AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Video: ಮದುವೆಯಲ್ಲಿ ಖುಷಿಯಿಂದ ಕುಣಿಯುತ್ತಿದ್ದ ವೇಳೆ ಹೃದಯಾಘಾತ, ಯುವತಿ ಸಾವು

ಕುಟುಂಬದ ಮದುವೆಯೊಂದರಲ್ಲಿ ವೇದಿಕೆ ಮೇಲೆ ನೃತ್ಯ ಮಾಡುತ್ತಿರುವಾಗಲೇ ಯುವತಿಗೆ ಹೃದಯಾಘಾತವಾಗಿ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ನಡೆದಿದೆ. ರೆಸಾರ್ಟ್​ವೊಂದರಲ್ಲಿ ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಯುವತಿಯೊಬ್ಬರು ಖುಷಿ ಖುಷಿಯಿಂದ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಳು, ಏಕಾಏಕಿ ಕುಸಿದುಬಿದ್ದಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘರ್ಕೆಕಲೇಶ್​ ಎಂಬ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.

Viral Video: ಮದುವೆಯಲ್ಲಿ ಖುಷಿಯಿಂದ ಕುಣಿಯುತ್ತಿದ್ದ ವೇಳೆ ಹೃದಯಾಘಾತ, ಯುವತಿ ಸಾವು
ಯುವತಿ ಸಾವು
ನಯನಾ ರಾಜೀವ್
|

Updated on: Feb 10, 2025 | 9:16 AM

Share

ಸಂಬಂಧಿಯ ಮದುವೆ ಸಮಾರಂಭದಲ್ಲಿ ವೇದಿಕೆಯಲ್ಲಿ ಖುಷಿಯಿಂದ ಕುಣಿಯುತ್ತಿದ್ದ ಯುವತಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ನಡೆದಿದೆ. ರೆಸಾರ್ಟ್​ವೊಂದರಲ್ಲಿ ಮದುವೆ ಸಮಾರಂಭ ಆಯೋಜಿಸಲಾಗಿತ್ತು. ಯುವತಿಯೊಬ್ಬರು ಖುಷಿ ಖುಷಿಯಿಂದ ವೇದಿಕೆ ಮೇಲೆ ನೃತ್ಯ ಮಾಡುತ್ತಿದ್ದಳು, ಏಕಾಏಕಿ ಕುಸಿದುಬಿದ್ದಿದ್ದಾಳೆ. ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಘರ್ಕೆಕಲೇಶ್​ ಎಂಬ ಖಾತೆಯಲ್ಲಿ ಈ ವಿಡಿಯೋ ಹಂಚಿಕೊಳ್ಳಲಾಗಿದೆ.

ವಿಡಿಯೋದಲ್ಲಿ ಸೀರೆಯುಟ್ಟ ಯುವತಿ ಬಾಲಿವುಡ್​ನ ಲೆಹ್ರಾ ಕೆ ಬಲ್ಖಾ ಕೆ ಹಾಡಿಗೆ ನೃತ್ಯ ಮಾಡುತ್ತಿದ್ದಳು, ಇದ್ದಕ್ಕಿಂದ್ದಂತೆ ಕುಸಿದುಬೀಳುವುದನ್ನು ಕಾಣಬಹುದು. ವಿವರಗಳ ಪ್ರಕಾರ,ಮೃತಳನ್ನು ಪರಿಣಿತಾ ಜೈನ್ ಎಂದು ಗುರುತಿಸಲಾಗಿದೆ. ಅವರು ಇಂದೋರ್ ನಿವಾಸಿಯಾಗಿದ್ದರು. ಮ್ಮ ಸೋದರಸಂಬಂಧಿಯ ಸಹೋದರಿಯ ವಿವಾಹ ಸಮಾರಂಭದಲ್ಲಿ ಭಾಗವಹಿಸಲು ವಿದಿಶಾಗೆ ಬಂದಿದ್ದರು. ‘ಹಲ್ದಿ’ ಕಾರ್ಯಕ್ರಮದ ಸಮಯದಲ್ಲಿ ವೇದಿಕೆಯ ಮೇಲೆ ನೃತ್ಯ ಮಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ.

ಸಮಾರಂಭದಲ್ಲಿ ಹಾಜರಿದ್ದ ವೈದ್ಯರು ಕೂಡಲೇ ಸಿಪಿಆರ್ ನೀಡಿದ್ದಾರೆ, ಆದರೆ ಯಾವುದೇ ಪ್ರತಿಕ್ರಿಯೆ ಬರಲಿಲ್ಲ, ಪರಿಣಿತಾ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ವೈದ್ಯರು ಅವರು ಮೃತಪಟ್ಟಿದ್ದಾರೆಂದು ಘೋಷಿಸಿದರು.

ಮತ್ತಷ್ಟು ಓದಿ: Viral: ಪ್ರೀತಿ ಒಪ್ಪದ ಹುಡುಗಿಯ ಮೇಲೆ ಪ್ರಪೋಸ್ ಡೇಯಂದೇ ಕೈ ಮಾಡಿದ ಭೂಪ; ವಿಡಿಯೋ ವೈರಲ್

ಆಕೆ ಎಂಬಿಎ ಪದವೀಧರೆಯಾಗಿದ್ದು, ಇಂದೋರ್​ನಲ್ಲಿ ಹೆತ್ತವರೊಂದಿಗೆ ವಾಸಿಸುತ್ತಿದ್ದಳು. ಆಕೆಯ ಕಿರಿಯ ಸಹೋದರಿ ತನ್ನ 12ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದಳು.

ಮದುವೆ ಮನೆಗಳಲ್ಲಿ ಊಟ ಸರಿಯಾಗಿ ಮಾಡದೆ, ನೀರನ್ನು ಸರಿಯಾಗಿ ಕುಡಿಯದೇ, ಅತಿಯಾದ ದೈಹಿಕ ಚಟುವಿಕೆ, ನೃತ್ಯಾಭ್ಯಾಸದಿಂದ ಕೂಡ ಹೃದಯ ಸಂಕುಚಿತಗೊಳ್ಳಬಹುದು ಎಂದು ವೈದ್ಯರು ಹೇಳುತ್ತಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ