Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್

ಕಾಲೇಜಿನಿಂದ ಪದವಿ ಪಡೆದ ನಂತರ ಅಪೇಕ್ಷಾ ನಿಂಬಾಡಿಯಾ ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಡಿಎಸ್​ಪಿಯಾಗಿ ಸೇರಿದರು. ಅಪೇಕ್ಷಾ ತಮ್ಮ ಕುಟುಂಬದ ಮೂರನೇ ತಲೆಮರಿನ ಪೊಲೀಸ್ ಅಧಿಕಾರಿಯಾಗಿದ್ದಾರೆ.

Viral Photo: ಡಿಐಜಿಯಾಗಿರುವ ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು; ಹೆಮ್ಮೆಯ ಕ್ಷಣದ ಫೋಟೋ ವೈರಲ್
ಅಪ್ಪನಿಗೆ ಸಲ್ಯೂಟ್ ಮಾಡಿದ ಪೊಲೀಸ್ ಅಧಿಕಾರಿ ಮಗಳು
Follow us
| Updated By: ಸುಷ್ಮಾ ಚಕ್ರೆ

Updated on: Nov 02, 2021 | 2:18 PM

ಹೆಣ್ಣುಮಕ್ಕಳಿಗೆ ತಮ್ಮ ತಂದೆಯೇ ಮೊದಲ ಹೀರೋ. ಅಪ್ಪನನ್ನು ನೋಡಿಕೊಂಡೇ ಬೆಳೆಯುವ ಹೆಣ್ಣುಮಕ್ಕಳ ಪಾಲಿಗೆ ಅಪ್ಪ ಎಂದಿಗೂ ರಿಯಲ್ ಹೀರೋ. ಈ ರಿಯಲ್ ಹೀರೋ ಅಪ್ಪನಿಗೆ ಮಗಳೇ ಸೆಲ್ಯೂಟ್ ಹೊಡೆದಿರುವ ಫೋಟೋ ವೈರಲ್ ಆಗಿದೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ITBP) ಪೊಲೀಸ್ ಸಮವಸ್ತ್ರವನ್ನು ಧರಿಸಿರುವ ಮಹಿಳೆ ಪೊಲೀಸ್ ಅಧಿಕಾರಿಯಾಗಿರುವ ತನ್ನ ತಂದೆಗೆ ಸೆಲ್ಯೂಟ್ ಮಾಡುತ್ತಿರುವ ಫೋಟೋ ಭಾರೀ ವೈರಲ್ ಆಗಿದೆ.

ಮಗಳಿಂದ ಸೆಲ್ಯೂಟ್ ಸ್ವೀಕರಿಸಿರುವ ತಂದೆ ತಾವೂ ಆಕೆಗೆ ಸೆಲ್ಯೂಟ್ ಮಾಡಿದ್ದಾರೆ. ಈ ಹೆಮ್ಮೆಯ ಕ್ಷಣ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಅಂತರ್ಜಾಲದಲ್ಲಿ ವೈರಲ್ ಆಗಿರುವ ಫೋಟೋದಲ್ಲಿ ಈ ಕ್ಷಣವನ್ನು ಸುಂದರವಾಗಿ ಸೆರೆಹಿಡಿಯಲಾಗಿದೆ. “ಹೆಮ್ಮೆಯ ತಂದೆಗೆ ಹೆಮ್ಮೆಯ ಮಗಳಿಂದ ಸೆಲ್ಯೂಟ್” ಎಂದು ಐಟಿಬಿಪಿ ಈ ಫೋಟೋಗೆ ಕ್ಯಾಪ್ಷನ್ ನೀಡಲಾಗಿದೆ. ಉತ್ತರ ಪ್ರದೇಶದ ಮೊರಾದಾಬಾದ್‌ನಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಪೊಲೀಸ್ ಅಕಾಡೆಮಿಯಲ್ಲಿ ಪದವಿ ಪಡೆದ ಯುವತಿ ಅಪೇಕ್ಷಾ ನಿಂಬಾಡಿಯಾ ಡಿಎಸ್​ಪಿಯಾಗಿದ್ದು, ಆಕೆಯ ತಂದೆಯಾಗಿರುವ ಎಪಿಎಸ್ ಅಧಿಕಾರಿ ನಿಂಬಾಡಿಯಾ ಅವರು ಐಟಿಬಿಪಿಯಲ್ಲಿ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ ಆಗಿದ್ದಾರೆ. ಡಿಐಜಿಯಾಗಿರುವ ತನ್ನ ತಂದೆಗೆ ಮಗಳು ಅಪೇಕ್ಷಾ ಸಲ್ಯೂಟ್ ಮಾಡಿದ್ದಾರೆ.

View this post on Instagram

A post shared by ITBP (@itbp_official)

ಕಾಲೇಜಿನಿಂದ ಪದವಿ ಪಡೆದ ನಂತರ ಅಪೇಕ್ಷಾ ನಿಂಬಾಡಿಯಾ ಉತ್ತರ ಪ್ರದೇಶ ಪೊಲೀಸ್ ಇಲಾಖೆಯಲ್ಲಿ ಡಿಎಸ್​ಪಿಯಾಗಿ ಸೇರಿದರು. ಅಪೇಕ್ಷಾ ತಮ್ಮ ಕುಟುಂಬದ ಮೂರನೇ ತಲೆಮಾರಿನ ಪೊಲೀಸ್ ಅಧಿಕಾರಿಯಾಗಿದ್ದಾರೆ. ಉತ್ತರ ಪ್ರದೇಶದಲ್ಲಿ ಡಿಎಸ್‌ಪಿಯಾಗಿ ಇತ್ತೀಚೆಗೆ ನೇಮಕಗೊಂಡಿರುವ ಅಪೇಕ್ಷಾ ನಿಂಬಾಡಿಯಾ ಅವರು ಐಟಿಬಿಪಿಯಲ್ಲಿ ಡಿಐಜಿಯಾಗಿ ಸೇವೆ ಸಲ್ಲಿಸುತ್ತಿರುವ ತನ್ನ ತಂದೆ ಎಪಿಎಸ್ ನಿಂಬಾಡಿಯಾ ಅವರಿಗೆ ವಂದನೆ ಸಲ್ಲಿಸುತ್ತಿರುವ ಫೋಟೋಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ: Mandya: ಮಂಡ್ಯ ಎಸ್​ಪಿ ಹುದ್ದೆ ಹರಾಜಿಗಿದೆ; ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ವೈರಲ್

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

ತಾಜಾ ಸುದ್ದಿ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಟ್ರಾಫಿಕ್ ರೂಲ್ಸ್​ ಉಲ್ಲಂಘಿಸುವವರೇ ಹುಷಾರ್​! ಬಂದಿದೆ ಉನ್ನತ ತಂತ್ರಜ್ಞಾನ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಮಂಗಳೂರು: ಸುಂಟರಗಾಳಿಗೆ ಧರೆಗೆ ಉರುಳಿದ ವಿದ್ಯುತ್ ಕಂಬ, ಮರ; ವಿಡಿಯೋ ನೋಡಿ
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
ಚಾಮುಂಡಿ ದರ್ಶನಕ್ಕೆ ಬಂದ ದಿನಕರ್, ಚಿಕ್ಕಣ್ಣ; ಜನಜಂಗುಳಿಯಲ್ಲಿ ಹೈರಾಣು
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ