Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ

"ಇತ್ತೀಚೆಗಷ್ಟೇ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ವ್ಯಕ್ತಿಯೊಬ್ಬ ಈ ಡೆಂಟಲ್​​ ಕ್ಲಿನಿಕ್​​​ನಲ್ಲಿ ಸಾವನ್ನಪ್ಪಿರುವ ಘಟನೆ ಅಘಾತವನ್ನುಂಟು ಮಾಡಿದೆ. ಆದರೆ ಇಲ್ಲಿನ ದಂತ ವೈದ್ಯರ ನಿರ್ಲಕ್ಷ್ಯಗಳು ಇದೇ ಮೊದಲೇನಲ್ಲಾ ಈ ಹಿಂದೆಯೂ ಕೂಡ ಇಂತದ್ದೇ ಘಟನೆ ನಡೆದಿದೆ " ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

Viral Post: ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ
ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯImage Credit source: Twitter
Follow us
ಅಕ್ಷತಾ ವರ್ಕಾಡಿ
|

Updated on: Feb 23, 2024 | 6:12 PM

ಹೈದರಾಬಾದ್‌: ಕೆಲ ದಿನಗಳ ಹಿಂದೆಯಷ್ಟೇ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿಯೊರ್ವನಿಗೆ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗಿದ್ದ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ವೈರಲ್​​ ಆಗಿತ್ತು. ಇದೀಗಾ ಇದಕ್ಕೆ ಪೂರಕ ಎಂಬಂತೆ ಇದೇ ಡೆಂಟಲ್​​​ ಆಸ್ಪತ್ರೆಯಲ್ಲಿ ನಡೆದಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯರೊಬ್ಬರು ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿ ಕಳುಹಿಸಿದ್ದಾರೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಇದೀಗಾ @sowmya_sangam ಎಂಬ ಟ್ವಿಟರ್​​ ಬಳಕೆದಾರರು ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ತನ್ನ ಗೆಳತಿಗಾದ ಅನ್ಯಾಯವನ್ನು ಪೋಸ್ಟ್​ ಮೂಲಕ ಹಂಚಿಕೊಂಡಿದ್ದಾರೆ. “ಇತ್ತೀಚೆಗಷ್ಟೇ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ವ್ಯಕ್ತಿಯೊಬ್ಬ ಈ ಡೆಂಟಲ್​​ ಕ್ಲಿನಿಕ್​​​ನಲ್ಲಿ ಸಾವನ್ನಪ್ಪಿರುವ ಘಟನೆ ಅಘಾತವನ್ನುಂಟು ಮಾಡಿದೆ. ಆದರೆ ಇಲ್ಲಿನ ದಂತ ವೈದ್ಯರ ನಿರ್ಲಕ್ಷ್ಯಗಳು ಇದೇ ಮೊದಲೇನಲ್ಲಾ ಈ ಹಿಂದೆಯೂ ಕೂಡ ಇಂತದ್ದೇ ಘಟನೆ ನಡೆದಿದೆ. ತನ್ನ ಗೆಳತಿಯೊಬ್ಬರು ಇಲ್ಲಿ ಹಲ್ಲಿನ ಚಿಕಿತ್ಸೆಗೆಂದು ಹೋದಾಗ ಚಿಕಿತ್ಸೆಯ ಸಮಯದಲ್ಲಿ ಡೆಂಟಲ್​​​ ಬ್ಲೆಡ್​ನಿಂದ ಆಕೆಯ ತುಟಿಗಳನ್ನೇ ಕತ್ತರಿಸಿದ್ದಾರೆ” ಎಂದು ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ‘Smile Designing’ Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ

ಈ ಪೋಸ್ಟ್​​​ ವೈರಲ್​​ ಆಗುತ್ತಿದ್ದು, ಸಾಕಷ್ಟು ನೆಟ್ಟಿಗರು ಕ್ಲಿನಿಕ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಿಮಗಾದ ಅನ್ಯಾಯದ ವಿರುದ್ಧ ಆ ಡೆಂಟಲ್​ ಕ್ಲಿನಿಕ್​​ ವಿರುದ್ಧ ಕೋರ್ಟ್​​ನಲ್ಲಿ ಕೇಸು ದಾಖಲಿಸಿ” ಎಂದು ಸಾಕಷ್ಟು ನೆಟ್ಟಿಗರು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಸ್ಪೈಸ್‌ಜೆಟ್ ಪ್ರಯಾಣಿಕರೊಂದಿಗೆ ಡ್ಯಾನ್ಸ್ ಮಾಡಿ ಹೋಳಿ ಆಚರಿಸಿದ ಸಿಬ್ಬಂದಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ಬೆಂಗಳೂರಿನಲ್ಲಿ ಶ್ವಾನದ ಮೇಲೆ ಅತ್ಯಾಚಾರವೆಸಗಿ ವಿಕೃತಿ
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ವೇದಿಕೆ ಮೇಲೆಯೇ ವಾಗ್ವಾದಕ್ಕಿಳಿದ ಸಂಸದ ಪಿಸಿ ಮೋಹನ್​, ಪ್ರದೀಪ್​ ಈಶ್ವರ್
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಆಶೀರ್ವಾದ ರೂಪದಲ್ಲಿ ಹಣ ನೀಡುವುದು ಮಠದ ಸಂಪ್ರದಾಯ: ಸ್ವಾಮೀಜಿ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಗೋರಖ್‌ಪುರದಲ್ಲಿ ಬಣ್ಣ ಎರಚಿ ಸಿಎಂ ಯೋಗಿ ಆದಿತ್ಯನಾಥ್ ಹೋಳಿ ಸಂಭ್ರಮ
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ಆಮಿರ್- ರಣ್​ಬೀರ್ ನಡುವೆ ಬಿರುಕು ಮೂಡಿಸಿದ ರಿಷಭ್ ಪಂತ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
ನೀವೆಲ್ಲ ಬರುವಂಗಿದಿದ್ರೆ ನಿಮ್ಮನ್ನೂ ಊಟಕ್ಕೆ ಕರೀಬಹುದಿತ್ತು: ಶಿವಕುಮಾರ್
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
‘ಅಪ್ಪು’ ಮರು ಬಿಡುಗಡೆ: ಅಣ್ಣಾವ್ರ ಅಭಿಮಾನಿಗಳಿಂದ ಮತ್ತೊಂದು ಬೇಡಿಕೆ
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಶಾಸಕರು ಬಣ್ಣದಾಟ ಆಡುವಾಗ ಕೃಷ್ಣ ಭೈರೇಗೌಡ ತಪ್ಪಿಸಿಕೊಂಡಿದ್ದು ಹೇಗೆ ಗೊತ್ತಾ?
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ
ಪತಿ ಸೂರ್ಯ ಸಾವಿನ ಹಿಂದೆ ಶ್ವೇತಾಳ ಕೈವಾಡವಿದೆ ಎಂದ ಪತ್ನಿ ದೀಪಿಕಾ