AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಓಯೋ ರೂಮ್ ಬುಕ್ ಮಾಡಿದ ವ್ಯಕ್ತಿ; ರೂಮ್​​ ಕಂಡು ಕಂಗಾಲು

ಬೆಂಗಳೂರಿನ ವ್ಯಕ್ತಿಯೊಬ್ಬರು 'ಮೇಕ್ ಮೈ ಟ್ರಿಪ್' ಮೂಲಕ 'ಓಯೋ ಹೋಟೆಲ್' ನಲ್ಲಿ ರೂಮ್ ಬುಕ್ ಮಾಡಿದ್ದಾರೆ. ಆದರೆ ಹೋಟೆಲ್​​ ತಲುಪಿದ ತಕ್ಷಣ ರೂಮ್​​ ಕಂಡು ಕಂಗಾಲಾಗಿದ್ದಾರೆ. ಸದ್ಯ ತನಗಾದ ಅನುಭವವನ್ನು ಸೋಶಿಯಲ್​​ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಈ ಪೋಸ್ಟ್​​​ ಇದೀಗ ಎಲ್ಲೆಡೆ ಭಾರೀ ವೈರಲ್​ ಆಗಿದೆ.

Viral Post: ಓಯೋ ರೂಮ್ ಬುಕ್ ಮಾಡಿದ ವ್ಯಕ್ತಿ; ರೂಮ್​​ ಕಂಡು ಕಂಗಾಲು
Viral PostImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on:Feb 13, 2024 | 12:38 PM

ಇತ್ತೀಚಿನ ದಿನಗಳಲ್ಲಿ ಬಹುತೇಕ ಎಲ್ಲಾ ಜನರ ಕೆಲಸಗಳು ಆನ್‌ಲೈನ್‌ನಲ್ಲಿ ನಡೆಯುತ್ತಿದೆ. ನೀವು ಯಾರಿಗಾದರೂ ಹಣವನ್ನು ಕಳುಹಿಸಲು ಅಥವಾ ಎಲ್ಲಿಂದಲಾದರೂ ಹಣವನ್ನು ಪಡೆಯಲು ಬಯಸಿದರೆ,ಆನ್‌ಲೈನ್‌ ಮೂಲಕ ಕೆಲಸ ಸೆಕೆಂಡುಗಳಲ್ಲಿ ಮುಗಿಯುತ್ತದೆ. ರೈಲು, ಬಸ್ ಅಥವಾ ಕ್ಯಾಬ್ ಬುಕ್ ಮಾಡುವುದರಿಂದ ಹಿಡಿದು ಹೋಟೆಲ್ ಬುಕ್ ಮಾಡುವವರೆಗೆ ಈ ಎಲ್ಲಾ ಕೆಲಸಗಳನ್ನು ಆನ್‌ಲೈನ್‌ನಲ್ಲಿ ಸುಲಭವಾಗಿ ಮಾಡಬಹುದು. ಆನ್ ಲೈನ್ ವಹಿವಾಟುಗಳಿಂದ ವಂಚನೆಗೆ ಬಲಿಯಾಗುವವರ ಸಂಖ್ಯೆಯು ಹೆಚ್ಚಿದೆ. ಇದೀಗಾ ಮೇಕ್ ಮೈಟ್ರಿಪ್ ಮೂಲಕ ಓಯೋ ಹೋಟೆಲ್ ನಲ್ಲಿ ರೂಂ ಬುಕ್ ಮಾಡಿದ್ದ ಬೆಂಗಳೂರಿನ ವ್ಯಕ್ತಿಯೊಬ್ಬರು ರೂಮ್​​ನ ಪರಿಸ್ಥಿತಿ ಕಂಡು ತಲೆಗೆ ಕೈ ಕೊಟ್ಟು ಕುಳಿತಿದ್ದಾರೆ. ವ್ಯಕ್ತಿಯ ಹೆಸರು ಅಮಿತ್ ಚಾನ್ಸಿಕರ್. ಅವರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಟ್ವಿಟ್ಟರ್‌ನಲ್ಲಿ ಕೆಲವು ಚಿತ್ರಗಳನ್ನು ಹಂಚಿಕೊಂಡಿದ್ದಾರೆ ಮತ್ತು ತನಗೆ ಏನಾಯಿತು ಎಂಬುದರ ಕುರಿತು ಸಂಪೂರ್ಣ ಕಥೆಯನ್ನು ಹೇಳಿದ್ದಾರೆ.

ವಾಸ್ತವವಾಗಿ, ಅವರು ರೂಮ್​​ ಬುಕ್​ ಮಾಡಿ ಅಲ್ಲಿಗೆ ಹೋದಾಗ ಸುಸಜ್ಜಿತ ರೂಮ್​​ ಬದಲಿಗೆ ಕಟ್ಟಡ ಕಾಮಗಾರಿ ನಡೆಯುತ್ತಿರುವುದನ್ನು ಕಂಡು ಶಾಕ್​​ಗೆ ಒಳಗಾಗಿದ್ದಾರೆ. ಈ ಘಟನೆಯ ನಂತರ, ಅಮಿತ್ ಎರಡೂ ಬುಕಿಂಗ್ ಪ್ಲಾಟ್‌ಫಾರ್ಮ್‌ಗಳನ್ನು ಬಲವಾಗಿ ಟೀಕಿಸಿ ಮತ್ತು ವಿಷಯವನ್ನು ವಂಚನೆ ಎಂದು ವಿವರಿಸಿದ್ದಾರೆ. ‘ಮೇಕ್ ಮೈ ಟ್ರಿಪ್’ ಮತ್ತು ‘ಓಯೋ ಹೋಟೆಲ್’ ಎಂದು ಟ್ಯಾಗ್ ಮಾಡಿದ ಅವರು ಪೋಸ್ಟ್‌ನಲ್ಲಿ ಬರೆದಿದ್ದಾರೆ, ‘ಇತ್ತೀಚೆಗೆ ಇಲ್ಲಿಗೆ ಬಂದಿದ್ದೇನೆ ಮತ್ತು ನಾನು ಬುಕ್ ಮಾಡಿದ ಹೋಟೆಲ್ ನವೀಕರಣದಲ್ಲಿದೆ ಎಂದು ಕಂಡುಬಂದಿದೆ. ಮನುಷ್ಯರಿಲ್ಲ. ಇದು ವಂಚನೆಗೆ ಸಮಾನವಾಗಿದೆ . ಇಲ್ಲಿ 2 ಗಂಟೆ ವ್ಯರ್ಥ ಮಾಡಿದ ನಂತರ ಅವರು ನನ್ನ ಮರುಪಾವತಿಯಿಂದ ಹಣವನ್ನು ಕಡಿತಗೊಳಿಸಿದರು. ನಿಮಗೆ ನಾಚಿಕೆಯಾಗಬೇಕು’ ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ನಿಮ್ಗೂ ಚಾಕೊಲೇಟ್ ಅಂದ್ರೆ ತುಂಬಾನೇ ಇಷ್ಟಾನಾ? ಹಾಗಿದ್ರೆ ಈ ವಿಡಿಯೋ ತಪ್ಪದೆ ನೋಡಿ

ಆದಾಗ್ಯೂ, ಓಯೋ ಹೋಟೆಲ್ ಕೂಡ ಅವರ ಪೋಸ್ಟ್‌ಗೆ ಪ್ರತಿಕ್ರಿಯಿಸಿ, ‘ನಿಮಗೆ ಉಂಟಾದ ಅನಾನುಕೂಲಕ್ಕಾಗಿ ನಾವು ಕ್ಷಮೆಯಾಚಿಸುತ್ತೇವೆ. ನಮ್ಮ ತಂಡವು ಈಗಾಗಲೇ ನಿರ್ಣಯದೊಂದಿಗೆ ನಿಮ್ಮನ್ನು ಸಂಪರ್ಕಿಸಿದೆ ಮತ್ತು ಅಗತ್ಯ ಕ್ರಮಗಳನ್ನು ತೆಗೆದುಕೊಂಡಿದೆ ಎಂದು ನಾವು ನಂಬುತ್ತೇವೆ. ಅಲ್ಲದೆ, ಹೆಚ್ಚಿನ ಸಹಾಯಕ್ಕಾಗಿ MMT ಅನ್ನು ಸಂಪರ್ಕಿಸಲು ನಿಮ್ಮನ್ನು ವಿನಂತಿಸಲಾಗಿದೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:37 pm, Tue, 13 February 24

ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಸರ್ಕಾರ ಮತ್ತು ಪಕ್ಷ ಕೇಂದ್ರ ಸರ್ಕಾರದೊಂದಿಗಿವೆ: ಶಿವಕುಮಾರ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ನಮ್ಮ ಮುಗ್ಧರನ್ನು ಕೊಂದವರನ್ನು ಮಾತ್ರ ಕೊಂದಿದ್ದೇವೆ; ರಾಜನಾಥ್ ಸಿಂಗ್
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಆಪರೇಷನ್ ಸಿಂಧೂರ: ನಟ ಪ್ರೇಮ್ ಪ್ರತಿಕ್ರಿಯೆ ಹೀಗಿತ್ತು...
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ಮಾಕ್​ಡ್ರಿಲ್: ಬೆಂಗಳೂರಿನಲ್ಲಿ ಮೊಳಗಿದ ಸೈರನ್ ಶಬ್ಧ, ನೀವು ಕೇಳಿಸಿಕೊಳ್ಳಿ
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ತಿಲಕವನ್ನಿಟ್ಟುಕೊಂಡು ಸಿದ್ದರಾಮಯ್ಯ ಸಿಂಧೂರ ರಾಮಯ್ಯ ಆಗಿದ್ದಾರೆ: ಪ್ರತಾಪ್
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಕೊಪ್ಪಳ: ಗೃಹ ಲಕ್ಷ್ಮಿ ಹಣ ಕೂಡಿಟ್ಟು ಬೋರವೆಲ್ ಕೊರೆಸಿದ ಅಜ್ಜಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಬೆಂಗಳೂರಿನಲ್ಲಿ ನಡೆಯುತ್ತಿರುವ ಮಾಕ್ ಡ್ರಿಲ್​ ನೇರ ಪ್ರಸಾರ ಇಲ್ಲಿದೆ ನೋಡಿ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ಆಪರೇಷನ್​ ಸಿಂಧೂರ್​: ರಾಜ್ಯದ ಕರಾವಳಿಯಲ್ಲಿ ಕಾವಲು ಪಡೆ ತೀವ್ರ ನಿಗಾ
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ವಿಮಾನ ನಿಲ್ದಾಣಗಳಲ್ಲಿ ದಿಕ್ಕುತೋಚದೆ ಕುಳಿತ ಪ್ರಯಾಣಿಕರು!
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ
ಆಪರೇಷನ್​ ಸಿಂಧೂರ್: ಇಂದೊಂದು ಸಂತೋಷದ ಸಂಗತಿ, ಮೃತ ಮಂಜುನಾಥ್​ ತಾಯಿ