AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್

ಕಾಲೇಜಿನಿಂದ ಪದವಿ ಪಡೆದ ನಂತರ ಅಪೇಕ್ಷಾ ನಿಂಬಾಡಿಯಾ ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಡಿಎಸ್​ಪಿಯಾಗಿ ಸೇರಿದರು. ಅಪೇಕ್ಷಾ ತಮ್ಮ ಕುಟುಂಬದ ಮೂರನೇ ತಲೆಮರಿನ ಪೊಲೀಸ್ ಅಧಿಕಾರಿಯಾಗಿದ್ದಾರೆ.

Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್
ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು
TV9 Web
| Edited By: |

Updated on: Nov 02, 2021 | 2:18 PM

Share

ಹೆಣ್ಣುಮಕ್ಕಳಿಗೆ ತಮ್ಮ ತಂದೆಯೇ ಮೊದಲ ಹೀರೋ. ಅಪ್ಪನನ್ನು ನೋಡಿಕೊಂಡೇ ಬೆಳೆಯುವ ಹೆಣ್ಣುಮಕ್ಕಳ ಪಾಲಿಗೆ ಅಪ್ಪ ಎಂದಿಗೂ ರಿಯಲ್ ಹೀರೋ. ಈ ರಿಯಲ್ ಹೀರೋ ಅಪ್ಪನಿಗೆ ಮಗಳೇ ಸೆಲ್ಯೂಟ್ ಹೊಡೆದಿರುವ ಫೋಟೋ ವೈರಲ್ ಆಗಿದೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಪೊಲೀಸ್ ಸಮವಸ್ತ್ರವನ್ನು ಧರಿಸಿರುವ ಮಹಿಳೆ ಪೊಲೀಸ್ ಅಧಿಕಾರಿಯಾಗಿರುವ ತನ್ನ ತಂದೆಗೆ ಸೆಲ್ಯೂಟ್ ಮಾಡುತ್ತಿರುವ ಫೋಟೋ ಭಾರೀ ವೈರಲ್ ಆಗಿದೆ.

ಮಗಳಿಂದ ಸೆಲ್ಯೂಟ್ ಸ್ವೀಕರಿಸಿರುವ ತಂದೆ ತಾವೂ ಆಕೆಗೆ ಸೆಲ್ಯೂಟ್ ಮಾಡಿದ್ದಾರೆ. ಈ ಹೆಮ್ಮೆಯ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಂತರ್ಜಾಲದಲ್ಲಿ ವೈರಲ್ ಆಗಿರುವ ಫೋಟೋದಲ್ಲಿ ಈ ಕ್ಷಣವನ್ನು ಸುಂದರವಾಗಿ ಸೆರೆಹಿಡಿಯಲಾಗಿದೆ. “ಹೆಮ್ಮೆಯ ತಂದೆಗೆ ಹೆಮ್ಮೆಯ ಮಗಳಿಂದ ಸೆಲ್ಯೂಟ್” ಎಂದು ಐಟಿಬಿಪಿ ಈ ಫೋಟೋಗೆ ಕ್ಯಾಪ್ಷನ್ ನೀಡಲಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಪೊಲೀಸ್ ಅಕಾಡೆಮಿಯಲ್ಲಿ ಪದವಿ ಪಡೆದ ಯುವತಿ ಅಪೇಕ್ಷಾ ನಿಂಬಾಡಿಯಾ ಡಿಎಸ್​ಪಿಯಾಗಿದ್ದು, ಆಕೆಯ ತಂದೆಯಾಗಿರುವ ಎಪಿಎಸ್ ಅಧಿಕಾರಿ ನಿಂಬಾಡಿಯಾ ಅವರು ಐಟಿಬಿಪಿಯಲ್ಲಿ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಗಿದ್ದಾರೆ. ಡಿಐಜಿಯಾಗಿರುವ ತನ್ನ ತಂದೆಗೆ ಮಗಳು ಅಪೇಕ್ಷಾ ಸಲ್ಯೂಟ್ ಮಾಡಿದ್ದಾರೆ.

View this post on Instagram

A post shared by ITBP (@itbp_official)

ಕಾಲೇಜಿನಿಂದ ಪದವಿ ಪಡೆದ ನಂತರ ಅಪೇಕ್ಷಾ ನಿಂಬಾಡಿಯಾ ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಡಿಎಸ್​ಪಿಯಾಗಿ ಸೇರಿದರು. ಅಪೇಕ್ಷಾ ತಮ್ಮ ಕುಟುಂಬದ ಮೂರನೇ ತಲೆಮಾರಿನ ಪೊಲೀಸ್ ಅಧಿಕಾರಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಡಿಎಸ್‌ಪಿಯಾಗಿ ಇತ್ತೀಚೆಗೆ ನೇಮಕಗೊಂಡಿರುವ ಅಪೇಕ್ಷಾ ನಿಂಬಾಡಿಯಾ ಅವರು ಐಟಿಬಿಪಿಯಲ್ಲಿ ಡಿಐಜಿಯಾಗಿ ಸೇವೆ ಸಲ್ಲಿಸುತ್ತಿರುವ ತನ್ನ ತಂದೆ ಎಪಿಎಸ್ ನಿಂಬಾಡಿಯಾ ಅವರಿಗೆ ವಂದನೆ ಸಲ್ಲಿಸುತ್ತಿರುವ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Mandya: ಮಂಡ್ಯ ಎಸ್​ಪಿ ಹುದ್ದೆ ಹರಾಜಿಗಿದೆ; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ರಾಯ್ ಆತ್ಮಹತ್ಯೆ ತನಿಖೆ ಬಗ್ಗೆ ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ವೆಸ್ಟ್ ಇಂಡೀಸ್ ಸ್ಕೋರ್ 114 ರನ್: 118 ರನ್ ಬಾರಿಸಿ ಸೋತ ಸೌತ್ ಆಫ್ರಿಕಾ
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಮಹಿಳಾ ಸಬಲೀಕರಣ ಮತ್ತು ಉದ್ಯೋಗ ಸೃಷ್ಟಿಗೆ ವಿಶೇಷ ಒತ್ತು
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಚಲನಚಿತ್ರ ವಾಣಿಜ್ಯ ಮಂಡಳಿ ನೂತನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ಜಯಮಾಲಾ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಕೇಂದ್ರ ಬಜೆಟ್‌ ಮಂಡನೆ ನೇರಪ್ರಸಾರವನ್ನು ಇಲ್ಲಿ ವೀಕ್ಷಿಸಿ
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಒಂದೇ ಪಂದ್ಯದಲ್ಲಿ ಬರೋಬ್ಬರಿ 11 ವಿಕೆಟ್ ಕಬಳಿಸಿದ ಶಹಬಾಝ್ ಅಹ್ಮದ್
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ಮಾಘ ಹುಣ್ಣಿಮೆ: ಕಾವೇರಿ ತ್ರಿವೇಣಿ ಸಂಗಮದಲ್ಲಿ ಪುಣ್ಯ ಸ್ನಾನಕ್ಕೆ ಭಕ್ತಸಾಗರ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
ನಿರ್ಮಲಾ ಸೀತಾರಾಮನ್​​​​​ಗೆ ಚಾರ್ಕೋಲ್ ಸ್ಕೆಚ್ ಮೂಲಕ ಸ್ವಾಗತ
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
5 ವಿಕೆಟ್​ ಕಬಳಿಸಿ ಅತ್ಯಂತ ಹೀನಾಯ ದಾಖಲೆ ಬರೆದ ಅರ್ಷದೀಪ್ ಸಿಂಗ್
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ
‘ಕಲ್ಟ್’ ಸಿನಿಮಾ ನೋಡಿ ಕಣ್ಣೀರು ಹಾಕಿದ ಸಿಎಂ ಸಿದ್ದರಾಮಯ್ಯ