AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Photo: ಕೈಗಾಡಿಯಲ್ಲಿ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೃದ್ಧ; ಚಿಕಿತ್ಸೆ ವೇಳೆ ವೃದ್ಧೆ ಸಾವು

ಚಿಲ್ಖರ್ ಬ್ಲಾಕ್‌ನ ಗ್ರಾಮದ ನಿವಾಸಿ 58 ವರ್ಷದ ಸಕುಲ್ ಪ್ರಜಾಪತಿ ತನ್ನ ಅನಾರೋಗ್ಯದಿಂದ ಬಳಲುತ್ತಿರುವ 55 ವರ್ಷದ ಪತ್ನಿ ಜೋಗ್ನಿಯನ್ನು ಕೈಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಆ ಫೋಟೋ ಭಾರೀ ವೈರಲ್ ಆಗಿದೆ.

Viral Photo: ಕೈಗಾಡಿಯಲ್ಲಿ ಹೆಂಡತಿಯನ್ನು ಆಸ್ಪತ್ರೆಗೆ ಕರೆದುಕೊಂಡು ಹೋದ ವೃದ್ಧ; ಚಿಕಿತ್ಸೆ ವೇಳೆ ವೃದ್ಧೆ ಸಾವು
ಹೆಂಡತಿಯನ್ನು ಕೈಗಾಡಿಯಲ್ಲಿ ಎಳೆದೊಯ್ಯುತ್ತಿರುವ ವೃದ್ಧ
TV9 Web
| Edited By: |

Updated on: Apr 06, 2022 | 5:17 PM

Share

ಬಲ್ಲಿಯಾ: ಉತ್ತರ ಪ್ರದೇಶದ (Uttar Pradesh) ಬಲ್ಲಿಯಾ ಜಿಲ್ಲೆಯಲ್ಲಿ ವೃದ್ಧರೊಬ್ಬರು ಅನಾರೋಗ್ಯಕ್ಕೊಳಗಾಗಿದ್ದ ಹೆಂಡತಿಯನ್ನು ತಳ್ಳುಗಾಡಿಯಲ್ಲಿ ಆಸ್ಪತ್ರೆಗೆ ಎಳೆದುಕೊಂಡು ಹೋಗುತ್ತಿರುವ ಹೃದಯವಿದ್ರಾವಕ ಫೋಟೋ ವೈರಲ್ (Viral Photo) ಆಗಿದೆ. ಈ ಬಗ್ಗೆ ತನಿಖೆ ನಡೆಸುವಂತೆ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಸೂಚಿಸಿದ್ದಾರೆ. ಬಲ್ಲಿಯಾ ಜಿಲ್ಲೆಯ ಅಂದೂರು ಗ್ರಾಮದಲ್ಲಿ ಮಾರ್ಚ್ 28ರಂದು ಈ ಘಟನೆ ನಡೆದಿದೆ. ಆರೋಗ್ಯ ಸಚಿವಾಲಯದ ಖಾತೆಯನ್ನು ಹೊಂದಿರುವ ಬ್ರಜೇಶ್ ಪಾಠಕ್ ಅವರು ಟ್ವೀಟ್ ಮಾಡಿದ್ದಾರೆ. ಬಲ್ಲಿಯಾದಲ್ಲಿ ವೃದ್ಧರೊಬ್ಬರು ರೋಗಿಯನ್ನು ಕೈಗಾಡಿಯಲ್ಲಿ ಆಸ್ಪತ್ರೆಗೆ ಕರೆದೊಯ್ಯುತ್ತಿರುವುದನ್ನು ನೋಡಬಹುದು. ಈ ಬಗ್ಗೆ ಮಾಹಿತಿ ಪಡೆದ ನಂತರ ವೈರಲ್ ಆಗಿರುವ ವಿಡಿಯೋದ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆರೋಗ್ಯ ಇಲಾಖೆಯ ಮಹಾನಿರ್ದೇಶಕರನ್ನು ಕೇಳಲಾಗಿದೆ ಎಂದಿದ್ದಾರೆ.

ಈ ಫೋಟೋದಲ್ಲಿ ಚಿಲ್ಖರ್ ಬ್ಲಾಕ್‌ನ ಗ್ರಾಮದ ನಿವಾಸಿ 58 ವರ್ಷದ ಸಕುಲ್ ಪ್ರಜಾಪತಿ ತನ್ನ ಅನಾರೋಗ್ಯದಿಂದ ಬಳಲುತ್ತಿರುವ 55 ವರ್ಷದ ಪತ್ನಿ ಜೋಗ್ನಿಯನ್ನು ಗಾಡಿಯಲ್ಲಿ ಆಸ್ಪತ್ರೆಗೆ ಸಾಗಿಸುತ್ತಿದ್ದಾರೆ. ಸಕುಲ್ ಪ್ರಜಾಪತಿ ತನ್ನ ಹೆಂಡತಿಯನ್ನು ತನ್ನ ಮನೆಯಿಂದ 3 ಕಿ.ಮೀ ದೂರದಲ್ಲಿರುವ ಆರೋಗ್ಯ ಕೇಂದ್ರಕ್ಕೆ ಕೈಗಾಡಿಯಲ್ಲಿ ಕರೆದುಕೊಂಡು ಹೋಗಿದ್ದಾರೆ.

ಅಲ್ಲಿನ ವೈದ್ಯರು ಕೆಲವು ಔಷಧಿಗಳನ್ನು ನೀಡಿ ಆಕೆಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಲು ಹೇಳಿದ್ದಾರೆ. ನಂತರ ಆ ವೃದ್ಧ ಕೈಗಾಡಿಯಲ್ಲಿಯೇ ತನ್ನ ಹೆಂಡತಿಯನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ, ಅವರ ಪತ್ನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ವೇಳೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾತ್ರಿ 11 ಗಂಟೆ ಸುಮಾರಿಗೆ ಸಾವು ಸಂಭವಿಸಿದೆ ಎಂದು ಪ್ರಜಾಪತಿ ಹೇಳಿದ್ದಾರೆ. ಆ ಶವವನ್ನು ವೃದ್ಧನ ಮನೆಗೆ ಕೊಂಡೊಯ್ಯಲು ಆಸ್ಪ್ರೆಯಲ್ಲಿ ನಿರಾಕರಿಸಲಾಯಿತು. ನಂತರ 1,100 ರೂ.ಗೆ ಖಾಸಗಿ ಆಂಬ್ಯುಲೆನ್ಸ್ ಬಾಡಿಗೆಗೆ ಪಡೆದು, ಶವವನ್ನು ತೆಗೆದುಕೊಂಡು ಹೋಗಲಾಯಿತು. ಈ ಬಗ್ಗೆ ತನಿಖೆ ನಡೆಸುವಂತೆ ವೈದ್ಯಕೀಯ ಮತ್ತು ಆರೋಗ್ಯ ಮಹಾನಿರ್ದೇಶಕರಿಗೆ ಉಪಮುಖ್ಯಮಂತ್ರಿ ಆದೇಶಿಸಿದ್ದಾರೆ ಎಂದು ಮುಖ್ಯ ವೈದ್ಯಾಧಿಕಾರಿ ನೀರಜ್ ಪಾಂಡೆ ತಿಳಿಸಿದ್ದಾರೆ.

ಇದನ್ನೂ ಓದಿ: Viral Photo: ರಾಜಸ್ಥಾನ ಹಿಂಸಾಚಾರ; ಸುಡುವ ಕಟ್ಟಡದಿಂದ ಜೀವದ ಹಂಗು ತೊರೆದು ಮಗುವನ್ನು ಕಾಪಾಡಿದ ಪೊಲೀಸ್

Viral Photo: ಕುಕ್ಕರ್ ಜೊತೆ ಮದುವೆಯಾಗಿ ಎರಡೇ ದಿನಕ್ಕೆ ಡೈವೋರ್ಸ್ ನೀಡಿದ ಯುವಕ; ಕಾರಣವೇನು ಗೊತ್ತಾ?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ