AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

10 ವರ್ಷದ ಬಾಲಕ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದ 150 ಕೆಜಿ ತೂಕದ ದಡೂತಿ ತಾಯಿ

ತಾಯಿಯೊಬ್ಬಳು ತನ್ನ ಮಗುವಿನ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದಿರುವ ಘಟನೆ ಬೆಳಕಿಗೆ ಬಂದಿದೆ. ಮಗ ಪಕ್ಕದ ಮನೆಗೆ ಹೋಗೋದನ್ನು ತಡೆಯಲು ಈ ರೀತಿ ಮಾಡಿದೆ. ಕೊಲೆ ಮಾಡುವ ಕೆಟ್ಟ ಯೋಚನೆ ನನಗಿರಲ್ಲಿಲ್ಲ ಎಂದು ಪೊಲೀಸ್​​ ತನಿಖೆಯ ವೇಳೆ ಮಹಿಳೆ ಹೇಳಿರುವುದು ವರದಿಯಾಗಿದೆ.

10 ವರ್ಷದ ಬಾಲಕ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದ 150 ಕೆಜಿ ತೂಕದ ದಡೂತಿ ತಾಯಿ
ಅಕ್ಷತಾ ವರ್ಕಾಡಿ
|

Updated on: Jul 20, 2024 | 4:32 PM

Share

ಅಮೆರಿಕ: ತಾಯಿ-ಮಗುವಿನ ಸಂಬಂಧ ಅತ್ಯಂತ ಪ್ರವಿತ್ರವಾದುದು ಮತ್ತು ಗಾಢವಾದುದು. ತಾಯಿಯ ಮಡಿಲಲ್ಲಿದ್ದರೆ ಮಗು ಎಲ್ಲವನ್ನೂ ಮರೆತು ಹಾಯಾಗಿರುತ್ತದೆ ಎಂಬ ಮಾತಿಗೆ. ಆದರೆ ಇಲ್ಲೊಬ್ಬಳು ಮಹಾ ತಾಯಿ ತನ್ನ ಮಗುವಿನ ಮೇಲೆ ಕುಳಿತು, ಉಸಿರುಗಟ್ಟಿಸಿ ಕೊಂದಿದ್ದಾಳೆ. ಈ ಘಟನೆ ಅಮೆರಿಕದಲ್ಲಿ ನಡೆದಿದೆ. ಆರೋಪಿ ಮಹಿಳೆಯನ್ನು ಜೆನಿಫರ್ ವಿಲ್ಸನ್(48) ಎಂದು ಗುರುತಿಸಲಾಗಿದ್ದು, ಈಕೆ ಮೃತ ಬಾಲಕನ ಮಲತಾಯಿ ಎಂದು ತಿಳಿದುಬಂದಿದೆ.

ಡಕೋಟಾ ಸ್ಟೀವನ್ಸ್(10) ಕೊಲೆಯಾದ ಬಾಲಕ. ಮಗ ಪಕ್ಕದ ಮನೆಗೆ ಹೋಗೋದನ್ನು ತಪ್ಪಿಸೋಕೆ ಹೋಗಿ ಮಗುವನ್ನು ಉಸಿರು ಕಟ್ಟಿಸಿ ಕೊಂದಿರುವುದು ಪೊಲೀಸ್​​ ತನಿಖೆಯ ವೇಳೆ ತಿಳಿದುಬಂದಿದೆ. ಸ್ಟೀವನ್ ನೆರೆಯ ಮನೆಗೆ ಆಟವಾಡಲು ಹೋಗುತ್ತಿರುವ ವೇಳೆ ಅದನ್ನು ತಪ್ಪಿಸಲು ಜೆನಿಫರ್ ಮುಂದಾಗಿದ್ದಾಳೆ. ಇದಕ್ಕಾಗಿ ಬಾಲಕನನ್ನು ನೆಲಕ್ಕೆ ಒತ್ತಿ ಹಿಡಿದಿಟ್ಟು ಆತನ ಮೇಲೆ ಕುಳಿತಿದ್ದಾಳೆ. ಬಾಲಕ ಉಸಿರಾಡಲು ಕಷ್ಟವಾಗುತ್ತಿದೆ ಎಂದು ಗೋಳಾಡಿದರೂ 150 ಕೆಜಿ ತೂಕದ ಈ ಮಹಿಳೆ ಎದ್ದೇಳಲ್ಲಿಲ್ಲ. ಸುಮಾರು 5 ನಿಮಿಷಗಳ ಕಾಲ ಕುಳಿತ ನಂತರ ಬಾಲಕನ ಚಲನೆಯನ್ನು ನಿಲ್ಲಿಸಿರುವುದನ್ನು ಗಮನಿಸಿದ್ದಾಳೆ. ಕೂಡಲೆ ಮಗುವನ್ನು ಸೌತ್ ಬೆಂಡ್ ಆಸ್ಪತ್ರೆಗೆ ದಾಖಲಿಸಿದ್ದಾಳೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಬಾಲಕ ಸಾವುನಪ್ಪಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ: ತರಗತಿಯಲ್ಲಿ ಮಕ್ಕಳು ಕುಳಿತಿರುವಾಗಲೇ ಖಾಸಗಿ ಶಾಲೆಯ ಗೋಡೆ ಕುಸಿತ; ಸಿಸಿಟಿವಿಯಲ್ಲಿ ಸೆರೆ

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಮಹಿಳೆಯನ್ನು ವಾಯವ್ಯ ಇಂಡಿಯಾನಾದಲ್ಲಿ ಪೊಲೀಸರು ಬಂಧಿಸಿದ್ದಾರೆ. ಸದ್ಯ ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸಂಚಲನವನ್ನು ಮೂಡಿಸಿದೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು