AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News: ಮದುವೆಗೆ ಒಪ್ಪದ ಪ್ರೇಮಿಯ ಮನೆ ಮುಂದೆ ಯುವತಿಯಿಂದ 3 ದಿನ ಪ್ರತಿಭಟನೆ; ಆಮೇಲೇನಾಯ್ತು?

ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಯುವತಿ 3 ದಿನ ತನ್ನ ಪ್ರೇಮಿಯ ಮನೆ ಎದುರು ಪ್ರತಿಭಟನೆ ನಡೆಸಿದಳು. ಆಕೆಯ ಪ್ರತಿಭಟನೆ ವ್ಯರ್ಥವಾಗಲಿಲ್ಲ.

Viral News: ಮದುವೆಗೆ ಒಪ್ಪದ ಪ್ರೇಮಿಯ ಮನೆ ಮುಂದೆ ಯುವತಿಯಿಂದ 3 ದಿನ ಪ್ರತಿಭಟನೆ; ಆಮೇಲೇನಾಯ್ತು?
ಹಿಂದೂ ವಿವಾಹ (ಸಾಂಕೇತಿಕ ಚಿತ್ರ)
ಸುಷ್ಮಾ ಚಕ್ರೆ
|

Updated on: Jan 23, 2023 | 6:37 PM

Share

ತನ್ನನ್ನು ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದರಿಂದ ಕೋಪಗೊಂಡ ಯುವತಿ ಆತನ ಮನೆ ಮುಂದೆ 3 ದಿನ ಪ್ರತಿಭಟನೆ ನಡೆಸಿದ್ದಾಳೆ. ಈ ವಿಷಯ ಇಡೀ ಊರಿನಲ್ಲಿ ಚರ್ಚೆಯಾಗುತ್ತಿದ್ದಂತೆ ಆತ ಆಕೆಯನ್ನು ಮದುವೆಯಾಗಲು ಒಪ್ಪಿಗೆ ನೀಡಿದ್ದಾನೆ. ಜಾರ್ಖಂಡ್‌ನ (Jharkhand) ಧನ್‌ಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಕಳೆದ 4 ವರ್ಷಗಳಿಂದ ಅವರಿಬ್ಬರ ನಡುವೆ ಸಂಬಂಧವಿತ್ತು. ಆದರೆ, ಆತ ಮದುವೆಯಾಗಲು ನಿರಾಕರಿಸಿದ್ದ. ಇದೀಗ ಅವರ ಪ್ರೇಮ ಕಹಾನಿ (Love Story) ಸುಖಾಂತ್ಯ ಕಂಡಿದೆ.

ಕೊರೆಯುವ ಚಳಿಯನ್ನೂ ಲೆಕ್ಕಿಸದೆ ಯುವತಿ 3 ದಿನ ತನ್ನ ಪ್ರೇಮಿಯ ಮನೆ ಎದುರು ಪ್ರತಿಭಟನೆ ನಡೆಸಿದಳು. ಆಕೆಯ ಪ್ರತಿಭಟನೆ ವ್ಯರ್ಥವಾಗಲಿಲ್ಲ. ಕೊನೆಗೆ ಎರಡೂ ಕುಟುಂಬಗಳ ಒಪ್ಪಿಗೆಯೊಂದಿಗೆ ಭಾನುವಾರ ಅವರಿಬ್ಬರೂ ವಿವಾಹವಾಗಿದ್ದಾರೆ. ರಾಜ್‌ಗಂಜ್‌ನ ಗಂಗಾಪುರದಲ್ಲಿರುವ ಮಾ ಲಿಲೋರಿ ದೇವಸ್ಥಾನದಲ್ಲಿ ಉತ್ತಮ್ ಮಹತೋ ಮತ್ತು ನಿಶಾ ಕುಮಾರಿ ದಂಪತಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಇದನ್ನೂ ಓದಿ: ಟಾಮಿ ವೆಡ್ಸ್​ ಜೈಲಿ; ಉತ್ತರ ಪ್ರದೇಶದಲ್ಲಿ ನಾಯಿಗಳ ಮದುವೆ; ವಿಡಿಯೋ ವೈರಲ್

ಮಹೇಶಪುರ ಗ್ರಾಮದ ನಿವಾಸಿ ಉತ್ತಮ್ ಮಹತೋಗೂ ತನಗೂ ಕಳೆದ 4 ವರ್ಷಗಳಿಂದ ಪ್ರೇಮ ಸಂಬಂಧವಿತ್ತು ಎಂದು ಆ ಯುವತಿ ಹೇಳಿದ್ದಾಳೆ. ಆಕೆ ಧನಬಾದ್‌ನ ಎಸ್‌ಎಸ್‌ಎಲ್‌ಎನ್‌ಟಿ ಕಾಲೇಜಿನಲ್ಲಿ ಓದುತ್ತಿದ್ದಾಗ ಉತ್ತಮ್‌ನ ಜೊತೆ ಸಂಬಂಧ ಇಟ್ಟುಕೊಂಡಿದ್ದಳು. ಅವರಿಬ್ಬರ ಕುಟುಂಬದ ಸದಸ್ಯರಿಗೂ ಅವರ ಸಂಬಂಧದ ಬಗ್ಗೆ ತಿಳಿದಿತ್ತು. ಆ ಯುವತಿಯನ್ನು ಮದುವೆಯಾಗುವುದಾಗಿ ಉತ್ತಮ್ ಭರವಸೆ ನೀಡಿದ್ದ. ಇಬ್ಬರೂ ಅನೇಕ ಬಾರಿ ಪರಸ್ಪರರ ಕುಟುಂಬಗಳ ಮನೆಗೆ ಭೇಟಿ ನೀಡಿದ್ದರು.

ಇದನ್ನೂ ಓದಿ: Mahua Moitra: ಸಂಸದೆಯ ಮತ್ತೊಂದು ವಿಡಿಯೊ ವೈರಲ್, ಚಹಾ ಮಾಡುವುದು ಆಯಿತು, ಈಗ ಕೇರಂ ಆಡುತ್ತಿದ್ದಾರೆ

ಇದಾದ ನಂತರ ಅವರ ಮದುವೆಯನ್ನು ಎರಡೂ ಮನೆಯವರು ನಿಶ್ಚಯಿಸಿದರು. ಮದುವೆ ದಿನಾಂಕ ಕೂಡ ನಿಗದಿಯಾಗಿತ್ತು. ಆದರೆ, ದಿನಾಂಕಕ್ಕೆ 20 ದಿನಗಳ ಮೊದಲು ಉತ್ತಮ್ ಮದುವೆಯಾಗಲು ನಿರಾಕರಿಸಿದ್ದ. ಇದರಿಂದ ಕೋಪಗೊಂಡ ಯುವತಿ ಉತ್ತಮ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಳು.

ಇನ್ನಷ್ಟು ಟ್ರೆಂಡಿಂಗ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ