AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಮಿಜೋರಾಂನಲ್ಲಿ ಜನ ಹೇಗೆ ಟ್ರಾಫಿಕ್ ರೂಲ್ಸ್​ ಅನುಸರಿಸುತ್ತಾರೆ ಗೊತ್ತಾ?; ಆನಂದ್ ಮಹೀಂದ್ರಾ ಹಂಚಿಕೊಂಡ ಫೋಟೋ ವೈರಲ್

ಆನಂದ್ ಮಹೀಂದ್ರಾ ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಈ ಫೋಟೋಗೆ ಈಗಾಗಲೇ 42,000ಕ್ಕೂ ಹೆಚ್ಚು ಲೈಕ್‌ಗಳು ಬಂದಿವೆ.

Viral Photo: ಮಿಜೋರಾಂನಲ್ಲಿ ಜನ ಹೇಗೆ ಟ್ರಾಫಿಕ್ ರೂಲ್ಸ್​ ಅನುಸರಿಸುತ್ತಾರೆ ಗೊತ್ತಾ?; ಆನಂದ್ ಮಹೀಂದ್ರಾ ಹಂಚಿಕೊಂಡ ಫೋಟೋ ವೈರಲ್
ಆನಂದ್ ಮಹೀಂದ್ರಾ ಟ್ವೀಟ್ ಮಾಡಿದ ಫೋಟೋ
TV9 Web
| Edited By: |

Updated on:Mar 02, 2022 | 5:50 PM

Share

ಮಿಜೋರಾಂ: ನಗರದಲ್ಲಿ ಟ್ರಾಫಿಕ್ ಜಾಮ್‌ನಲ್ಲಿ ಸಿಲುಕಿಕೊಳ್ಳುವುದು ಸರ್ವೇಸಾಮಾನ್ಯ. ಗದ್ದಲ ಮತ್ತು ನಿರಂತರ ಹಾರ್ನ್‌ಗಳ ಮಧ್ಯೆ ಜನರು ಮುಂದೆ ಬರಲು ಪರದಾಡುವುದನ್ನು ನೋಡಬಹುದು. ಆದರೆ, ಕೈಗಾರಿಕೋದ್ಯಮಿ ಆನಂದ್ ಮಹೀಂದ್ರಾ (Anand Mahindra) ಅವರು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಈ ಫೋಟೋ ಜನರು ಟ್ರಾಫಿಕ್ ಜಾಮ್‌ನಲ್ಲಿ (Traffic Jam) ಹೇಗೆ ವರ್ತಿಸಬೇಕು ಎಂಬುದಕ್ಕೆ ಉತ್ತಮ ಉದಾಹರಣೆಯಾಗಿದೆ. ಈ ಫೋಟೋವನ್ನು ಆನಂದ್ ಮಹೀಂದ್ರಾ ಹಂಚಿಕೊಂಡಿದ್ದು, ಈಗಾಗಲೇ 42,000ಕ್ಕೂ ಹೆಚ್ಚು ಲೈಕ್‌ಗಳು ಬಂದಿವೆ.

ಟ್ವಿಟ್ಟರ್​​ನ ತಮ್ಮ ಇತ್ತೀಚಿನ ಪೋಸ್ಟ್‌ನಲ್ಲಿ ಆನಂದ್ ಮಹೀಂದ್ರಾ ಮಿಜೋರಾಂ ರಾಜ್ಯದ ಜನರು ಟ್ರಾಫಿಕ್ ನಿಯಮಗಳನ್ನು ಅನುಸರಿಸಿದ್ದಕ್ಕಾಗಿ ಶ್ಲಾಘಿಸಿದ್ದಾರೆ. ಈ ವಿಡಿಯೋ ನಮಗೆಲ್ಲರಿಗೂ ಉತ್ತಮವಾದ ಸಂದೇಶವನ್ನು ನೀಡುತ್ತದೆ. ಮಿಜೋರಾಂ ರಾಜ್ಯದ ಜನರನ್ನು ಹೊಗಳಿರುವ ಆನಂದ್ ಮಹೀಂದ್ರಾ ಬಹಳ ಚೆನ್ನಾಗಿ ಟ್ರಾಫಿಕ್ ರೂಲ್​ಗಳನ್ನು ಫಾಲೋ ಮಾಡುತ್ತಿರುವ ಜನರ ಫೋಟೋವೊಂದನ್ನು ಶೇರ್ ಮಾಡಿದ್ದಾರೆ.

ಎಂತಹ ಸೊಗಸಾದ ಚಿತ್ರ; ರಸ್ತೆ ಮಾರ್ಕರ್ ಮೇಲೆ ಒಂದು ವಾಹನವೂ ಅಡ್ಡಾಡುತ್ತಿಲ್ಲ. ಇದು ನಿಜಕ್ಕೂ ಸ್ಪೂರ್ತಿದಾಯಕವಾಗಿದೆ. ಅಷ್ಟೇ ಅಲ್ಲದೆ ಉತ್ತಮ ಸಂದೇಶವನ್ನು ಕೂಡ ಹೊಂದಿದೆ. ನಮ್ಮ ಜೀವನದ ಗುಣಮಟ್ಟವನ್ನು ಸುಧಾರಿಸುವುದು ನಮಗೇ ಬಿಟ್ಟ ವಿಚಾರವಾಗಿದೆ. ನಿಯಮಗಳನ್ನು ಪಾಲಿಸಿ… ಈ ವಿಚಾರದಲ್ಲಿ ಮಿಜೋರಾಂಗೆ ದೊಡ್ಡ ಚಪ್ಪಾಳೆ ಎಂದು ಅವರು ಸಂದೀಪ್ ಅಹ್ಲಾವತ್ ಎಂಬ ವ್ಯಕ್ತಿಯ ಟ್ವೀಟ್ ಅನ್ನು ಆನಂದ್ ಮಹೀಂದ್ರಾ ರೀಟ್ವೀಟ್ ಮಾಡಿದ್ದಾರೆ.

ಮೂಲ ಟ್ವೀಟ್ ಪ್ರಕಾರ ಈ ಫೋಟೋ ಮಿಜೋರಾಂನದ್ದಾಗಿದೆ. ರಸ್ತೆಯಲ್ಲಿ ಟ್ರಾಫಿಕ್ ಎಷ್ಟೇ ಇದ್ದರೂ ವಾಹನಗಳು ಸಾಲಿನಲ್ಲಿ ಕ್ರಮಬದ್ಧವಾಗಿ ಕಾಯುತ್ತಿರುವುದನ್ನು ವಿಡಿಯೋದಲ್ಲಿ ನೋಡಬಹುದು. ಎದುರು ಬದಿಯಿಂದ ಯಾವುದೇ ವಾಹನಗಳು ಬರದಿದ್ದರೂ ಒಂದು ವಾಹನವೂ ರಸ್ತೆಯ ಮತ್ತೊಂದು ಭಾಗದಲ್ಲಿ ಸಂಚರಿಸುವುದಿಲ್ಲ.

ಮಿಜೋರಾಂ ಮತ್ತು ಮೇಘಾಲಯದ ಟ್ರಾಫಿಕ್ ಪೋಲೀಸರು ತುಂಬಾ ಕಟ್ಟುನಿಟ್ಟಿನಿಂದ ಕೂಡಿದ್ದಾರೆ. ಅವರು ಶಾಸಕರನ್ನೂ ಕೂಡ ಟ್ರಾಫಿಕ್ ನಿಯಮ ಉಲ್ಲಂಘಿಸಲು ಬಿಡುವುದಿಲ್ಲ. ಈ ರೀತಿಯ ಕಟ್ಟುನಿಟ್ಟಿನ ಟ್ರಾಫಿಕ್ ನಿಯಮಗಳನ್ನು ಇತರೆ ನಗರಗಳಲ್ಲಿಯೂ ಅದರಲ್ಲೂ ವಿಶೇಷವಾಗಿ ಮುಂಬೈನಲ್ಲಿ ಜಾರಿಗೊಳಿಸಬೇಕು ಎಂದು ಮತ್ತೊಬ್ಬರು ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ: Viral Photo: ಹಸಿರು ತುಂಬಿದ ತಮಿಳುನಾಡಿನ ರಸ್ತೆಯ ಫೋಟೋವನ್ನು ರೀ ಟ್ವೀಟ್​ ಮಾಡಿದ ಆನಂದ್​ ಮಹೀಂದ್ರಾ

Viral News: ಆ ಒಂದು ಫೋಟೋದಿಂದ ಅದೃಷ್ಟವೇ ಬದಲಾಯ್ತು; ಕೇರಳದ ಕೂಲಿ ಕಾರ್ಮಿಕ ಈಗ ಸೂಪರ್ ಮಾಡೆಲ್!

Published On - 5:49 pm, Wed, 2 March 22

Follow Us
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್