AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ಬೆಂಗಳೂರಿನಲ್ಲಿದೆ ನಿಮ್ಮ ಮಾಜಿ ಪ್ರೇಯಸಿಯನ್ನು ನೆನಪಿಸುವ ಚಾಟ್ ಸೆಂಟರ್; ವೈರಲ್​​​ ಬೋರ್ಡ್​​​​

ಬೆಂಗಳೂರಿನ ಚಾಟ್ಸ್​​​​ ಅಂಗಡಿಯೊಂದು ಇತ್ತೀಚಿನ ದಿನಗಳಲ್ಲಿ ಸುದ್ದಿಯಲ್ಲಿದೆ. ಈ ಅಂಗಡಿಯ ಬೋರ್ಡ್​​​​ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗುತ್ತಿದೆ. 'ಎಕ್ಸ್​​​​ ಗರ್ಲ್‌ಫ್ರೆಂಡ್ ಚಾಟ್ ಸೆಂಟರ್' ಎಂಬ ಹೆಸರಿನಿಂದಲೇ ಆಹಾರ ಪ್ರಿಯರನ್ನು ತನ್ನತ್ತ ಸೆಳೆಯುತ್ತಿದೆ ಈ ಅಂಗಡಿ. ವೈರಲ್​​​ ಪೋಸ್ಟ್​​​ ಇಲ್ಲಿದೆ ನೋಡಿ.

Viral: ಬೆಂಗಳೂರಿನಲ್ಲಿದೆ ನಿಮ್ಮ ಮಾಜಿ ಪ್ರೇಯಸಿಯನ್ನು ನೆನಪಿಸುವ ಚಾಟ್ ಸೆಂಟರ್; ವೈರಲ್​​​ ಬೋರ್ಡ್​​​​
Ex-Girlfriend Chaat CentreImage Credit source: Twitter
ಅಕ್ಷತಾ ವರ್ಕಾಡಿ
|

Updated on: Feb 01, 2024 | 5:59 PM

Share

ಇಂದಿನ ಕಾಲಮಾನದಲ್ಲಿ ಯಾವುದೇ ಬಿಸಿನೆಸ್​​​​​​ ಪ್ರಾರಂಭಿಸಿ ಲಾಭ ಗಳಿಸುವುದು ಅಷ್ಟು ಸುಲಭವಲ್ಲ. ಆಹಾರದ ಗುಣಮಟ್ಟ ಹಾಗೂ ಸ್ಥಳೀಯತೆಯನ್ನು ಹೊರತುಪಡಿಸಿ ಕ್ರಿಯಾತ್ಮಕ ಆಲೋಚನೆಗಳೊಂದಿಗೆ  ಜನರನ್ನು ತಮ್ಮತ್ತ ಸೆಳೆಯುವುದು ಅಗತ್ಯವಾಗಿರುತ್ತದೆ.  ಇದೀಗಾ ವಿಭಿನ್ನ ರೀತಿಯ ಹೆಸರಿನಿಂದಲೇ  ಬೆಂಗಳೂರಿನ ಆರ್​​ ಟಿ ನಗರದ ಸಣ್ಣ ಚಾಟ್ಸ್​​​​ ಅಂಗಡಿ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಸುದ್ದಿಯಲ್ಲಿದೆ. ಅಂಗಡಿಗೆ ‘ಎಕ್ಸ್​​​​ ಗರ್ಲ್‌ಫ್ರೆಂಡ್ ಚಾಟ್ ಸೆಂಟರ್’ ಎಂಬ ಹೆಸರನ್ನು ಇಡಲಾಗಿದ್ದು, ಈ ಅಂಗಡಿಯ ಬೋರ್ಡ್​​​​ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ಈ ಚಾಟ್ ಸೆಂಟರ್​​​ನ ಬೋರ್ಡನ್ನು @dankchikidang ಎಂಬ ಟ್ವಿಟರ್​​ ಬಳಕೆದಾರರು ತಮ್ಮ ಖಾತೆಯಲ್ಲಿ ಹಂಚಿಕೊಂಡಿದ್ದು, ಇದೀಗಾಗಲೇ ಲಕ್ಷಾಂತರ ನೆಟ್ಟಿಗರನ್ನು ತಲುಪಿದೆ. ಜನವರಿ 29ರಂದು ಪೋಸ್ಟ್ ಹಂಚಿಕೊಳ್ಳಲಾಗಿದೆ. ರೆಸ್ಟೋರೆಂಟ್‌ನ ಹೆಸರನ್ನು ಓದಿದ ನಂತರ, ಜನರು ವಿವಿಧ ರೀತಿಯ ಕಾಮೆಂಟ್‌ಗಳನ್ನು ನೀಡುವ ಮೂಲಕ ತಮ್ಮ ಪ್ರತಿಕ್ರಿಯೆಯನ್ನು ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: 1 ಕಪ್​​​​ ಬೇಳೆ ಸಾರಿನ ಬೆಲೆ 25 ಸಾವಿರ ರೂ. ಯಾಕಿಷ್ಟು ದುಬಾರಿ?; ವಿಡಿಯೋ ವೈರಲ್

‘ಎಕ್ಸ್​​​​ ಗರ್ಲ್‌ಫ್ರೆಂಡ್ ಚಾಟ್ ಸೆಂಟರ್’ ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಈ ಪೋಸ್ಟ್‌ಗೆ ಪ್ರತಿಕ್ರಿಯಿಸಿದ ಬಳಕೆದಾರರು, ‘ಯಾರೂ ತಮ್ಮ ಗೆಳತಿಯೊಂದಿಗೆ ಇಲ್ಲಿಗೆ ಹೋಗಲು ಇಷ್ಟಪಡಲ್ಲ’ ಎಂದು ಬರೆದಿದ್ದಾರೆ. ಇನ್ನೊಬ್ಬ ಬಳಕೆದಾರರು ಬರೆದಿದ್ದಾರೆ. ಮತ್ತೊಬ್ಬರು ‘ಈ ಬೋರ್ಡ್​​​ ನನ್ನ ಮಾಜಿ ಪ್ರೇಯಸಿಯನ್ನೇ ನೆನಪಿಸಿತು’ ಎಂದು ಬರೆದುಕೊಂಡಿದ್ದಾರೆ.

ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಮನುಷ್ಯರು ಅಷ್ಟೇ ಅಲ್ಲ ಪ್ರಾಣಿಗಳಿಗೂ ಕೂಡ ಒಂಟಿಯಾಗಿರೋದು ಕಷ್ಟ
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲುತೂರಾಟ: ಘಟನೆಗೆ ಕಾರಣ ರಿವೀಲ್​​
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ತಟ್ಟೆಯಲ್ಲಿ ಉಳಿದಿದ್ದ ಆಹಾರವನ್ನು ಒಟ್ಟು ಮಾಡಿದ ಯುಪಿಎಸ್​​ಸಿ ಆಕಾಂಕ್ಷಿ
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಕೋಪದಲ್ಲಿದ್ದಾಗ ಮನುಷ್ಯ ಈ ಮೂರು ನಿರ್ಧಾರಗಳನ್ನು ತೆಗೆದುಕೊಳ್ಳಬಾರದು!
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಇಂದು ಈ ರಾಶಿಯವರ ಆದಾಯದಲ್ಲಿ ಏರಿಕೆ
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಹೋಟೆಲ್ ಉದ್ಯಮದಿಂದ ಭಾರಿ ತೆರಿಗೆ ವಂಚನೆ: 70 ಸಾವಿರ ಕೋಟಿ ಅಕ್ರಮ ಬಯಲು
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ