AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ತನ್ನ ಬಲೆಗೆ ಬೀಳಿಸಿ 4 ಕೋಟಿ ರೂ. ದೋಚಿದ ಮಹಿಳೆ

ವರದಿಯ ಪ್ರಕಾರ, ಮಹಿಳೆ ಆರಂಭದಲ್ಲಿ ಹಣಕಾಸಿನ ತೊಂದರೆಯಿಂದಾಗಿ ಸಾಲದ ಅಗತ್ಯವಿದೆ ಎಂದು ಬ್ಯಾಂಕ್ ಸಿಇಒ ಅವರನ್ನು ಸಂಪರ್ಕಿಸಿದ್ದಾಳೆ. ಸಾಲ ಪ್ರಕ್ರಿಯೆಯ ಸಮಯದಲ್ಲಿ, ಸಿಇಒ ಆಕೆಯ ಮನೆಯ ಸಮೀಕ್ಷೆಗೆ ಹೋಗಿದ್ದಾನೆ. ಈ ವೇಳೆ ಮಹಿಳೆ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದುವಂತೆ ಒತ್ತಾಯಿಸಿದ್ದು, ಬಳಿಕ ಹಣ ನೀಡುವಂತೆ ಬೇಡಿಕೆ ಇಟ್ಟಿದ್ದಾಳೆ ಎಂದು ಸಿಇಒ ನೀಡಿದ ದೂರಿನಲ್ಲಿ ದಾಖಲಾಗಿದೆ.

ಲೋನ್‌ಗೆಂದು ಹೋಗಿ ಬ್ಯಾಂಕ್ ಸಿಇಒನನ್ನೇ ತನ್ನ ಬಲೆಗೆ ಬೀಳಿಸಿ 4 ಕೋಟಿ ರೂ. ದೋಚಿದ ಮಹಿಳೆ
ಸಾಂದರ್ಭಿಕ ಚಿತ್ರ
ಅಕ್ಷತಾ ವರ್ಕಾಡಿ
|

Updated on:Jun 22, 2024 | 2:34 PM

Share

ಮುಂಬೈ: ಸಹಕಾರಿ ಬ್ಯಾಂಕ್‌ನ ನಿವೃತ್ತ ಸಿಇಒಗೆ ಮಾನಹಾನಿ ಹಾಗೂ ಅತ್ಯಾಚಾರ ಪ್ರಕರಣ ದಾಖಲಿಸುವುದಾಗಿ ಬೆದರಿಸಿ ಅವರಿಂದ 4.39 ಕೋಟಿ ರೂಪಾಯಿ ಸುಲಿಗೆ ಮಾಡಿದ ಆರೋಪದ ಮೇಲೆ ಥಾಣೆಯ 45 ವರ್ಷದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ದೂರುದಾರರಾದ ಬ್ಯಾಂಕ್ ಸಿಇಒ ಹೇಳುವಂತೆ , 2016 ರಲ್ಲಿ ತನ್ನ ಬ್ಯಾಂಕ್‌ನ ವಡಾಲಾ ಶಾಖೆಗೆ ಮಹಿಳೆಯೊಬ್ಬಳು ಲೋನ್​​ಗಾಗಿ ಬ್ಯಾಂಕ್​ಗೆ ಬಂದಿದ್ದಾರೆ. ಈ ಸಮಯದಲ್ಲಿ ನಮ್ಮಿಬ್ಬರ ನಡುವೆ ಪರಸ್ಪರ ಸಂಪರ್ಕದ ಬೆಳೆದಿದೆ” ಎಂದು ಹೇಳಿದ್ದಾರೆ.

ಥಾಣೆ ನಗರ ಪೊಲೀಸರು ಉಲ್ಲೇಖಿಸಿದ ವರದಿಯ ಪ್ರಕಾರ, ಮಹಿಳೆ ಆರಂಭದಲ್ಲಿ ಹಣಕಾಸಿನ ತೊಂದರೆಯಿಂದಾಗಿ ಸಾಲದ ಅಗತ್ಯವಿದೆ ಎಂದು ನಿವೃತ್ತ ಸಿಇಒ ಅವರನ್ನು ಸಂಪರ್ಕಿಸಿದ್ದಾರೆ. ಸಾಲ ಪ್ರಕ್ರಿಯೆಯ ಸಮಯದಲ್ಲಿ, ಆಕೆಯ ಮನೆಯ ಸಮೀಕ್ಷೆಯ ಅಗತ್ಯವಿತ್ತು. ಫೆಬ್ರವರಿ 2017 ರಲ್ಲಿ, ಸಿಇಒ ದಾಖಲೆಗಳನ್ನು ಪರಿಶೀಲಿಸಲು ಅವರ ಮನೆಗೆ ಭೇಟಿ ನೀಡಿದಾಗ, ಮಹಿಳೆ ತನ್ನೊಂದಿಗೆ ದೈಹಿಕ ಸಂಬಂಧವನ್ನು ಹೊಂದುವಂತೆ ಒತ್ತಾಯಿಸಿದಳು ಎಂದು ಎಫ್‌ಐಆರ್ ಉಲ್ಲೇಖಿಸಿಲಾಗಿದೆ. ನಂತರ ಮಾಸಿಕ 7,300 ರೂ.ಗಳ ಇಎಂಐ ಸಹಿತ 3 ಲಕ್ಷ ರೂ.ಸಾಲ ಮಂಜೂರಾಗಿದೆ.

ಒಂದು ತಿಂಗಳ ನಂತರ, ಮಹಿಳೆ 8 ಕೋಟಿ ರೂಪಾಯಿ ಪಾವತಿಸದಿದ್ದರೆ, ನಿನ್ನ ಕುಟುಂಬ ಮತ್ತು ಸಹೋದ್ಯೋಗಿಗಳಿಗೆ ವಾಟ್ಸಾಪ್‌ನಲ್ಲಿ ನಿನ್ನ ನಗ್ನ ಫೋಟೋಗಳನ್ನು ಬಹಿರಂಗಪಡಿಸುವುದಾಗಿ ಬೆದರಿಕೆ ಹಾಕುತ್ತಾ ವ್ಯಕ್ತಿಯನ್ನು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದ್ದಾಳೆ. ಆರಂಭದಲ್ಲಿ ಒತ್ತಡಕ್ಕೆ ಮಣಿದು ಸಿಇಒ ಆಕೆಗೆ 5 ಲಕ್ಷ ರೂ ಪಾವತಿಸದ್ದಾನೆ. 2017 ರಿಂದ 2023 ರ ನಡುವೆ ಅವರು 108 ಕಂತುಗಳಲ್ಲಿ ಒಟ್ಟು 4.39 ಕೋಟಿ ರೂ.ಗಳನ್ನು ಪಾವತಿಸಿದ್ದಾನೆ.

ಇದನ್ನೂ ಓದಿ: ರೀಲ್ಸ್ ಗಾಗಿ ಜೀವ ಪಣಕ್ಕಿಟ್ಟು ಬಹು ಮಹಡಿಯ ಕಟ್ಟಡದ ಮೇಲೆ ಯುವತಿಯ ಸ್ಟಂಟ್​​

ಇಷ್ಟು ದೊಡ್ಡ ಮೊತ್ತವನ್ನು ಪಡೆದರೂ, ಮಹಿಳೆ ತನ್ನ ಬೇಡಿಕೆಗಳನ್ನು ಮುಂದುವರೆಸಿದ್ದಳು. ಇದರಿಂದ ಬೇಸತ್ತ ಆತ ಪೊಲೀಸ್​​ ಠಾಣೆಯಲ್ಲಿ ಮಹಿಳೆಯ ವಿರುದ್ದ ಕೇಸು ದಾಖಲಿಸಿದ್ದಾನೆ. ಬಲೆ ಬೀಸಿದ ಪೊಲೀಸರು ಮಂಗಳವಾರ ಆಕೆಯನ್ನು ಬಂಧಿಸಿದ್ದಾರೆ.

ಸುಲಿಗೆ ಮಾಡಿದ ಹಣವನ್ನು ಎಲ್ಲಿ ಹೂಡಿಕೆ ಮಾಡಲಾಗಿದೆ ಅಥವಾ ಮಹಿಳೆ ಯಾವುದೇ ಆಸ್ತಿಯನ್ನು ಖರೀದಿಸಿದ್ದಾರೆಯೇ ಎಂಬುದನ್ನು ನಿರ್ಧರಿಸಲು ಹಣದ ಜಾಡು ಹಿಡಿಯುವುದು ಸೇರಿದಂತೆ ಪೊಲೀಸರು ಈಗ ವಿವರವಾದ ತನಿಖೆ ನಡೆಸುತ್ತಿದ್ದಾರೆ. ಸುಲಿಗೆ ಯೋಜನೆಯಲ್ಲಿ ಬೇರೆ ಯಾರಾದರೂ ಶಾಮೀಲಾಗಿದ್ದಾರೆಯೇ ಎಂಬ ಬಗ್ಗೆಯೂ ಶೋಧ ನಡೆಸುತ್ತಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 2:29 pm, Sat, 22 June 24

ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ಸುಳ್ಳು ಹೇಳಿದ್ರೆ ಒದ್ದು ಒಳಗೆ ಹಾಕ್ತೀನಿ: ಸಚಿವ ಎಂಬಿ ಪಾಟೀಲ್
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ದೈತ್ಯ ಹೆಬ್ಬಾವು ರಕ್ಷಣೆ, ನಿಟ್ಟುಸಿರು ಬಿಟ್ಟ ರೈತರು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ