AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತ ಯುವಕ ಕಡೆಗೆ ಮಾಡಿದ್ದೇನು ಗೊತ್ತಾ?

ದೀಪೇಂದ್ರ ರಾಥೋಡ್ (29) ಸಾಕಷ್ಟು ವರ್ಷಗಳಿಂದ ವಧು ಹುಡುಕಾಟದ ಹಲವಾರು ಆ್ಯಪ್​ಗಳನ್ನು ಬಳಸಿದ್ದರೂ ಕೂಡ ಏನೂ ಪ್ರಯೋಜನವಾಗಿಲ್ಲ. ಇದರಿಂದಾಗಿ ಮದುವೆಯಾಗುವ ಆಸೆಯನ್ನೇ ಬಿಟ್ಟಿದ್ದ. ಇದೀಗಾ ಹೊಸ ಪ್ಲಾನ್​​ ಒಂದನ್ನು ತಯಾರಿಸಿದ್ದು, ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಫೇಮಸ್​​ ಆಗಿದ್ದಾನೆ.

Viral Post: ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತ ಯುವಕ ಕಡೆಗೆ ಮಾಡಿದ್ದೇನು ಗೊತ್ತಾ?
ದೀಪೇಂದ್ರ ರಾಥೋಡ್Image Credit source: India Today
ಅಕ್ಷತಾ ವರ್ಕಾಡಿ
|

Updated on:Feb 20, 2024 | 6:20 PM

Share

ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತಿದ್ದ ಮಧ್ಯಪ್ರದೇಶದ 29 ವರ್ಷದ ಯುವಕನೊಬ್ಬ ಕಡೆಗೂ ತನಗಾಗಿ ವಧುವನ್ನು ಹುಡುಕುವಲ್ಲಿ ವಿಶಿಷ್ಟ ವಿಧಾನವನ್ನು ಅನುಸರಿಸಿದ್ದಾನೆ. ತನ್ನ ಹೆಸರಿನಿಂದ ಹಿಡಿದು ತನ್ನೆಲ್ಲಾ ಮಾಹಿತಿಗಳನ್ನೊಳಗೊಂಡ ಬ್ಯಾನರ್​​ ಒಂದನ್ನು ತಯಾರಿಸಿ ತನ್ನ ಆಟೋ ರಿಕ್ಷಾಕ್ಕೆ ಅಂಟಿಸಿಕೊಂಡಿದ್ದಾನೆ. ಸದ್ಯ ಈ ಫೋಟೊ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​​ ಆಗಿದೆ.

ದೀಪೇಂದ್ರ ರಾಥೋಡ್ (29) ಸಾಕಷ್ಟು ವರ್ಷಗಳಿಂದ ವಧು ಹುಡುಕಾಟದ ಹಲವಾರು ಆ್ಯಪ್​ಗಳನ್ನು ಬಳಸಿದ್ದರೂ ಕೂಡ ಏನೂ ಪ್ರಯೋಜನವಾಗಿಲ್ಲ. ಇದರಿಂದಾಗಿ ಮದುವೆಯಾಗುವ ಆಸೆಯನ್ನೇ ಬಿಟ್ಟಿದ್ದ. ಇದೀಗಾ ಹೊಸ ಪ್ಲಾನ್​​ ಒಂದನ್ನು ತಯಾರಿಸಿದ್ದು, ಈ ಮೂಲಕ ಸಾಮಾಜಿಕ ಜಾಲತಾಣದಲ್ಲಿ ಸಖತ್​ ಫೇಮಸ್​​ ಆಗಿದ್ದಾನೆ.ಇದಲ್ಲದೇ ತಾನು ಯಾವುದೇ ಜಾತಿ, ಧರ್ಮದ ಮಹಿಳೆಯನ್ನು ಮದುವೆಯಾಗಲು ಸಿದ್ಧನಿದ್ದೇನೆ ಎಂದು ಒಪ್ಪಿಕೊಂಡಿದ್ದಾನೆ.

ಇದನ್ನೂ ಓದಿ: ‘Smile Designing’ Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ

ದೀಪೇಂದ್ರ ರಾಥೋಡ್ ಇಂಡಿಯಾ ಟುಡೇ ಜೊತೆ ಮಾತನಾಡಿ “ಸಮಾಜದಲ್ಲಿ ಮಹಿಳೆಯರ ಕೊರತೆ” ಯಿಂದಾಗಿ ಹೆಣ್ಣು ಹುಡುಕಲು ಕಷ್ಟವಾಗುತ್ತಿದೆ. ಜಾತಿ ಅಥವಾ ಧರ್ಮದ ವ್ಯತ್ಯಾಸವು ನನಗೆ ಸಮಸ್ಯೆಯಿಲ್ಲ ಮತ್ತು ಯಾವುದೇ ಮಹಿಳೆ ಮದುವೆಯ ಪ್ರಸ್ತಾಪದೊಂದಿಗೆ ನನ್ನನ್ನು ಸಂಪರ್ಕಿಸಬಹುದು ಎಂದು ಹೇಳಿದ್ದಾನೆ.

ಆಟೋ ರಿಕ್ಷಾಕ್ಕೆ ಅಂಟಿಸಲಾಗಿರುವ ಪೋಸ್ಟರ್​​ನಲ್ಲಿ ದೀಪೇಂದ್ರ ರಾಥೋಡ್ ಅವರ ಎತ್ತರ, ಹುಟ್ಟಿದ ದಿನಾಂಕ ಮತ್ತು ಸಮಯ, ರಕ್ತದ ಗುಂಪು, ಶೈಕ್ಷಣಿಕ ಅರ್ಹತೆಗಳು, ‘ಗೋತ್ರ’ ಇತ್ಯಾದಿ ವಿವರಗಳಿವೆ. ರಾಥೋಡ್ ಅವರು ಪ್ರಸ್ತುತ ತಮ್ಮದೇ ಇ-ರಿಕ್ಷಾವನ್ನು ಓಡಿಸುವ ಮೂಲಕ ತಮ್ಮ ಕುಟುಂಬ ನಡೆಸುತ್ತಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 6:19 pm, Tue, 20 February 24

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
‘ನಾಗುಗೆ ವಧು ಬೇಕಾಗಿದೆ’ ಟೈಟಲ್ ವಿಶೇಷತೆ ಬಗ್ಗೆ ವಿವರಿಸಿದ ನಿರ್ದೇಶಕ ಚೇತನ್
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೊರಗುಂಟೆಪಾಳ್ಯ ಭೀಕರ ರಸ್ತೆ ಅಪಘಾತ: ಸ್ಫೋಟಕ ಮಾಹಿತಿ ನೀಡಿದ ಡಿಸಿಪಿ
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ಗೃಹಲಕ್ಷ್ಮೀ ಯೋಜನೆ ಪರಿಷ್ಕರಣೆ: 3.89 ಲಕ್ಷ ಜನ ಸ್ಕೀಂನಿಂದ ಔಟ್!
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಬೈಕ್​​​ಗೆ ಗುದ್ದಿ ನೇರವಾಗಿ ಅಡಿಕೆ ತೋಟಕ್ಕೆ ನುಗ್ಗಿದ KSRTC ಬಸ್
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ