಾರಿ ಬ್ಯಾಂಕ್‌ನ ನಿವೃತ್ತ ಸಿಇಒಗೆ ಮಾನಹಾನಿ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಅವರಿಂದ 4.39 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಥಾಣೆಯ 45 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ದೂರುದಾರರಾದ ಬ್ಯಾಂಕ್ ಸಿಇಒ ಹೇಳುವಂತೆ , 2016 ರಲ್ಲಿ ತನ್ನ ಬ್ಯಾಂಕ್‌ನ ವಡಾಲಾ ಶಾಖೆಗೆ ಮಹಿಳೆಯೊಬ್ಬಳು ಲೋನ್​​ಗಾಗಿ ಬ್ಯಾಂಕ್​ಗೆ ಬಂದಿದ್ದಾರೆ. ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಪರಸ್ಪರ ಸಂಪರ್ಕದ ಬೆಳೆದಿದೆ” ಎಂದು ಹೇಳಿದ್ದಾರೆ.

ಥಾಣೆ ನಗರ ಪೊಲೀಸರು ಉಲ್ಲೇಖಿಸಿದ ವರದಿಯ ಪ್ರಕಾರ, ಮಹಿಳೆ ಆರಂಭದಲ್ಲಿ ಹಣಕಾಸಿನ ತೊಂದರೆಯಿಂದಾಗಿ ಸಾಲದ ಅಗತ್ಯವಿದೆ ಎಂದು ನಿವೃತ್ತ ಸಿಇಒ ಅವರನ್ನು ಸಂಪರ್ಕಿಸಿದ್ದಾರೆ. ಸಾಲ ಪ್ರಕ್ರಿಯೆಯ ಸಮಯದಲ್ಲಿ, ಆಕೆಯ ಮನೆಯ ಸಮೀಕ್ಷೆಯ ಅಗತ್ಯವಿತ್ತು. ಫೆಬ್ರವರಿ 2017 ರಲ್ಲಿ, ಸಿಇಒ ದಾಖಲೆಗಳನ್ನು ಪರಿಶೀಲಿಸಲು ಅವರ ಮನೆಗೆ ಭೇಟಿ ನೀಡಿದಾಗ, ಮಹಿಳೆ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದುವಂತೆ ಒತ್ತಾಯಿಸಿದಳು ಎಂದು ಎಫ್‌ಐಆರ್ ಉಲ್ಲೇಖಿಸಿಲಾಗಿದೆ. ನಂತರ ಮಾಸಿಕ 7,300 ರೂ.ಗಳ ಇಎಂಐ ಸಹಿತ 3 ಲಕ್ಷ ರೂ.ಸಾಲ ಮಂಜೂರಾಗಿದೆ.

ಒಂದು ತಿಂಗಳ ನಂತರ, ಮಹಿಳೆ 8 ಕೋಟಿ ರೂಪಾಯಿ ಪಾವತಿಸದಿದ್ದರೆ, ನಿನ್ನ ಕುಟುಂಬ ಮತ್ತು ಸಹೋದ್ಯೋಗಿಗಳಿಗೆ ವಾಟ್ಸಾಪ್‌ನಲ್ಲಿ ನಿನ್ನ ನಗ್ನ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಾ ವ್ಯಕ್ತಿಯನ್ನು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದ್ದಾಳೆ. ಆರಂಭದಲ್ಲಿ ಒತ್ತಡಕ್ಕೆ ಮಣಿದು ಸಿಇಒ ಆಕೆಗೆ 5 ಲಕ್ಷ ರೂ ಪಾವತಿಸದ್ದಾನೆ. 2017 ರಿಂದ 2023 ರ ನಡುವೆ ಅವರು 108 ಕಂತುಗಳಲ್ಲಿ ಒಟ್ಟು 4.39 ಕೋಟಿ ರೂ.ಗಳನ್ನು ಪಾವತಿಸಿದ್ದಾನೆ.

ಇದನ್ನೂ ಓದಿ: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​

ಇಷ್ಟು ದೊಡ್ಡ ಮೊತ್ತವನ್ನು ಪಡೆದರೂ, ಮಹಿಳೆ ತನ್ನ ಬೇಡಿಕೆಗಳನ್ನು ಮುಂದುವರೆಸಿದ್ದಳು. ಇದರಿಂದ ಬೇಸತ್ತ ಆತ ಪೊಲೀಸ್​​ ಠಾಣೆಯಲ್ಲಿ ಮಹಿಳೆಯ ವಿರುದ್ದ ಕೇಸು ದಾಖಲಿಸಿದ್ದಾನೆ. ಬಲೆ ಬೀಸಿದ ಪೊಲೀಸರು ಮಂಗಳವಾರ ಆಕೆಯನ್ನು ಬಂಧಿಸಿದ್ದಾರೆ.

ಸುಲಿಗೆ ಮಾಡಿದ ಹಣವನ್ನು ಎಲ್ಲಿ ಹೂಡಿಕೆ ಮಾಡಲಾಗಿದೆ ಅಥವಾ ಮಹಿಳೆ ಯಾವುದೇ ಆಸ್ತಿಯನ್ನು ಖರೀದಿಸಿದ್ದಾರೆಯೇ ಎಂಬುದನ್ನು ನಿರ್ಧರಿಸಲು ಹಣದ ಜಾಡು ಹಿಡಿಯುವುದು ಸೇರಿದಂತೆ ಪೊಲೀಸರು ಈಗ ವಿವರವಾದ ತನಿಖೆ ನಡೆಸುತ್ತಿದ್ದಾರೆ. ಸುಲಿಗೆ ಯೋಜನೆಯಲ್ಲಿ ಬೇರೆ ಯಾರಾದರೂ ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆಯೂ ಶೋಧ ನಡೆಸುತ್ತಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Sat, 22 June 24

Follow Us
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಇಂದಿನಿಂದ ಲಿಂಗಸುಗೂರಿನಿಂದ ‘ಬಳ್ಳಾರಿ ಚಲೋ’ ಹೆಸರಲ್ಲಿ ಬಿಜೆಪಿ ಪಾದಯಾತ್ರೆ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸೆಪ್ಟೆಂಬರ್ 1, 2026: ದ್ವಾದಶ ರಾಶಿಗಳ ಮೇಲೆ ಗ್ರಹಗಳ ಪ್ರಭಾವ, ದಿನ ಭವಿಷ್ಯ
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಸಲಾಲ್ ಡ್ಯಾಂನ ಗೇಟ್​ ಓಪನ್ ಮಾಡಿದ ಭಾರತ; ಪಾಕಿಸ್ತಾನ ಕಂಗಾಲು
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಮದುವೆ ಬಳಿಕ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಚಿಕ್ಕಣ್ಣ, ಪಾವನಾ ಭೇಟಿ
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗ್ಯಾರಂಟಿ ಪ್ರಾಧಿಕಾರದ ಸಭೆಯಲ್ಲಿ ಮಹತ್ವದ ತೀರ್ಮಾನ: ಚುನಾವಣೆಗೆ ತಯಾರಿ?
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಗೃಹಜ್ಯೋತಿ ಫಲಾನುಭವಿಗಳಿಗೆ ಬಿಗ್​ ಅಪ್ಡೇಟ್​:ಪರಿಷ್ಕರಣೆಗೆ ಗಡುವು ವಿಸ್ತರಣೆ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
ಉಜ್ಬೆಕಿಸ್ತಾನ್‌ ಮಕ್ಕಳ ಬಾಯಲ್ಲಿ ತಾವೇ ಬರೆದ ಕವಿತೆ ಕೇಳಿ ಭಾವುಕರಾದ ಮೋದಿ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
BMTC,KSRTC ನಿಲ್ದಾಣಗಳಿಗೆ ದಿಢೀರ್ ಭೇಟಿ, ಪ್ರಯಾಣಿಕರ ಸಮಸ್ಯೆ ಆಲಿಸಿದ ಸಚಿವ
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಬೆಂಗಳೂರಿನಲ್ಲಿ ಕಳಪೆ ಸಿಹಿ ತಿನಿಸುಗಳ ಮಾರಾಟಕ್ಕೆ ಲಗಾಮು
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK
ಕೆಪಿಎಸ್‌ಸಿ ಅಕ್ರಮದ ಮತ್ತಷ್ಟು ಸ್ಫೋಟಕ ವಿಚಾರಗಳನ್ನ ಬಹಿರಂಗಪಡಿಸಿದ HDK