AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತ ಯುವಕ ಕಡೆಗೆ ಮಾಡಿದ್ದೇನು ಗೊತ್ತಾ?

ದೀಪೇಂದ್ರ ರಾಥೋಡ್ (29) ಸಾಕಷ್ಟು ವರ್ಷಗಳಿಂದ ವಧು ಹುಡುಕಾಟದ ಹಲವಾರು ಆ್ಯಪ್​ಗಳನ್ನು ಬಳಸಿದ್ದರೂ ಕೂಡ ಏನೂ ಪ್ರಯೋಜನವಾಗಿಲ್ಲ. ಇದರಿಂದಾಗಿ ಮದುವೆಯಾಗುವ ಆಸೆಯನ್ನೇ ಬಿಟ್ಟಿದ್ದ. ಇದೀಗಾ ಹೊಸ ಪ್ಲಾನ್​​ ಒಂದನ್ನು ತಯಾರಿಸಿದ್ದು, ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಫೇಮಸ್​​ ಆಗಿದ್ದಾನೆ.

Viral Post: ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತ ಯುವಕ ಕಡೆಗೆ ಮಾಡಿದ್ದೇನು ಗೊತ್ತಾ?
ದೀಪೇಂದ್ರ ರಾಥೋಡ್Image Credit source: India Today
ಅಕ್ಷತಾ ವರ್ಕಾಡಿ
|

Updated on:Feb 20, 2024 | 6:20 PM

Share

ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತಿದ್ದ ಮಧ್ಯಪ್ರದೇಶದ 29 ವರ್ಷದ ಯುವಕನೊಬ್ಬ ಕಡೆಗೂ ತನಗಾಗಿ ವಧುವನ್ನು ಹುಡುಕುವಲ್ಲಿ ವಿಶಿಷ್ಟ ವಿಧಾನವನ್ನು ಅನುಸರಿಸಿದ್ದಾನೆ. ತನ್ನ ಹೆಸರಿನಿಂದ ಹಿಡಿದು ತನ್ನೆಲ್ಲಾ ಮಾಹಿತಿಗಳನ್ನೊಳಗೊಂಡ ಬ್ಯಾನರ್​​ ಒಂದನ್ನು ತಯಾರಿಸಿ ತನ್ನ ಆಟೋ ರಿಕ್ಷಾಕ್ಕೆ ಅಂಟಿಸಿಕೊಂಡಿದ್ದಾನೆ. ಸದ್ಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ದೀಪೇಂದ್ರ ರಾಥೋಡ್ (29) ಸಾಕಷ್ಟು ವರ್ಷಗಳಿಂದ ವಧು ಹುಡುಕಾಟದ ಹಲವಾರು ಆ್ಯಪ್​ಗಳನ್ನು ಬಳಸಿದ್ದರೂ ಕೂಡ ಏನೂ ಪ್ರಯೋಜನವಾಗಿಲ್ಲ. ಇದರಿಂದಾಗಿ ಮದುವೆಯಾಗುವ ಆಸೆಯನ್ನೇ ಬಿಟ್ಟಿದ್ದ. ಇದೀಗಾ ಹೊಸ ಪ್ಲಾನ್​​ ಒಂದನ್ನು ತಯಾರಿಸಿದ್ದು, ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಫೇಮಸ್​​ ಆಗಿದ್ದಾನೆ.ಇದಲ್ಲದೇ ತಾನು ಯಾವುದೇ ಜಾತಿ, ಧರ್ಮದ ಮಹಿಳೆಯನ್ನು ಮದುವೆಯಾಗಲು ಸಿದ್ಧನಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ‘Smile Designing’ Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ

ದೀಪೇಂದ್ರ ರಾಥೋಡ್ ಇಂಡಿಯಾ ಟುಡೇ ಜೊತೆ ಮಾತನಾಡಿ “ಸಮಾಜದಲ್ಲಿ ಮಹಿಳೆಯರ ಕೊರತೆ” ಯಿಂದಾಗಿ ಹೆಣ್ಣು ಹುಡುಕಲು ಕಷ್ಟವಾಗುತ್ತಿದೆ. ಜಾತಿ ಅಥವಾ ಧರ್ಮದ ವ್ಯತ್ಯಾಸವು ನನಗೆ ಸಮಸ್ಯೆಯಿಲ್ಲ ಮತ್ತು ಯಾವುದೇ ಮಹಿಳೆ ಮದುವೆಯ ಪ್ರಸ್ತಾಪದೊಂದಿಗೆ ನನ್ನನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾನೆ.

ಆಟೋ ರಿಕ್ಷಾಕ್ಕೆ ಅಂಟಿಸಲಾಗಿರುವ ಪೋಸ್ಟರ್​​ನಲ್ಲಿ ದೀಪೇಂದ್ರ ರಾಥೋಡ್ ಅವರ ಎತ್ತರ, ಹುಟ್ಟಿದ ದಿನಾಂಕ ಮತ್ತು ಸಮಯ, ರಕ್ತದ ಗುಂಪು, ಶೈಕ್ಷಣಿಕ ಅರ್ಹತೆಗಳು, ‘ಗೋತ್ರ’ ಇತ್ಯಾದಿ ವಿವರಗಳಿವೆ. ರಾಥೋಡ್ ಅವರು ಪ್ರಸ್ತುತ ತಮ್ಮದೇ ಇ-ರಿಕ್ಷಾವನ್ನು ಓಡಿಸುವ ಮೂಲಕ ತಮ್ಮ ಕುಟುಂಬ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Tue, 20 February 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ