AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ತಿನ್ನುವ ಆಹಾರವನ್ನು ಎಸೆದಿರುವ ಆರೋಪಿಗೆ ಶಿಕ್ಷೆಯಾಗಬೇಕು, ಆಕ್ರೋಶಗೊಂಡ ನೆಟ್ಟಿಗರು

ಸುಮಾರು 300 ರಿಂದ 400 ಪೌಂಡ್​​​ಗಳಷ್ಟು ಬೇಯಿಸಿದ ಪಾಸ್ಟಾವನ್ನು ತೊರೆಯ ಬಳಿ ಎಸೆದು ತಿನ್ನುವ ಆಹಾರವನ್ನು ವ್ಯರ್ಥ ಮಾಡಿದ ಘಟನೆ ನ್ಯೂಜೆರ್ಸಿಯಲ್ಲಿ ನಡೆದಿದೆ. ಈ ಘಟನೆಯನ್ನು ವ್ಯಕ್ತಿಯೊಬ್ಬರು ರೆಡ್ಡಿಟ್ ಆಪ್​​​ನಲ್ಲಿ ಪೋಸ್ಟ್ ಮಾಡಿದ್ದಾರೆ.

Viral Post: ತಿನ್ನುವ ಆಹಾರವನ್ನು ಎಸೆದಿರುವ ಆರೋಪಿಗೆ ಶಿಕ್ಷೆಯಾಗಬೇಕು, ಆಕ್ರೋಶಗೊಂಡ ನೆಟ್ಟಿಗರು
ವೈರಲ್ ಫೋಟೋ
ಅಕ್ಷಯ್​ ಪಲ್ಲಮಜಲು​​
|

Updated on:May 05, 2023 | 4:59 PM

Share

ಪ್ರತಿನಿತ್ಯ ಸಾಮಾಜಿಕ ಜಾಲತಾಣದಲ್ಲಿ ವಿವಿಧ ರೀತಿಯ ವಿಷಯಗಳು ವೈರಲ್ ಆಗುತ್ತಿರುತ್ತವೆ. ಆಹಾರ ಸಂಬಂಧಿತ, ನೃತ್ಯ ಸಂಬಂಧಿಸಿದ ವೀಡಿಯೋಗಳು, ಪ್ರಾಣಿಗಳ ಕುರಿತ ವೀಡಿಯೋಗಳು ವೈರಲ್ ಆಗುತ್ತಿರುತ್ತವೆ. ಅದರಲ್ಲೂ ಆಹಾರಗಳನ್ನು ಅಗತ್ಯವಿರುವ ಜನರಿಗೆ ಕೊಡದೆ, ಎಸೆಯುವಂತಹದ್ದು, ಅಥವಾ ಪ್ರಾಣಿಗಳಿಗೆ ಹಿಂಸೆ ನೀಡುವುದು ಈ ರೀತಿಯ ಘಟನೆಗಳು ಸಂಭವಿಸಿದರೆ ಜನರು ಸಾಮಾಜಿಕ ತಾಣಗಳಲ್ಲಿ ಆಕ್ರೋಶವನ್ನು ವ್ಯಕ್ತಪಡಿಸುತ್ತಾರೆ. ಅದೇ ರೀತಿ ಇಲ್ಲೊಂದು ವಿಲಕ್ಷಣ ಪೋಸ್ಟ್ ವೈರಲ್ ಆಗಿದೆ. ಅದೇನೆಂದರೆ ನ್ಯೂಜೆರ್ಸಿಯ ಬ್ರಿಡ್ಜ್ ಪಕ್ಕದಲ್ಲಿನ ಹಳ್ಳಕ್ಕೆ ಸುಮಾರು 181 ಕೆಜಿಯಷ್ಟು ಬೇಯಿಸಿದ ಪಾಸ್ಟಾವನ್ನು ಎಸೆಯಲಾಗಿದೆ. ಈ ಕುರಿತ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಆಹಾರ ವ್ಯರ್ಥ ಮಾಡಿದ್ದಕ್ಕಾಗಿ ನೆಟ್ಟಿಗರು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.

ರೆಡ್ಡಿಟ್ ಆಪ್ನಲ್ಲಿ ‘@stormborn72’ ಹೆಸರಿನ ಬಳಕೆದಾರರು ಪಾಸ್ಟಾ ಎಸೆದಿರುವ ಪೋಟೊವನ್ನು ಪೋಸ್ಟ್ ಮಾಡಿದ್ದಾರೆ. ಕಳೆದ ವಾರ ಹಳೆಯ ಬ್ರಿಡ್ಜ್​​​ನ ವೆಟರನ್ಸ್ ಪಾರ್ಕ್ ಬಳಿಯ ಹಳ್ಳದ ಪಕ್ಕದಲ್ಲಿ ಅಂದಾಜು 300 ರಿಂದ 400 ಪೌಂಡ್​​​ಗಳಷ್ಟು ಬೇಯಿಸಿದ ಪಾಸ್ಟಾವನ್ನು ಯಾರೋ ಅಪರಿಚಿತರು ಎಸೆದಿದ್ದಾರೆ. ಅದನ್ನು ಈಗ ಟೌನ್ಶಿಪ್ ತೆರವುಗೊಳಿಸಿದೆ. ಆದರೆ ಅಪರಾಧಿಯನ್ನು ಇನ್ನೂ ಬಂಧಿಸಲಾಗಿಲ್ಲ ಎಂದು ಬರೆದುಕೊಂಡಿದ್ದಾರೆ.

Estimated 300-400 lbs of pasta dumped in Old Bridge by u/stormborn72 in newjersey

ಇದನ್ನೂ ಓದಿ: Viral Post: ಭಾರತೀಯ ನೋಟುಗಳ ಮೇಲೆ ಮುದ್ರಿತವಾದ ಐತಿಹಾಸಿಕ ಸ್ಥಳಗಳ ಬಗ್ಗೆ ನಿಮಗೆಷ್ಟು ಗೊತ್ತಾ?

ಮೂರು ದಿನಗಳ ಹಿಂದೆ ರೆಡ್ಡಿಟ್ ಆಪ್​​​​ನಲ್ಲಿ ಈ ಪೋಸ್ಟ್​​​ನ್ನು ಹಂಚಿಕೊಳ್ಳಲಾಗಿದ್ದು, ಈ ಪೋಸ್ಟ್​​​ಗೆ 1800ಕ್ಕೂ ಹೆಚ್ಚು ಲೈಕ್ಸ್ ಬಂದಿದೆ. ಹಾಗೂ ಅನೇಕರು ಕಮೆಂಟ್ ಮಾಡಿದ್ದಾರೆ. ಒಬ್ಬ ಬಳಕೆದಾರರು ‘ಅಪರಾಧಿಗಳನ್ನು ಜೈಲಿಗೆ ಕಳುಹಿಸಬೇಕು’ ಎಂದು ಕಮೆಂಟ್ ಮಾಡಿದ್ದಾರೆ. ಇನ್ನೊಬ್ಬ ಬಳಕೆದಾದರು ‘ಇದು ಬೇಯಿಸಿದ ಪಾಸ್ಟಾವೇ? ಸುಮ್ಮನೆ ಈ ಪಾಸ್ಟಾವನ್ನು ಬೇಯಿಸಿ ಎಸೆಯುವ ಅವಶ್ಯಕತೆ ಏನಿತ್ತು’ ಎಂದು ಕಮೆಂಟ್ ಮಾಡಿದ್ದಾರೆ, ಇನ್ನೊಬ್ಬ ಬಳಕೆದಾದರು ‘ಇದು ನಿಜವಾಗಿಯು ನನ್ನ ರಕ್ತವನ್ನು ಕುದಿಯುವಂತೆ ಮಾಡಿದೆ’ ಎಂದು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

Published On - 4:57 pm, Fri, 5 May 23

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ