Viral: ಇಸ್ರೋ ಅಧ್ಯಕ್ಷ ಸೋಮನಾಥರಿಗಿರುವ ಈ ಸಂಬಳ ನ್ಯಾಯಸಮ್ಮತವೆ? ಹರ್ಷ ಗೋಯೆಂಕಾ

Salary: ಇಸ್ರೋ ಮುಖ್ಯಸ್ಥ ಸೋಮನಾಥ ಅವರಿಗೆ ಈಗಿರುವ ಸಂಬಳ ರೂ. 2.5 ಲಕ್ಷ. ಇಂಥವರು ಪ್ರೀತಿ ಮತ್ತು ಶ್ರದ್ಧೆಯಿಂದ ದೇಶಕ್ಕಾಗಿ ಕೆಲಸ ಮಾಡುತ್ತಾರೆ. ಅವರಿಗೆ ಶಿರಬಾಗುವೆ ಎಂದಿದ್ದಾರೆ ಉದ್ಯಮಿ ಹರ್ಷ ಗೋಯೆಂಕಾ. ಕೆಲ ನೆಟ್ಟಿಗರು ಇವರಿಗೆ ಸಂಬಳ ಹೆಚ್ಚಿಸಬೇಕು ಎಂದು. ಇನ್ನೂ ಕೆಲವರು ಇತರೇ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುವ ಉದ್ಯೋಗಿಯಂತೆ ಅವರೂ ಕೂಡ ಎಂದು. ನೀವೇನಂತೀರಿ?

Viral: ಇಸ್ರೋ ಅಧ್ಯಕ್ಷ ಸೋಮನಾಥರಿಗಿರುವ ಈ ಸಂಬಳ ನ್ಯಾಯಸಮ್ಮತವೆ? ಹರ್ಷ ಗೋಯೆಂಕಾ
ಇಸ್ರೋ ಮುಖ್ಯಸ್ಥ ಸೋಮನಾಥ ಮತ್ತು ಉದ್ಯಮಿ ಹರ್ಷ ಗೋಯೆಂಕಾ
Follow us
|

Updated on:Sep 12, 2023 | 5:09 PM

ISRO : ‘ಇಸ್ರೋ ಅಧ್ಯಕ್ಷ ಸೋಮನಾಥ್ (Somanath) ಅವರ ತಿಂಗಳ ವೇತನ ರೂ. 2.5 ಲಕ್ಷ, ಇದು ನ್ಯಾಯಸಮ್ಮತವೇ? ಇಂಥ ಜನರುಗಳನ್ನು ಸಂಬಳ ಮತ್ತು ಹಣಕ್ಕೂ ಮೀರಿದ ಅಂಶಗಳು ಪ್ರೇರೇಪಿಸುತ್ತಿರುತ್ತವೆ ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು. ಅವರು ಅತ್ಯಂತ ಆಸ್ಥೆ ಮತ್ತು ಪ್ರೀತಿಯಿಂದ ವಿಜ್ಞಾನ ಮತ್ತು ಸಂಶೋಧನೆಗಳಲ್ಲಿ ತೊಡಗಿಕೊಂಡು ದೇಶಕ್ಕೆ ಕೊಡುಗೆ ಕೊಡಲು ಮತ್ತು ಇಡೀ ದೇಶವೇ ಹೆಮ್ಮೆ ಪಡುವಂತೆ ಮಾಡಲು ತಮ್ಮನ್ನು ತಾವೇ ಸಮರ್ಪಿಸಿಕೊಳ್ಳುತ್ತಾರೆ. ಇಂಥವರಿಗೆ ನಾನು ಶಿರಬಾಗುವೆ.’ ಎಂದು X ನಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ ಉದ್ಯಮಿ ಹರ್ಷ ಗೋಯೆಂಕಾ. ನೆಟ್ಟಿಗರು ಈ ಪೋಸ್ಟ್​ಗೆ ವಿವಿಧ ರೀತಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಇದನ್ನೂ ಓದಿ : Viral Video: ತನ್ನ ನಾಲಗೆಯಿಂದ ವಿರಾಟ ಕೊಹ್ಲಿಯನ್ನು ಚಿತ್ರಿಸಿದ ಅಭಿಮಾನಿಯ ವಿಡಿಯೋ ವೈರಲ್ 

ಇದನ್ನೂ ಓದಿ
Image
Viral Video: ಭಾರತಕ್ಕೆ ಶುಭಕೋರಿದ ಪಾಕಿಸ್ತಾನದ ರಬಾಬ್ ಕಲಾವಿದ
Image
Viral Post: ವಿಶಿಷ್ಟ ಚೇತನ ಕೃಷ್ಣಪ್ಪ ರಾಥೋಡ್​ಗೆ ಸಹಾಯ ಹಸ್ತ ಚಾಚಿರುವ ಲಿಂಕ್​ಡಿನ್ನಿಗರು
Image
Viral Post : ಪಿಝಾ ಹಿಟ್ಟಿನ ಮೇಲೆ ನೇತಾಡುತ್ತಿರುವ ಶೌಚಾಲಯದ ಬ್ರಷ್!
Image
Viral Video: ನಾನೇ ನಾಳಿನ ನಂಬರ್ ಒನ್ ಮಿಸ್ಟರ್ ಶೆಫ್ ಮಿಯಾಂವ್!

ಈ ಪೋಸ್ಟ್ ಅನ್ನು ಸೆಪ್ಟೆಂಬರ್ 12 ರಂದು ಹಂಚಿಕೊಳ್ಳಲಾಗಿದೆ. 7.2 ಲಕ್ಷಕ್ಕೂ ಹೆಚ್ಚು ಜನರು ನೋಡಿದ್ದಾರೆ. 8,500ಕ್ಕೂ ಹೆಚ್ಚು ಜನರು ಲೈಕ್ ಮಾಡಿದ್ದು, ಸುಮಾರು 1,000 ಜನರು ರೀಪೋಸ್ಟ್ ಮಾಡಿದ್ದಾರೆ. 600ಕ್ಕೂ ಹೆಚ್ಚು ಜನರು ಪ್ರತಿಕ್ರಿಯಿಸಿದ್ದಾರೆ. ನೀವು ಹೇಳಿದಂತೆ ಅವರಿಗೆ ಯಶಸ್ಸು ಮತ್ತು ದೇಶದ ಹೆಮ್ಮೆಯೇ ಅವರಿಗೆ ದೊಡ್ಡದು ಎಂದಿದ್ದಾರೆ ಒಬ್ಬರು.

ಹರ್ಷ ಗೋಯೆಂಕಾ ಟ್ವೀಟ್​

ಅವರಿಗೆ ಸಂಬಳವನ್ನು ಪರಿಷ್ಕರಿಸುವ ಅಗತ್ಯವಿಲ್ಲ.  ಪ್ರತಿ ಯಶಸ್ವಿ ಕಾರ್ಯಾಚರಣೆಯ ನಂತರ ಅವರಿಗೆ ಉತ್ತಮ ಮಟ್ಟದಲ್ಲಿ ಪ್ರೋತ್ಸಾಹ ನೀಡಿ ಎಂದಿದ್ದಾರೆ ಒಬ್ಬರು. ಪ್ರತೀ ತಿಂಗಳು ರೂ. 5 ಲಕ್ಷ ಕೊಡಬೇಕು ಎಂದಿದ್ದಾರೆ ಇನ್ನೊಬ್ಬರು. ನೀವು ಹೇಳಿದ್ದು ಸರಿ ಇದೆ, ಅವರಿಗೆ ಭಾರೀ ಮೊತ್ತದ ಸಂಬಳವನ್ನು ನೀಡಬೇಕು ಎಂದಿದ್ದಾರೆ ಮತ್ತೊಬ್ಬರು. ನೀವು ಅವರಿಗೆ ಏನಾದರೂ ಉಡುಗೊರೆ ಕೊಡಲು ಯೋಚಿಸಿದ್ದೀರಾ? ಎಂದು ಕೇಳಿದ್ದಾರೆ ಮಗದೊಬ್ಬರು.

ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು?

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 5:05 pm, Tue, 12 September 23

‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್