AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ‘ಚೆಲ್ಲದಿರಿ ಅನ್ನ ಬಡವರಿಗದೇ ಚಿನ್ನ’; ವೈರಲ್‌ ಆಯ್ತು ಸ್ವಿಗ್ಗಿ ಮೇಲೆ ಬರೆದಿರುವ ಅರ್ಥಗರ್ಭಿತ ಸಾಲು

ಸ್ವಿಗ್ಗಿ ಭಾರತದ ದೈತ್ಯ ಆಹಾರ ವಿತರಣಾ ಕಂಪೆನಿಗಳಲ್ಲಿ ಒಂದಾಗಿದ್ದು, ಈ ಒಂದು ಆನ್‌ಲೈನ್‌ ಪ್ಲಾಟ್‌ಫಾರ್ಮ್‌ ಅಲ್ಲಿ ದಿನಕ್ಕೆ ಲಕ್ಷಾಂತರ ಜನರು ಫುಡ್‌ ಆರ್ಡರ್‌ ಮಾಡುತ್ತಿರುತ್ತಾರೆ. ಹೀಗೆ ತಮ್ಮ ಗ್ರಾಹಕರು ಯಾವುದೇ ಆಹಾರವನ್ನು ವೇಸ್ಟ್‌ ಮಾಡಬಾರದು ಎಂಬ ಉದ್ದೇಶವನ್ನು ಇಟ್ಟುಕೊಂಡು ಸ್ವಿಗ್ಗಿ ವಿನೂತನ ಪ್ರಯತ್ನವೊಂದನ್ನು ಮಾಡಿದೆ. ಈ ಕುರಿತ ಪೋಸ್ಟ್‌ ಒಂದು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಸ್ವಿಗ್ಗಿಯ ಈ ನಡೆಗೆ ನೆಟ್ಟಿಗರು ಭಾರಿ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

Viral Post: 'ಚೆಲ್ಲದಿರಿ ಅನ್ನ ಬಡವರಿಗದೇ ಚಿನ್ನ'; ವೈರಲ್‌ ಆಯ್ತು ಸ್ವಿಗ್ಗಿ ಮೇಲೆ ಬರೆದಿರುವ ಅರ್ಥಗರ್ಭಿತ ಸಾಲು
ಮಾಲಾಶ್ರೀ ಅಂಚನ್​
| Edited By: |

Updated on: May 05, 2024 | 11:55 AM

Share

ಇಂದಿಗೂ ಒಂದು ಹೊತ್ತು ಊಟ ದೊರೆಯದೆ ಹಸಿವಿನಿಂದ ಬಳಲುತ್ತಿರುವ ಲಕ್ಷಾಂತರ ಮಂದಿ ಈ ಪ್ರಪಂಚದಲ್ಲಿದ್ದಾರೆ. ಹೀಗಿದ್ರೂ ಕೂಡಾ ಕೆಲವು ಜನರು ಅನ್ನವನ್ನು ವ್ಯರ್ಥ ಮಾಡ್ತಾರೆ. ಹೌದು ಇಂತಹ ಅದೆಷ್ಟೋ ಜನರು ನಮ್ಮ ನಿಮ್ಮ ನಡುವೆಯೇ ಇದ್ದಾರೆ. ಎಷ್ಟು ಬೇಕೋ ಅಷ್ಟೇ ತಟ್ಟೆಗೆ ಅನ್ನವನ್ನು ಹಾಕಿ, ಅಗತ್ಯಕ್ಕಿಂತ ಹೆಚ್ಚು ಅನ್ನವನ್ನು ತೆಗೆದುಕೊಂಡು ನಂತರ ಅದನ್ನು ಬಿಸಾಡಬೇಡಿ, ಅನ್ನ ದೇವರಿಗೆ ಸಮಾನ ಎಂದು ಹೇಳಿದ್ರೂ ಕೂಡಾ, ಈ ಮಾತುಗಳಿಗೆ ಕ್ಯಾರೇ ಅನ್ನದೆ ಹಲವರು ಪ್ರತಿನಿತ್ಯ ತಿನ್ನೋ ಅನ್ನವನ್ನೇ ಎಸೆಯುತ್ತಿದ್ದಾರೆ. ಹೀಗೆ ಊಟ ಬಿಸಾಡುವವರಿಗೆ ತಿಳಿ ಹೇಳಲು ಸ್ವಿಗಿ ಒಂದು ಮಹತ್ವದ ಹೆಜ್ಜೆಯನ್ನಿಟ್ಟಿದೆ. ಸ್ವಿಗ್ಗಿಯ ಈ ಉತ್ತಮ ನಡೆಯನ್ನು ನೆಟ್ಟಿಗರು ಪ್ರಶಂಸಿಸಿದ್ದಾರೆ.

ಈ ಕುರಿತ ಪೋಸ್ಟ್‌ಪೋಸ್ಟ್‌ ಒಂದನ್ನು ಇಸ್ಮಾಯಿಲ್‌ ಪಟೇಲ್‌(@Ismail Patel) ಎಂಬವರು ತಮ್ಮ ಫೇಸ್‌ಬುಕ್‌ ಖಾತೆಯಲ್ಲಿ ಹಂಚಿಕೊಂಡಿದ್ದು, “ಸ್ವಿಗ್ಗಿ ಊಟದ ಪೊಟ್ಟಣದ ಮೇಲಿನ ಕನ್ನಡದ ಅರ್ಥ ಪೂರ್ಣ ಸಾಲು” ಎಂಬ ಶೀರ್ಷಿಕೆಯನ್ನು ಬರೆದುಕೊಂಡಿದ್ದಾರೆ. ವೈರಲ್‌ಪೋಸ್ಟ್‌ ಅಲ್ಲಿ ಸ್ವಿಗ್ಗಿ ತಾನು ಗ್ರಾಹಕರಿಗೆ ನೀಡುವಂತಹ ಆಹಾರ ಪೊಟ್ಟಣದ ಮೇಲೆ “ಚೆಲ್ಲದಿರಿ ಅನ್ನ ಬಡವರಿಗದೇ ಚಿನ್ನ” ಎಂಬ ಅರ್ಥಗರ್ಭಿತ ವಾಕ್ಯವನ್ನು ಬರೆದಿರುವಂತಹ ದೃಶ್ಯವನ್ನು ಕಾಣಬಹುದು.

ಇದನ್ನೂ ಓದಿ: ಹಾಲಿಗೆ ಆಲ್ಕೋಹಾಲ್ ಬೆರೆಸಿದ ಅಜ್ಜಿ; ಕೋಮಾಗೆ ಜಾರಿದ 4 ತಿಂಗಳ ಮೊಮ್ಮಗು

5 ದಿನಗಳ ಹಿಂದೆ ಹಂಚಿಕೊಳ್ಳಲಾದ ಈ ಪೋಸ್ಟ್‌ 47 ಸಾವಿರ ಲೈಕ್ಸ್‌ಗಳನ್ನು ಹಾಗೂ ಹಲವಾರು ಕಾಮೆಂಟ್ಸ್‌ಗಳನ್ನು ಪಡೆದುಕೊಂಡಿದೆ. ಒಬ್ಬ ಬಳಕೆದಾರರು ʼಬಡವರಿಗೆ ಮಾತ್ರವಲ್ಲ ಪ್ರತಿಯೊಂದು ಜೀವರಾಶಿಗೂ ಅನ್ನ ಚಿನ್ನನೇʼ ಎಂದು ಹೇಳಿದ್ದಾರೆ. ಇನ್ನೂ ಅನೇಕರು ಮುತ್ತಿನಂತಹ ಮಾತುಗಳು ಎಂದು ಹೇಳುವ ಮೂಲಕ ಸ್ವಿಗ್ಗಿಯ ಈ ನಡೆಗೆ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ