AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಕೈಗಾಡಿಯಲ್ಲಿ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೃದ್ಧ; ಚಿಕಿತ್ಸೆ ವೇಳೆ ವೃದ್ಧೆ ಸಾವು

ಚಿಲ್ಖರ್ ಬ್ಲಾಕ್‌ನ ಗ್ರಾಮದ ನಿವಾಸಿ 58 ವರ್ಷದ ಸಕುಲ್ ಪ್ರಜಾಪತಿ ತನ್ನ ಅನಾರೋಗ್ಯದಿಂದ ಬಳಲುತ್ತಿರುವ 55 ವರ್ಷದ ಪತ್ನಿ ಜೋಗ್ನಿಯನ್ನು ಕೈಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆ ಫೋಟೋ ಭಾರೀ ವೈರಲ್ ಆಗಿದೆ.

Viral Photo: ಕೈಗಾಡಿಯಲ್ಲಿ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೃದ್ಧ; ಚಿಕಿತ್ಸೆ ವೇಳೆ ವೃದ್ಧೆ ಸಾವು
ಹೆಂಡತಿಯನ್ನು ಕೈಗಾಡಿಯಲ್ಲಿ ಎಳೆದೊಯ್ಯುತ್ತಿರುವ ವೃದ್ಧ
TV9 Web
| Edited By: |

Updated on: Apr 06, 2022 | 5:17 PM

Share

ಬಲ್ಲಿಯಾ: ಉತ್ತರ ಪ್ರದೇಶದ (Uttar Pradesh) ಬಲ್ಲಿಯಾ ಜಿಲ್ಲೆಯಲ್ಲಿ ವೃದ್ಧರೊಬ್ಬರು ಅನಾರೋಗ್ಯಕ್ಕೊಳಗಾಗಿದ್ದ ಹೆಂಡತಿಯನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಎಳೆದುಕೊಂಡು ಹೋಗುತ್ತಿರುವ ಹೃದಯವಿದ್ರಾವಕ ಫೋಟೋ ವೈರಲ್ (Viral Photo) ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಸೂಚಿಸಿದ್ದಾರೆ. ಬಲ್ಲಿಯಾ ಜಿಲ್ಲೆಯ ಅಂದೂರು ಗ್ರಾಮದಲ್ಲಿ ಮಾರ್ಚ್ 28ರಂದು ಈ ಘಟನೆ ನಡೆದಿದೆ. ಆರೋಗ್ಯ ಸಚಿವಾಲಯದ ಖಾತೆಯನ್ನು ಹೊಂದಿರುವ ಬ್ರಜೇಶ್ ಪಾಠಕ್ ಅವರು ಟ್ವೀಟ್ ಮಾಡಿದ್ದಾರೆ. ಬಲ್ಲಿಯಾದಲ್ಲಿ ವೃದ್ಧರೊಬ್ಬರು ರೋಗಿಯನ್ನು ಕೈಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದನ್ನು ನೋಡಬಹುದು. ಈ ಬಗ್ಗೆ ಮಾಹಿತಿ ಪಡೆದ ನಂತರ ವೈರಲ್ ಆಗಿರುವ ವಿಡಿಯೋದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಮಹಾನಿರ್ದೇಶಕರನ್ನು ಕೇಳಲಾಗಿದೆ ಎಂದಿದ್ದಾರೆ.

ಈ ಫೋಟೋದಲ್ಲಿ ಚಿಲ್ಖರ್ ಬ್ಲಾಕ್‌ನ ಗ್ರಾಮದ ನಿವಾಸಿ 58 ವರ್ಷದ ಸಕುಲ್ ಪ್ರಜಾಪತಿ ತನ್ನ ಅನಾರೋಗ್ಯದಿಂದ ಬಳಲುತ್ತಿರುವ 55 ವರ್ಷದ ಪತ್ನಿ ಜೋಗ್ನಿಯನ್ನು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಸಕುಲ್ ಪ್ರಜಾಪತಿ ತನ್ನ ಹೆಂಡತಿಯನ್ನು ತನ್ನ ಮನೆಯಿಂದ 3 ಕಿ.ಮೀ ದೂರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕೈಗಾಡಿಯಲ್ಲಿ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿನ ವೈದ್ಯರು ಕೆಲವು ಔಷಧಿಗಳನ್ನು ನೀಡಿ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಹೇಳಿದ್ದಾರೆ. ನಂತರ ಆ ವೃದ್ಧ ಕೈಗಾಡಿಯಲ್ಲಿಯೇ ತನ್ನ ಹೆಂಡತಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಅವರ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ 11 ಗಂಟೆ ಸುಮಾರಿಗೆ ಸಾವು ಸಂಭವಿಸಿದೆ ಎಂದು ಪ್ರಜಾಪತಿ ಹೇಳಿದ್ದಾರೆ. ಆ ಶವವನ್ನು ವೃದ್ಧನ ಮನೆಗೆ ಕೊಂಡೊಯ್ಯಲು ಆಸ್ಪ್ರೆಯಲ್ಲಿ ನಿರಾಕರಿಸಲಾಯಿತು. ನಂತರ 1,100 ರೂ.ಗೆ ಖಾಸಗಿ ಆಂಬ್ಯುಲೆನ್ಸ್ ಬಾಡಿಗೆಗೆ ಪಡೆದು, ಶವವನ್ನು ತೆಗೆದುಕೊಂಡು ಹೋಗಲಾಯಿತು. ಈ ಬಗ್ಗೆ ತನಿಖೆ ನಡೆಸುವಂತೆ ವೈದ್ಯಕೀಯ ಮತ್ತು ಆರೋಗ್ಯ ಮಹಾನಿರ್ದೇಶಕರಿಗೆ ಉಪಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ನೀರಜ್ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: Viral Photo: ರಾಜಸ್ಥಾನ ಹಿಂಸಾಚಾರ; ಸುಡುವ ಕಟ್ಟಡದಿಂದ ಜೀವದ ಹಂಗು ತೊರೆದು ಮಗುವನ್ನು ಕಾಪಾಡಿದ ಪೊಲೀಸ್

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Follow Us
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ