AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral News:117 ವರ್ಷ ಬದುಕಿದ್ದ ವಿಶ್ವದ ಅತ್ಯಂತ ಹಿರಿಯ ಮಹಿಳೆ ನಿಧನ

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ಗಿನ್ನಿಸ್ ವಿಶ್ವ ದಾಖಲೆ ಬರೆದಿದ್ದ ಮಾರಿಯಾ ಬ್ರನ್ಯಾಸ್ ತನ್ನ 117 ನೇ ವಯಸ್ಸಿನಲ್ಲಿ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ಖಚಿತಪಡಿಸಿದ್ದಾರೆ. ಮೂರು ವರ್ಷಗಳ ಹಿಂದೆ ತನ್ನ ಇಳಿ ವಯಸ್ಸಿನಲ್ಲೂ ಕೊರೊನಾ ಮಹಾಮಾರಿ ಜಯಿಸಿ ಬಂದು ಮಾರಿಯಾ ಎಲ್ಲರಿಗೂ ಅಚ್ಚರಿ ಮೂಡಿಸಿದ್ದರು.

Viral News:117 ವರ್ಷ ಬದುಕಿದ್ದ ವಿಶ್ವದ ಅತ್ಯಂತ ಹಿರಿಯ ಮಹಿಳೆ ನಿಧನ
ಮಾರಿಯಾ ಬ್ರನ್ಯಾಸ್
ಅಕ್ಷತಾ ವರ್ಕಾಡಿ
|

Updated on:Aug 22, 2024 | 10:53 AM

Share

ವಿಶ್ವದ ಅತ್ಯಂತ ಹಿರಿಯ ವ್ಯಕ್ತಿ ಎಂದು ಕರೆಯಲ್ಪಡುತ್ತಿದ್ದ ಮಾರಿಯಾ ಬ್ರನ್ಯಾಸ್ ಮೊರೆರಾ ನಿಧನರಾಗಿದ್ದಾರೆ ಎಂದು ವರದಿಯಾಗಿದೆ. 117 ವರ್ಷ 168 ದಿನ ಬದುಕಿದ್ದ ಮಾರಿಯಾ ವಿಶ್ವದ ಹಿರಿಯ ವ್ಯಕ್ತಿ ಎಂದು ಗಿನ್ನಿಸ್ ವಿಶ್ವ ದಾಖಲೆ ಬರೆದಿದ್ದರು. ಇದಲ್ಲದೇ ಮೂರು ವರ್ಷಗಳ ಹಿಂದೆ ತನ್ನ ಇಳಿ ವಯಸ್ಸಿನಲ್ಲೂ ಕೊರೊನಾ ಮಹಾಮಾರಿ ಜಯಿಸಿ ಬಂದು ಸಖತ್​​​ ಸುದ್ದಿಯಾಗಿದ್ದರು. ಆದರೆ ಈಗ ಮಾರಿಯಾ ಸಾವನ್ನಪ್ಪಿರುವುದಾಗಿ ಕುಟುಂಬಸ್ಥರು ಖಚಿತಪಡಿಸಿದ್ದಾರೆ.

ಮಾರ್ಚ್ 4, 1907 ರಂದು ಅಮೆರಿಕದಲ್ಲಿ ಜನಿಸಿದ ಮಾರಿಯಾ ಬ್ರನ್ಯಾಸ್, ಬಳಿಕ ಅವರ ಕುಟುಂಬ ಸ್ಪೇನ್‌ಗೆ ತೆರಳಿ ಅಲ್ಲಿ ನೆಲೆಸಿತು. ತನ್ನ ಜೀವಿತಾವಧಿಯಲ್ಲಿ ಎರಡು ಮಹಾಯುದ್ಧಗಳನ್ನು ಕಂಡಿದ್ದ ಮರಿಯಾ ಚಿಕ್ಕ ವಯಸ್ಸಿನಿಂದಲೂ ಆರೋಗ್ಯಕರ ಜೀವನಶೈಲಿಯನ್ನು ರೂಢಿಸಿಕೊಂಡಿದ್ದರು.

ಇದನ್ನೂ ಓದಿ: ಸೌಂದರ್ಯ ಹೆಚ್ಚಿಸಲು 6 ಲಕ್ಷ ರೂ. ಖರ್ಚು ಮಾಡಿ ಶಸ್ತ್ರಚಿಕಿತ್ಸೆಗೆ ಒಳಗಾದ ಮಹಿಳೆ ಸಾವು

ಇದೀಗ ಮಾರಿಯಾ ಸಾವಿನ ಬಳಿಕ ಜಪಾನ್‌ನ ಟೊಮಿಕಾ ಇಟುಕಾ (116 ವರ್ಷ) ವಿಶ್ವದ ಅತ್ಯಂತ ಹಿರಿಯ ವ್ಯಕ್ತಿಯಾಗಿದ್ದಾರೆ. ಇದಲ್ಲದೇ ಟೊಮಿಕಾ ಇಟುಕಾ ಪರ್ವತಾರೋಹಿ ಎಂದು ಪ್ರಸಿದ್ಧರಾಗಿದ್ದಾರೆ. ಏಕೆಂದರೆ ಟೊಮಿಕಾ ಇಟುಕಾ ಜಪಾನ್‌ನ 3,067 ಮೀಟರ್ ಎತ್ತರದ ಮೌಂಟ್ ಒಂಟೇಕ್ ಅನ್ನು ಎರಡು ಬಾರಿ ಏರಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 10:36 am, Thu, 22 August 24

ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
ಮಹದೇಶ್ವರ ಬೆಟ್ಟದ ಜಾತ್ರೆ ಹೊತ್ತಲೇ ಭೀಕರ ಅಪಘಾತ
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
300ಕ್ಕೂ ಹೆಚ್ಚು ಬಾಳೆ ಗಿಡಗಳನ್ನ ಕಡಿದ ದುಷ್ಕರ್ಮಿಗಳು
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಹಂಪಿ ಉತ್ಸವಕ್ಕೆ ಸಜ್ಜಾದ ಭವ್ಯ ವೇದಿಕೆ: 50 ಸಾವಿರ ಜನರಿಗೆ ಆಸನದ ವ್ಯವಸ್ಥೆ
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸಿಂಹ ರಾಶಿಯವರ ಮೇಲೆ ರಾಹುಗ್ರಸ್ತ ಕಂಕಣ ಸೂರ್ಯಗ್ರಹಣದ ಪ್ರಭಾವ ಹೇಗಿರಲಿದೆ?
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸೇವಾ ತೀರ್ಥ; ಪ್ರಧಾನಮಂತ್ರಿ ಕಚೇರಿಯ ನೂತನ ಹೆಸರು ಅನಾವರಣಗೊಳಿಸಿದ ಮೋದಿ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ಸರಣಿ ಅಪಘಾತದಲ್ಲಿ 7 ಜನ ದುರ್ಮರಣ: ಘಟನೆಯ ಭೀಕರತೆ ಬಿಚ್ಚಿಟ್ಟ ಚಾಲಕ
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ವರ್ಷದ ಮೊದಲ ಸೂರ್ಯಗ್ರಹಣ ಕರ್ಕಾಟಕ ರಾಶಿಯವರಿಗೆ ಹೇಗಿರಲಿದೆ?
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಶಿಶುಗಳ ಕಳ್ಳತನ ತಡೆಯಲು ಹೊಸ ಪ್ಲಾನ್ ಮಾಡಿದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ತಮಿಳುನಾಡು ಚುನಾವಣೆ: ಯಾವ ಪಕ್ಷದ ಜತೆಯೂ ಮೈತ್ರಿ ಇಲ್ಲ: ವಿಜಯ್
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ
ಮಹಾ ಶಿವರಾತ್ರಿಯಂದು ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧ: ಜಿಬಿಎ ಆದೇಶ