AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಗೆ ಒಪ್ಪದ ಪ್ರೇಮಿಯ ಮನೆ ಮುಂದೆ ಯುವತಿಯಿಂದ 3 ದಿನ ಪ್ರತಿಭಟನೆ; ಆಮೇಲೇನಾಯ್ತು?

ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಯುವತಿ 3 ದಿನ ತನ್ನ ಪ್ರೇಮಿಯ ಮನೆ ಎದುರು ಪ್ರತಿಭಟನೆ ನಡೆಸಿದಳು. ಆಕೆಯ ಪ್ರತಿಭಟನೆ ವ್ಯರ್ಥವಾಗಲಿಲ್ಲ.

Viral News: ಮದುವೆಗೆ ಒಪ್ಪದ ಪ್ರೇಮಿಯ ಮನೆ ಮುಂದೆ ಯುವತಿಯಿಂದ 3 ದಿನ ಪ್ರತಿಭಟನೆ; ಆಮೇಲೇನಾಯ್ತು?
ಹಿಂದೂ ವಿವಾಹ (ಸಾಂಕೇತಿಕ ಚಿತ್ರ)
ಸುಷ್ಮಾ ಚಕ್ರೆ
|

Updated on: Jan 23, 2023 | 6:37 PM

Share

ತನ್ನನ್ನು ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದರಿಂದ ಕೋಪಗೊಂಡ ಯುವತಿ ಆತನ ಮನೆ ಮುಂದೆ 3 ದಿನ ಪ್ರತಿಭಟನೆ ನಡೆಸಿದ್ದಾಳೆ. ಈ ವಿಷಯ ಇಡೀ ಊರಿನಲ್ಲಿ ಚರ್ಚೆಯಾಗುತ್ತಿದ್ದಂತೆ ಆತ ಆಕೆಯನ್ನು ಮದುವೆಯಾಗಲು ಒಪ್ಪಿಗೆ ನೀಡಿದ್ದಾನೆ. ಜಾರ್ಖಂಡ್‌ನ (Jharkhand) ಧನ್‌ಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಳೆದ 4 ವರ್ಷಗಳಿಂದ ಅವರಿಬ್ಬರ ನಡುವೆ ಸಂಬಂಧವಿತ್ತು. ಆದರೆ, ಆತ ಮದುವೆಯಾಗಲು ನಿರಾಕರಿಸಿದ್ದ. ಇದೀಗ ಅವರ ಪ್ರೇಮ ಕಹಾನಿ (Love Story) ಸುಖಾಂತ್ಯ ಕಂಡಿದೆ.

ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಯುವತಿ 3 ದಿನ ತನ್ನ ಪ್ರೇಮಿಯ ಮನೆ ಎದುರು ಪ್ರತಿಭಟನೆ ನಡೆಸಿದಳು. ಆಕೆಯ ಪ್ರತಿಭಟನೆ ವ್ಯರ್ಥವಾಗಲಿಲ್ಲ. ಕೊನೆಗೆ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಭಾನುವಾರ ಅವರಿಬ್ಬರೂ ವಿವಾಹವಾಗಿದ್ದಾರೆ. ರಾಜ್‌ಗಂಜ್‌ನ ಗಂಗಾಪುರದಲ್ಲಿರುವ ಮಾ ಲಿಲೋರಿ ದೇವಸ್ಥಾನದಲ್ಲಿ ಉತ್ತಮ್ ಮಹತೋ ಮತ್ತು ನಿಶಾ ಕುಮಾರಿ ದಂಪತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಟಾಮಿ ವೆಡ್ಸ್​ ಜೈಲಿ; ಉತ್ತರ ಪ್ರದೇಶದಲ್ಲಿ ನಾಯಿಗಳ ಮದುವೆ; ವಿಡಿಯೋ ವೈರಲ್

ಮಹೇಶಪುರ ಗ್ರಾಮದ ನಿವಾಸಿ ಉತ್ತಮ್ ಮಹತೋಗೂ ತನಗೂ ಕಳೆದ 4 ವರ್ಷಗಳಿಂದ ಪ್ರೇಮ ಸಂಬಂಧವಿತ್ತು ಎಂದು ಆ ಯುವತಿ ಹೇಳಿದ್ದಾಳೆ. ಆಕೆ ಧನಬಾದ್‌ನ ಎಸ್‌ಎಸ್‌ಎಲ್‌ಎನ್‌ಟಿ ಕಾಲೇಜಿನಲ್ಲಿ ಓದುತ್ತಿದ್ದಾಗ ಉತ್ತಮ್‌ನ ಜೊತೆ ಸಂಬಂಧ ಇಟ್ಟುಕೊಂಡಿದ್ದಳು. ಅವರಿಬ್ಬರ ಕುಟುಂಬದ ಸದಸ್ಯರಿಗೂ ಅವರ ಸಂಬಂಧದ ಬಗ್ಗೆ ತಿಳಿದಿತ್ತು. ಆ ಯುವತಿಯನ್ನು ಮದುವೆಯಾಗುವುದಾಗಿ ಉತ್ತಮ್ ಭರವಸೆ ನೀಡಿದ್ದ. ಇಬ್ಬರೂ ಅನೇಕ ಬಾರಿ ಪರಸ್ಪರರ ಕುಟುಂಬಗಳ ಮನೆಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: Mahua Moitra: ಸಂಸದೆಯ ಮತ್ತೊಂದು ವಿಡಿಯೊ ವೈರಲ್, ಚಹಾ ಮಾಡುವುದು ಆಯಿತು, ಈಗ ಕೇರಂ ಆಡುತ್ತಿದ್ದಾರೆ

ಇದಾದ ನಂತರ ಅವರ ಮದುವೆಯನ್ನು ಎರಡೂ ಮನೆಯವರು ನಿಶ್ಚಯಿಸಿದರು. ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಆದರೆ, ದಿನಾಂಕಕ್ಕೆ 20 ದಿನಗಳ ಮೊದಲು ಉತ್ತಮ್ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಯುವತಿ ಉತ್ತಮ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಳು.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ