AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಅನ್ನ ನೀರಿಲ್ಲದೇ 8 ದಿನಗಳ ವರೆಗೆ ಶಿಪ್ಪಿಂಗ್ ಕಂಟೈನರ್​​​ನಲ್ಲಿ ಸಿಲುಕಿದ್ದ ಶ್ವಾನ

ಟೆಕ್ಸಾಸ್ ಬಂದರಿನಲ್ಲಿ ದಿನನಿತ್ಯದ ತಪಾಸಣೆಯ ಸಮಯದಲ್ಲಿ, ಮೆರೈನ್ ಅಧಿಕಾರಿಗಳ ತಂಡವು ಒಂದು ವಾರದವರೆಗೆ ಕಂಟೇನರ್‌ನಲ್ಲಿ ಸಿಕ್ಕಿಬಿದ್ದ ನಾಯಿಯನ್ನು ರಕ್ಷಿಸಿದ್ದಾರೆ. ಕಂಟೈನರ್​​ ಒಳಗಡೆ ಶ್ವಾನ ಹೇಗೆ ಬಂತು ಎಂದು ಅಧಿಕಾರಿಗಳಿಗೆ ಖಚಿತವಾಗಿಲ್ಲ. ಸದ್ಯ ಶ್ವಾನವನ್ನು ರಕ್ಷಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದೆ.

Viral Post: ಅನ್ನ ನೀರಿಲ್ಲದೇ 8 ದಿನಗಳ ವರೆಗೆ ಶಿಪ್ಪಿಂಗ್ ಕಂಟೈನರ್​​​ನಲ್ಲಿ ಸಿಲುಕಿದ್ದ ಶ್ವಾನ
8 ದಿನಗಳ ವರೆಗೆ ಶಿಪ್ಪಿಂಗ್ ಕಂಟೈನರ್​​​ನಲ್ಲಿ ಸಿಲುಕಿದ್ದ ಶ್ವಾನImage Credit source: Facebook
ಅಕ್ಷತಾ ವರ್ಕಾಡಿ
|

Updated on: Feb 06, 2024 | 12:40 PM

Share

ಶಿಪ್ಪಿಂಗ್ ಕಂಟೈನರ್​​​ನಲ್ಲಿ ಉಗುರಿನಿಂದ ಪರಚುವಂತಹ ಶಬ್ದ ಬರುತ್ತಿದ್ದುದನ್ನು ಗಮನಿಸಿದ ನೌಕಾ ಸಿಬ್ಬಂದಿ ಕಂಟೈನರ್​​​ನಲ್ಲಿ ತೆರೆದು ನೋಡಿದಾಗ ಶ್ವಾನ ಒಂದು ಪತ್ತೆಯಾಗಿದೆ. 8 ದಿನಗಳಿಂದ ಅನ್ನ ನೀರಿಲ್ಲದೇ ಬದುಕುಳಿದಿದ್ದ ಶ್ವಾನಕ್ಕೆ ತಕ್ಷಣ ಆಹಾರ ನೀಡಿ ಪಶು ಚಿಕಿತ್ಸಾ ಕೇಂದ್ರದಲ್ಲಿ ಚಿಕಿತ್ಸೆ ನೀಡಲಾಗಿದೆ. ಶಿಪ್ಪಿಂಗ್ ನೌಕರನ ನಿರ್ಲಕ್ಷ್ಯದಿಂದ ಈ ರೀತಿ ಆಗಿದ್ದು, ಕೊನೆಗೂ ನಾಯಿ ಬದುಕುಳಿದಿದೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​ ಆಗಿದೆ.

ಮೆರೈನ್ ಅಧಿಕಾರಿಗಳು ತಮ್ಮ ಫೇಸ್‌ಬುಕ್‌ನಲ್ಲಿ ಪೋಸ್ಟ್ ಮೂಲಕ ಈ ಕುರಿತು ಬಹಿರಂಗಪಡಿಸಿದ್ದು, ಯುಎಸ್ ಕೋಸ್ಟ್ ಗಾರ್ಡ್ ಹಾರ್ಟ್‌ಲ್ಯಾಂಡ್ ಕೂಡ ಶ್ವಾನದ ಕೆಲವು ಫೋಟೋಗಳನ್ನು ಫೇಸ್‌ಬುಕ್‌ನಲ್ಲಿ ಹಂಚಿಕೊಂಡಿದೆ. ಇಂದು ಮುಂಜಾನೆ, US ಕೋಸ್ಟ್ ಗಾರ್ಡ್ ಸೆಕ್ಟರ್ ಹೂಸ್ಟನ್-ಗ್ಯಾಲ್ವೆಸ್ಟನ್‌ನ ಸಮುದ್ರ ತನಿಖಾಧಿಕಾರಿಗಳ ತಂಡವು ನಾಯಿಯ ಜೀವವನ್ನು ಉಳಿಸಿದೆ ಎಂದು ಬರೆದಿದ್ದಾರೆ. ಶಬ್ದ ಕೇಳಿ ಶಿಪ್ಪಿಂಗ್ ಕಂಟೈನರ್‌ಗಳನ್ನು ಪರಿಶೀಲಿಸುತ್ತಿದ್ದಾಗ ನಾಯಿಯೊಂದು ಹೊರಬಂದಿತು. ಕೋಸ್ಟ್ ಗಾರ್ಡ್ ಸದಸ್ಯರ ಸಮಯ ಪ್ರಜ್ಞೆಯಿಂದ ಶ್ವಾನದ ಜೀವ ಉಳಿದಿದೆ ಎಂದು ಪೋಸ್ಟ್​​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​ ಇಲ್ಲಿದೆ ನೋಡಿ: ‘

ಇದನ್ನೂ ಓದಿ: ಗಂಡನ ಬೆವರಿನ ವಾಸನೆ ತಡೆಯಲಾರದೆ ವಿಚ್ಛೇದನ ನೀಡಿದ ಪತ್ನಿ

ಸದ್ಯ ಶ್ವಾನವನ್ನು ರಕ್ಷಿಸಿದ ಫೋಟೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​​ ಆಗುತ್ತಿದ್ದು, ಫೋಟೋ ಒಂದರಲ್ಲಿ ಶ್ವಾನದ ರಕ್ಷಣೆಯ ನಂತರ ಕ್ಯಾಮೆರಾಗೆ ಪೋಸ್ ನೀಡಿರುವುದನ್ನು ಕಾಣಬಹುದು. ಫೆಬ್ರವರಿ 1 ರಂದು ಫೇಸ್‌ಬುಕ್ ಪೋಸ್ಟ್ ಅನ್ನು ಹಂಚಿಕೊಳ್ಳಲಾಗಿದೆ. ಅಂದಿನಿಂದ ಅನೇಕ ಶ್ವಾನ ಪ್ರೇಮಿಗಳು ಮೆಚ್ಚುಗೆ ವ್ಯಕ್ತ ಪಡಿಸಿದ್ದು, ಈ ಬಗ್ಗೆ ಹಲವು ಪ್ರತಿಕ್ರಿಯೆಗಳನ್ನು ನೀಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ