AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಮಗನ ಪ್ಲೇ ಸ್ಕೂಲ್ ಫೀಸ್ 4.3 ಲಕ್ಷ ರೂ.; ಫೀಸ್​​ ಸ್ಕ್ರೀನ್‌ಶಾಟ್ ಹಂಚಿಕೊಂಡ ತಂದೆ

ಅಕಾಶ್ ಕುಮಾರ್ ಎಂಬವರು ತಮ್ಮ ಟ್ವಿಟರ್​​ ಖಾತೆಯಲ್ಲಿ ತಮ್ಮ ಮಗನ ಸ್ಕೂಲ್ ಫೀಸ್​​ನ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. "ನನ್ನ ಮಗನ ಪ್ಲೇ ಸ್ಕೂಲ್ ಫೀಸ್ ಬರೋಬ್ಬರೀ 4.3 ಲಕ್ಷ ರೂಪಾಯಿ. ಈ ಫೀಸ್​​ಗಿಂತ​​ ಕಡಿಮೆ ಹಣದಲ್ಲಿ ನನ್ನ ಸಂಪೂರ್ಣ ಶಿಕ್ಷಣವೇ ಮುಗಿದು ಹೋಗಿತ್ತು" ಎಂದು ಪೋಸ್ಟ್​​​ಗೆ ಕ್ಯಾಪ್ಷನ್​ ಬರೆದಿದ್ದಾರೆ.

Viral Post: ಮಗನ ಪ್ಲೇ ಸ್ಕೂಲ್ ಫೀಸ್ 4.3 ಲಕ್ಷ ರೂ.; ಫೀಸ್​​ ಸ್ಕ್ರೀನ್‌ಶಾಟ್ ಹಂಚಿಕೊಂಡ ತಂದೆ
ಮಗನ ಪ್ಲೇ ಸ್ಕೂಲ್ ಫೀಸ್ 4.3 ಲಕ್ಷ ರೂ.
ಅಕ್ಷತಾ ವರ್ಕಾಡಿ
|

Updated on:Apr 13, 2024 | 12:24 PM

Share

ದೆಹಲಿ: ಈಗಾಗಲೇ ಶಾಲೆ, ಕಾಲೇಜುಗಳ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಆರಂಭವಾಗಿದೆ. ಇದೀಗ ದೆಹಲಿ ವ್ಯಕ್ತಿಯೊಬ್ಬರು ತನ್ನ ಮಗನ ಸ್ಕೂಲ್​​​ ಫೀಸ್​​ 4.3 ಲಕ್ಷ ರೂ. ಕಂಡು ತಲೆಗೆ ಕೈ ಹೊತ್ತು ಕುಳಿತಿದ್ದಾರೆ. ಮಗ ಏನೂ ಎಂಬಿಎ, ಎಂಬಿಬಿಎಸ್​​​ ಅಥವಾ ಇಂಜಿನಿಯರಿಂಗ್​​ ಮಾಡುತ್ತಿರಬಹುದು ಅಂತ ನೀವು ಅಂದುಕೊಂಡಿರಬಹುದು. ಆದರೆ ಇದ್ಯಾವುದೂ ಅಲ್ಲ ಈ ವ್ಯಕ್ತಿಯ 3ವರ್ಷದ ಮಗನ ಪ್ಲೇ ಸ್ಕೂಲ್ ಫೀಸ್ ಬರೋಬ್ಬರೀ 4.3 ಲಕ್ಷ ರೂಪಾಯಿ. ಸದ್ಯ ಮಗನ 2024-25ರ ಪ್ಲೇಸ್ಕೂಲ್ ಫೀಸ್​​ನ ಸ್ಕ್ರೀನ್‌ಶಾಟ್ ಅನ್ನು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದು, ಸದ್ಯ ಫೋಟೋ ಎಲ್ಲಡೆ ವೈರಲ್​​ ಆಗಿದೆ.

ವೃತ್ತಿಯಲ್ಲಿ ಸಿಎ ಆಗಿರುವ ಅಕಾಶ್ ಕುಮಾರ್ ಅವರು ಏಪ್ರಿಲ್​​ 12ರಂದು ತಮ್ಮ ಟ್ವಿಟರ್​​ ಖಾತೆಯಲ್ಲಿ(@AkashTrader) ತಮ್ಮ ಮಗನ ಸ್ಕೂಲ್ ಫೀಸ್​​ನ ಸ್ಕ್ರೀನ್‌ಶಾಟ್ ಹಂಚಿಕೊಂಡಿದ್ದಾರೆ. “ನನ್ನ ಮೂರು ವರ್ಷದ ಮಗನ ಪ್ಲೇ ಸ್ಕೂಲ್ ಫೀಸ್ ಬರೋಬ್ಬರೀ 4.3 ಲಕ್ಷ ರೂಪಾಯಿ. ಈ ಫೀಸ್​​ಗಿಂತ​​ ಕಡಿಮೆ ಹಣದಲ್ಲಿ ನನ್ನ ಸಂಪೂರ್ಣ ಶಿಕ್ಷಣವೇ ಮುಗಿದು ಹೋಗಿತ್ತು” ಎಂದು ಪೋಸ್ಟ್​​​ಗೆ ಕ್ಯಾಪ್ಷನ್​ ಬರೆದಿದ್ದಾರೆ.

ಇದನ್ನೂ ಓದಿ: ಅಮ್ಮನ ಕಛೇರಿಯಲ್ಲಿ ಬೇಸಿಗೆ ರಜೆ ಕಳೆದ ಐಎಎಸ್ ಅಧಿಕಾರಿಯ ತುಂಟ ಮಗ, ಇಲ್ಲಿದೆ ವಿಡಿಯೋ

ವೈರಲ್​​ ಫೋಟೋದಲ್ಲಿ ರಿಜಿಸ್ಟ್ರೇಶನ್​​ ಫೀಸ್​​ 10 ಸಾವಿರದಿಂದ ಪ್ರಾರಂಭವಾಗಿ ವಾರ್ಷಿಕ ಮೊತ್ತ 25,000 ರೂಪಾಯಿ ಹಾಗೆಯೇ ಒಟ್ಟು ಮೊತ್ತ 4ಲಕ್ಷದ 30 ಸಾವಿರನ್ನು ನಮೂದಿಸಿರುವುದನ್ನು ಕಾಣಬಹುದಾಗಿದೆ. ಈಫೀಸ್​​​ ಕಂಡು ಸಾಕಷ್ಟು ನೆಟ್ಟಿಗರು ಕಾಮೆಂಟ್​ ಮಾಡಿದ್ದು, “ನಿಮ್ಮ ಮಗ ಪ್ಲೇ ಸ್ಕೂಲ್​​​ನಲ್ಲೇ ವಿರಾಟ್​​ ಕೊಹ್ಲಿ ರೀತಿ ಸೆಂಚುರಿ ಹೊಡೆಯುತ್ತಾನೆ” ಎಂದು ನೆಟ್ಟಿಗರೊಬ್ಬರು ಬರೆದುಕೊಂಡಿದ್ದಾರೆ. ಮತ್ತೊಬ್ಬರು “ಸರ್ಕಾರಿ ಶಾಲೆಯೇ ಬೆಸ್ಟ್​​​” ಎಂದು ಕಾಮೆಂಟ್​​ ಮಾಡಿದ್ದಾರೆ.

ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:24 pm, Sat, 13 April 24

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ