AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಮಾನದ ಕಿಟಕಿ ಬಳಿ ಗುಟ್ಕಾ ಚಿತ್ತಾರ, ಥೂ ಅಸಹ್ಯ ಎಂದ ನೆಟ್ಟಿಗರಿಂದ ಟ್ರೋಲ್​ಗಳ ಸುರಿಮಳೆ

ಇಂಥದ್ದೇ ಹಲವು ಚಿತ್ರಗಳು ಮತ್ತು ತಮಾಷೆ ಮೀಮ್​ಗಳೊಂದಿಗೆ ಈ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ಹಲವರು ತಮ್ಮ ಅನುಭವವನ್ನೂ ಹಂಚಿಕೊಂಡಿದ್ದಾರೆ.

Viral: ವಿಮಾನದ ಕಿಟಕಿ ಬಳಿ ಗುಟ್ಕಾ ಚಿತ್ತಾರ, ಥೂ ಅಸಹ್ಯ ಎಂದ ನೆಟ್ಟಿಗರಿಂದ ಟ್ರೋಲ್​ಗಳ ಸುರಿಮಳೆ
ಐಎಎಸ್ ಅಧಿಕಾರಿ ಹಂಚಿಕೊಂಡಿದ್ದ ಚಿತ್ರ
TV9 Web
| Edited By: |

Updated on:May 27, 2022 | 9:00 AM

Share

ಬಸ್​ ಪಕ್ಕದಲ್ಲಿ ಹೋಗುತ್ತಿರುವಾಗ ಕಿಟಕಿಯಿಂದ ಪಿಚಕ್ಕನೆ ತೂರಿಬರುವ ಕೆಂಪು ದ್ರವ ನಿಮ್ಮ ಬಟ್ಟೆಯನ್ನು ಹಾಳು ಮಾಡಿದ್ದು ನಿಮಗಿನ್ನೂ ನೆನಪಿರಬಹುದು. ಬಸ್​ಗಳ ಕಿಟಕಿ ಸುತ್ತಮುತ್ತಲ ಜಾಗ, ಕಂಬಿಗಳ ಮೇಲೆ ಗುಟ್ಕಾದ (Gutka) ಉಗುಳಿನ ಅಸಹ್ಯದ ಚಿತ್ತಾರಗಳು ಸಾಮಾನ್ಯ ಎನಿಸಿಕೊಂಡಿವೆ. ಆದರೆ ಇಂಥದ್ದೇ ಅನುಭವ ವಿಮಾನದಲ್ಲಿಯೂ ಆದರೆ ಹೇಗಿರಬೇಡ? ವಿಮಾನದ ಕಿಟಕಿ ಬಳಿ ಗುಟ್ಕಾ ಚಿತ್ತಾರ ಕಂಡ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅದರ ಚಿತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಇಂಥದ್ದೇ ಹಲವು ಚಿತ್ರಗಳು ಮತ್ತು ತಮಾಷೆ ಮೀಮ್​ಗಳೊಂದಿಗೆ ಈ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ಹಲವರು ತಮ್ಮ ಅನುಭವವನ್ನೂ ಹಂಚಿಕೊಂಡಿದ್ದಾರೆ.

ತಾವು ಪ್ರವಾಸ ಹೊರಟಿದ್ದ ಸಂದರ್ಭದಲ್ಲಿ ಕಿಟಕಿಯ ಚಿತ್ರ ತೆಗೆದು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದರು. ಆದರೆ ನೆಟಿಜನ್ನರು ಚಿತ್ರದಲ್ಲಿದ್ದ ಮತ್ತೊಂದು ಅಂಶದತ್ತ ಹೆಚ್ಚು ಗಮನ ಕೊಟ್ಟಿದ್ದಾರೆ. ಕಿಟಕಿಯ ಕೆಳಗೆ ಗುಟ್ಕಾದ ದೊಡ್ಡ ಚಿತ್ತಾರ ಮೂಡಿದೆ. ಇಲ್ಲಿ ಕುಳಿತಿದ್ದ ಯಾರೋ ಒಬ್ಬರು ತಮ್ಮ ಕುರುಹು ಉಳಿಸಿ ಹೋಗಿದ್ದಾರೆ ಎಂದು ನೆಟಿಜನ್ನರು ವ್ಯಂಗ್ಯವಾಡಿದ್ದಾರೆ.

ಕಳೆದ ಕೆಲ ದಿನಗಳಿಂದಲೂ ಈ ಚಿತ್ರವು ಇಂಟರ್ನೆಟ್​ನಲ್ಲಿ ಹರಿದಾಡುತ್ತಿದೆ. ಈವರೆಗೆ 11 ಸಾವಿರ ಲೈಕ್ಸ್ ಮತ್ತು ಸಾವಿರಾರು ಪ್ರತಿಕ್ರಿಯೆಗಳು ಈ ಚಿತ್ರಕ್ಕೆ ಬಂದಿವೆ.

‘ಇದೆಂಥ ಅಸಹ್ಯ’ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. ‘ಹೀಗೆ ಮಾಡಿದವರು ಯಾರು ಎಂದು ಪತ್ತೆಹೆಚ್ಚಿ, ದುಬಾರಿ ದಂಡ ವಿಧಿಸಬೇಕು’ ಎಂದು ಕೆಲವರು ಬರೆದಿದ್ದಾರೆ. ‘ಸೂಪರ್​ಸ್ಟಾರ್​ಗಳೇ ತಂಬಾಕು ಉತ್ಪನ್ನಗಳನ್ನು ಶಿಫಾರಸು ಮಾಡುತ್ತಿರುವುದರಿಂದ ಹೆಚ್ಚಿನ ಜನರು ಈ ಅಪಾಯಕಾರಿ ಗುಟ್ಕಾ ಬಳಕೆಗೆ ಮುಂದಾಗುತ್ತಿದ್ದಾರೆ. ಅಂಥ ಸೂಪರ್​ಸ್ಟಾರ್​ಗಳಿಗೆ ಎಚ್ಚರಿಕೆ ನೀಡಬೇಕು’ ಎಂದು ಹಲವು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಚಿತ್ರಕ್ಕೆ ಇಂಟರ್ನೆಟ್ ಬಳಕೆದಾರರ ಪ್ರತಿಕ್ರಿಯೆ ಹೀಗಿದೆ…

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:00 am, Fri, 27 May 22

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ