AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ವಿಮಾನದ ಕಿಟಕಿ ಬಳಿ ಗುಟ್ಕಾ ಚಿತ್ತಾರ, ಥೂ ಅಸಹ್ಯ ಎಂದ ನೆಟ್ಟಿಗರಿಂದ ಟ್ರೋಲ್​ಗಳ ಸುರಿಮಳೆ

ಇಂಥದ್ದೇ ಹಲವು ಚಿತ್ರಗಳು ಮತ್ತು ತಮಾಷೆ ಮೀಮ್​ಗಳೊಂದಿಗೆ ಈ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ಹಲವರು ತಮ್ಮ ಅನುಭವವನ್ನೂ ಹಂಚಿಕೊಂಡಿದ್ದಾರೆ.

Viral: ವಿಮಾನದ ಕಿಟಕಿ ಬಳಿ ಗುಟ್ಕಾ ಚಿತ್ತಾರ, ಥೂ ಅಸಹ್ಯ ಎಂದ ನೆಟ್ಟಿಗರಿಂದ ಟ್ರೋಲ್​ಗಳ ಸುರಿಮಳೆ
ಐಎಎಸ್ ಅಧಿಕಾರಿ ಹಂಚಿಕೊಂಡಿದ್ದ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:May 27, 2022 | 9:00 AM

ಬಸ್​ ಪಕ್ಕದಲ್ಲಿ ಹೋಗುತ್ತಿರುವಾಗ ಕಿಟಕಿಯಿಂದ ಪಿಚಕ್ಕನೆ ತೂರಿಬರುವ ಕೆಂಪು ದ್ರವ ನಿಮ್ಮ ಬಟ್ಟೆಯನ್ನು ಹಾಳು ಮಾಡಿದ್ದು ನಿಮಗಿನ್ನೂ ನೆನಪಿರಬಹುದು. ಬಸ್​ಗಳ ಕಿಟಕಿ ಸುತ್ತಮುತ್ತಲ ಜಾಗ, ಕಂಬಿಗಳ ಮೇಲೆ ಗುಟ್ಕಾದ (Gutka) ಉಗುಳಿನ ಅಸಹ್ಯದ ಚಿತ್ತಾರಗಳು ಸಾಮಾನ್ಯ ಎನಿಸಿಕೊಂಡಿವೆ. ಆದರೆ ಇಂಥದ್ದೇ ಅನುಭವ ವಿಮಾನದಲ್ಲಿಯೂ ಆದರೆ ಹೇಗಿರಬೇಡ? ವಿಮಾನದ ಕಿಟಕಿ ಬಳಿ ಗುಟ್ಕಾ ಚಿತ್ತಾರ ಕಂಡ ಐಎಎಸ್ ಅಧಿಕಾರಿ ಅವನೀಶ್ ಶರಣ್ ಅದರ ಚಿತ್ರವನ್ನು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದಾರೆ. ಇಂಥದ್ದೇ ಹಲವು ಚಿತ್ರಗಳು ಮತ್ತು ತಮಾಷೆ ಮೀಮ್​ಗಳೊಂದಿಗೆ ಈ ಪೋಸ್ಟ್​ಗೆ ಪ್ರತಿಕ್ರಿಯಿಸಿರುವ ಹಲವರು ತಮ್ಮ ಅನುಭವವನ್ನೂ ಹಂಚಿಕೊಂಡಿದ್ದಾರೆ.

ತಾವು ಪ್ರವಾಸ ಹೊರಟಿದ್ದ ಸಂದರ್ಭದಲ್ಲಿ ಕಿಟಕಿಯ ಚಿತ್ರ ತೆಗೆದು ಟ್ವಿಟರ್​ನಲ್ಲಿ ಹಂಚಿಕೊಂಡಿದ್ದರು. ಆದರೆ ನೆಟಿಜನ್ನರು ಚಿತ್ರದಲ್ಲಿದ್ದ ಮತ್ತೊಂದು ಅಂಶದತ್ತ ಹೆಚ್ಚು ಗಮನ ಕೊಟ್ಟಿದ್ದಾರೆ. ಕಿಟಕಿಯ ಕೆಳಗೆ ಗುಟ್ಕಾದ ದೊಡ್ಡ ಚಿತ್ತಾರ ಮೂಡಿದೆ. ಇಲ್ಲಿ ಕುಳಿತಿದ್ದ ಯಾರೋ ಒಬ್ಬರು ತಮ್ಮ ಕುರುಹು ಉಳಿಸಿ ಹೋಗಿದ್ದಾರೆ ಎಂದು ನೆಟಿಜನ್ನರು ವ್ಯಂಗ್ಯವಾಡಿದ್ದಾರೆ.

ಕಳೆದ ಕೆಲ ದಿನಗಳಿಂದಲೂ ಈ ಚಿತ್ರವು ಇಂಟರ್ನೆಟ್​ನಲ್ಲಿ ಹರಿದಾಡುತ್ತಿದೆ. ಈವರೆಗೆ 11 ಸಾವಿರ ಲೈಕ್ಸ್ ಮತ್ತು ಸಾವಿರಾರು ಪ್ರತಿಕ್ರಿಯೆಗಳು ಈ ಚಿತ್ರಕ್ಕೆ ಬಂದಿವೆ.

‘ಇದೆಂಥ ಅಸಹ್ಯ’ ಎಂದು ಹಲವರು ಬೇಸರ ವ್ಯಕ್ತಪಡಿಸಿದ್ದಾರೆ. ‘ಹೀಗೆ ಮಾಡಿದವರು ಯಾರು ಎಂದು ಪತ್ತೆಹೆಚ್ಚಿ, ದುಬಾರಿ ದಂಡ ವಿಧಿಸಬೇಕು’ ಎಂದು ಕೆಲವರು ಬರೆದಿದ್ದಾರೆ. ‘ಸೂಪರ್​ಸ್ಟಾರ್​ಗಳೇ ತಂಬಾಕು ಉತ್ಪನ್ನಗಳನ್ನು ಶಿಫಾರಸು ಮಾಡುತ್ತಿರುವುದರಿಂದ ಹೆಚ್ಚಿನ ಜನರು ಈ ಅಪಾಯಕಾರಿ ಗುಟ್ಕಾ ಬಳಕೆಗೆ ಮುಂದಾಗುತ್ತಿದ್ದಾರೆ. ಅಂಥ ಸೂಪರ್​ಸ್ಟಾರ್​ಗಳಿಗೆ ಎಚ್ಚರಿಕೆ ನೀಡಬೇಕು’ ಎಂದು ಹಲವು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಚಿತ್ರಕ್ಕೆ ಇಂಟರ್ನೆಟ್ ಬಳಕೆದಾರರ ಪ್ರತಿಕ್ರಿಯೆ ಹೀಗಿದೆ…

ಕರ್ನಾಟಕದ ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ. ದೇಶದ ಇತರ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ ಪ್ರಮುಖ  ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:00 am, Fri, 27 May 22

ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
51 ಎಸೆತಗಳಲ್ಲಿ 151 ರನ್ ಚಚ್ಚಿದ ಫಿನ್ ಅಲೆನ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ: ಪ್ರಮಾಣಿಕ ವಿಮರ್ಶೆ ನೀಡಿದ ಐಂದ್ರಿತಾ
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಇಂಥ ಘಟನೆಗಳು ಜರುಗದಂತೆ ಮುಂಜಾಗ್ರತೆ ಕ್ರಮವಹಿಸಬೇಕು: ಜಗದೀಶ್ ಶೆಟ್ಟರ್
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಟಿವಿ9 ಕನ್ನಡ ವರದಿಗಾರನೊಂದಿಗೆ ಆರೆಮನಸ್ಸಿನಿಂದ ಮಾತಾಡಿದ ವಿದ್ಯಾರ್ಥಿ
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ಇದು ರಾಜಕೀಯ ಮಾಡುವ ಸಂದರ್ಭ ಅಲ್ಲ, ರೂಪಾನಿ ಅತ್ಮಕ್ಕೆ ಶಾಂತಿ ಸಿಗಲಿ: ಈಶ್ವರ್
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ರಮೋಲಾ ಮನೆಗೆ ಹೋದ ರಕ್ಷಕ್​ಗೆ ಭರ್ಜರಿ ಆತಿಥ್ಯ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ಭಾರತದ ಪೈಲಟ್ ಮತ್ತು ಇಂಜಿನೀಯರ್​ಗಳು ವಿಶ್ವದಲ್ಲೇ ಅತ್ಯುತ್ತಮ: ಇಬ್ರಾಹಿಂ
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್
ವಿಮಾನ ದುರಂತ: ರಾಜೀನಾಮೆ ಏಕೆ ಕೊಡಬೇಕು? ಮೋದಿ ಪರ ಇಬ್ರಾಹಿಂ ಬ್ಯಾಟಿಂಗ್