AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್

ಕಾಲೇಜಿನಿಂದ ಪದವಿ ಪಡೆದ ನಂತರ ಅಪೇಕ್ಷಾ ನಿಂಬಾಡಿಯಾ ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಡಿಎಸ್​ಪಿಯಾಗಿ ಸೇರಿದರು. ಅಪೇಕ್ಷಾ ತಮ್ಮ ಕುಟುಂಬದ ಮೂರನೇ ತಲೆಮರಿನ ಪೊಲೀಸ್ ಅಧಿಕಾರಿಯಾಗಿದ್ದಾರೆ.

Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್
ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು
TV9 Web
| Updated By: ಸುಷ್ಮಾ ಚಕ್ರೆ|

Updated on: Nov 02, 2021 | 2:18 PM

Share

ಹೆಣ್ಣುಮಕ್ಕಳಿಗೆ ತಮ್ಮ ತಂದೆಯೇ ಮೊದಲ ಹೀರೋ. ಅಪ್ಪನನ್ನು ನೋಡಿಕೊಂಡೇ ಬೆಳೆಯುವ ಹೆಣ್ಣುಮಕ್ಕಳ ಪಾಲಿಗೆ ಅಪ್ಪ ಎಂದಿಗೂ ರಿಯಲ್ ಹೀರೋ. ಈ ರಿಯಲ್ ಹೀರೋ ಅಪ್ಪನಿಗೆ ಮಗಳೇ ಸೆಲ್ಯೂಟ್ ಹೊಡೆದಿರುವ ಫೋಟೋ ವೈರಲ್ ಆಗಿದೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಪೊಲೀಸ್ ಸಮವಸ್ತ್ರವನ್ನು ಧರಿಸಿರುವ ಮಹಿಳೆ ಪೊಲೀಸ್ ಅಧಿಕಾರಿಯಾಗಿರುವ ತನ್ನ ತಂದೆಗೆ ಸೆಲ್ಯೂಟ್ ಮಾಡುತ್ತಿರುವ ಫೋಟೋ ಭಾರೀ ವೈರಲ್ ಆಗಿದೆ.

ಮಗಳಿಂದ ಸೆಲ್ಯೂಟ್ ಸ್ವೀಕರಿಸಿರುವ ತಂದೆ ತಾವೂ ಆಕೆಗೆ ಸೆಲ್ಯೂಟ್ ಮಾಡಿದ್ದಾರೆ. ಈ ಹೆಮ್ಮೆಯ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಂತರ್ಜಾಲದಲ್ಲಿ ವೈರಲ್ ಆಗಿರುವ ಫೋಟೋದಲ್ಲಿ ಈ ಕ್ಷಣವನ್ನು ಸುಂದರವಾಗಿ ಸೆರೆಹಿಡಿಯಲಾಗಿದೆ. “ಹೆಮ್ಮೆಯ ತಂದೆಗೆ ಹೆಮ್ಮೆಯ ಮಗಳಿಂದ ಸೆಲ್ಯೂಟ್” ಎಂದು ಐಟಿಬಿಪಿ ಈ ಫೋಟೋಗೆ ಕ್ಯಾಪ್ಷನ್ ನೀಡಲಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಪೊಲೀಸ್ ಅಕಾಡೆಮಿಯಲ್ಲಿ ಪದವಿ ಪಡೆದ ಯುವತಿ ಅಪೇಕ್ಷಾ ನಿಂಬಾಡಿಯಾ ಡಿಎಸ್​ಪಿಯಾಗಿದ್ದು, ಆಕೆಯ ತಂದೆಯಾಗಿರುವ ಎಪಿಎಸ್ ಅಧಿಕಾರಿ ನಿಂಬಾಡಿಯಾ ಅವರು ಐಟಿಬಿಪಿಯಲ್ಲಿ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಗಿದ್ದಾರೆ. ಡಿಐಜಿಯಾಗಿರುವ ತನ್ನ ತಂದೆಗೆ ಮಗಳು ಅಪೇಕ್ಷಾ ಸಲ್ಯೂಟ್ ಮಾಡಿದ್ದಾರೆ.

View this post on Instagram

A post shared by ITBP (@itbp_official)

ಕಾಲೇಜಿನಿಂದ ಪದವಿ ಪಡೆದ ನಂತರ ಅಪೇಕ್ಷಾ ನಿಂಬಾಡಿಯಾ ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಡಿಎಸ್​ಪಿಯಾಗಿ ಸೇರಿದರು. ಅಪೇಕ್ಷಾ ತಮ್ಮ ಕುಟುಂಬದ ಮೂರನೇ ತಲೆಮಾರಿನ ಪೊಲೀಸ್ ಅಧಿಕಾರಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಡಿಎಸ್‌ಪಿಯಾಗಿ ಇತ್ತೀಚೆಗೆ ನೇಮಕಗೊಂಡಿರುವ ಅಪೇಕ್ಷಾ ನಿಂಬಾಡಿಯಾ ಅವರು ಐಟಿಬಿಪಿಯಲ್ಲಿ ಡಿಐಜಿಯಾಗಿ ಸೇವೆ ಸಲ್ಲಿಸುತ್ತಿರುವ ತನ್ನ ತಂದೆ ಎಪಿಎಸ್ ನಿಂಬಾಡಿಯಾ ಅವರಿಗೆ ವಂದನೆ ಸಲ್ಲಿಸುತ್ತಿರುವ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Mandya: ಮಂಡ್ಯ ಎಸ್​ಪಿ ಹುದ್ದೆ ಹರಾಜಿಗಿದೆ; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ