Viral Photo: 20 ರೂಪಾಯಿ ಚಹಾಕ್ಕೆ 70 ರೂಪಾಯಿ ಬಿಲ್ ನೋಡಿ ಪ್ರಯಾಣಿಕ ಶಾಕ್! ರೈಲಿನಲ್ಲಿ ಈ ವ್ಯವಸ್ಥೆ ಇದೆ ಗೊತ್ತಾ?

ಒಂದು ಕಪ್ ಚಹಾಕ್ಕೆ 20 ರೂಪಾಯಿ, ಆದರೆ ಬಿಲ್​ನಲ್ಲಿ 70 ರೂಪಾಯಿ ನೋಡಿ ಶಾಕ್ ಆದ ಪ್ರಯಾಣಿಕ. ರೈಲಿನಲ್ಲಿ ಹೆಚ್ಚುವರಿ ಹಣ ವಿಧಿಸುತ್ತಿರುವುದು ಏಕೆ? ಇಲ್ಲಿದೆ ಮಾಹಿತಿ.

Viral Photo: 20 ರೂಪಾಯಿ ಚಹಾಕ್ಕೆ 70 ರೂಪಾಯಿ ಬಿಲ್ ನೋಡಿ ಪ್ರಯಾಣಿಕ ಶಾಕ್! ರೈಲಿನಲ್ಲಿ ಈ ವ್ಯವಸ್ಥೆ ಇದೆ ಗೊತ್ತಾ?
ವೈರಲ್ ಆಗುತ್ತಿರುವ ಚಹಾದ ಬಿಲ್
Follow us
| Updated By: Rakesh Nayak Manchi

Updated on:Jul 01, 2022 | 10:09 PM

ನವದೆಹಲಿ: ರೈಲ್ವೇ ಪ್ರಯಾಣ ಅತ್ಯಂತ ಕಡಿಮೆಯಲ್ಲಿ ಆಗುತ್ತದೆ. ಹಾಗೆಂದ ಮಾತ್ರಕ್ಕೆ ಆಹಾರದ ವಿಚಾರದಲ್ಲಿ ಮಾಡುವ ಸಣ್ಣ ತಪ್ಪು ದುಬಾರಿ ಹಣ ಕೊಟ್ಟು ತಿನ್ನುವ ಸ್ಥಿತಿ ಬರಬಹುದು. ಅದಕ್ಕೆ ನಿದರ್ಶನವೆಂಬಂತೆ ರೈಲಿನಲ್ಲಿ ಪ್ರಯಾಣಿಕರೊಬ್ಬರಿಗೆ ಒಂದು ಕಪ್ ಚಹಾಕ್ಕೆ 70 ರೂಪಾಯಿ ವಿಧಿಸಲಾಗಿದೆ. ಇದರ ಬಿಲ್​ನ ಫೋಟೋವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದು, ಫೋಟೋ ವೈರಲ್ (Viral Photo) ಆಗುತ್ತಿದೆ. ಹಾಗಿದ್ದರೆ ಒಂದು ಕಪ್ ಚಹಾಕ್ಕೆ ಯಾಕಿಷ್ಟು ದೊಡ್ಡ ಮೊತ್ತ ಅಂತ ಅಂದುಕೊಂಡಿದ್ದರೆ ಈ ಸುದ್ದಿ ಓದಿ.

ಇದನ್ನೂ ಓದಿ: Viral Video: ಹುಲಿ ಮರಿಗಳಿಗೆ ಹಾಲು ಕುಡಿಸಿದ ಒರಾಂಗುಟಾನ್! ನೆಟ್ಟಿಗರ ಮನಸೂರೆಗೊಳಿಸುವ ವಿಡಿಯೋ ವೈರಲ್

ಜೂನ್ 28ರಂದು ದೆಹಲಿಯಿಂದ ಭೋಪಾಲ್‌ಗೆ ಶತಾಬ್ದಿ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಪ್ರಾಯಾಣಿಕರೊಬ್ಬರು 1 ಕಪ್ ಚಹಾ ಆರ್ಡರ್ ಮಾಡಿದ್ದಾರೆ. ಕೊನೆಯಲ್ಲಿ ಬಿಲ್ ಪಡೆದಾಗ ಅದರಲ್ಲಿ 70 ರೂಪಾಯಿ ನೋಡಿ ಪ್ರಯಾಣಿಕ ಶಾಕ್ ಆಗಿದ್ದಾರೆ. ಇದಕ್ಕೆ ಕಾರಣ ಆ ವ್ಯಕ್ತಿ ಟಿಕೆಟ್ ಕಾಯ್ದಿರಿಸುವಾಗ ಯಾವುದೇ ಆಹಾರವನ್ನು ಮುಂಚಿತವಾಗಿ ಆರ್ಡರ್ ಮಾಡದಿರುವುದು. ಇದೇ ಕಾರಣಕ್ಕೆ 20 ರೂಪಾಯಿ ಚಹಾಕ್ಕೆ 50 ರೂಪಾಯಿ ಸೇವಾ ಶುಲ್ಕ ವಿಧಿಸಿ ಬಿಲ್ ನೀಡಲಾಗಿದೆ. ಅರೆ! ಇಂಥ ವ್ಯವಸ್ಥೆ ಇದೆಯಾ ಎಂದು ನೀವು ಪ್ರಶ್ನಿಸುತ್ತೀರಾ? ಮುಂದಕ್ಕೆ ಓದಿ.

ಟಿಕೆಟ್ ಬುಕ್ ಮಾಡುವ ಸಮಯದಲ್ಲಿ ಅಡುಗೆ ಸೇವೆಗಳನ್ನು ಆಯ್ಕೆ ಮಾಡಿಕೊಳ್ಳದ ಪ್ರಯಾಣಿಕರು ಮತ್ತು ಆನ್‌ಬೋರ್ಡ್‌ನಲ್ಲಿ ಊಟವನ್ನು ಖರೀದಿಸಲು ನಿರ್ಧರಿಸಿದರೆ ಪ್ರತಿ ಆಹಾರಕ್ಕೆ 50 ರೂಪಾಯಿ ಹೆಚ್ಚುವರಿ ಮೊತ್ತದ ಶುಲ್ಕವನ್ನು IRCTCಯ ಆನ್-ಬೋರ್ಡ್ ಮೇಲ್ವಿಚಾರಕರು ವಿಧಿಸುತ್ತಾರೆ ಎಂದು ಭಾರತೀಯ ರೈಲ್ವೇಯು 2018ರಲ್ಲಿ ಸುತ್ತೋಲೆಯೊಂದನ್ನು ಪ್ರಕಟಿಸಿತ್ತು.

ರೈಲ್ವೇ ಪ್ರಕಾರ, ಪ್ರಯಾಣಿಕರು ತಮ್ಮ ಎಕ್ಸ್‌ಪ್ರೆಸ್ ರೈಲಿಗೆ ಟಿಕೆಟ್ ಕಾಯ್ದಿರಿಸುವಾಗ ಯಾವುದೇ ಆಹಾರವನ್ನು ಮುಂಚಿತವಾಗಿ ಆರ್ಡರ್ ಮಾಡದಿದ್ದರೆ, ಸವಾರಿಯ ಸಮಯದಲ್ಲಿ ಏನನ್ನಾದರೂ ಆರ್ಡರ್ ಮಾಡುವಾಗ ಅವರು 50 ರೂಪಾಯಿ ಸೇವಾ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಇದನ್ನೂ ಓದಿ: Viral Video: ಹಡಗಿನಲ್ಲಿ ಭಾರಿ ಜಗಳ, ವಿಡಿಯೋ ವೈರಲ್! ಅಷ್ಟಕ್ಕೂ ಹಡಗಿನಲ್ಲಿ ಆಗಿದ್ದೇನು ಗೊತ್ತಾ?

Published On - 10:09 pm, Fri, 1 July 22

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ