AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral Post: ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ

"ಇತ್ತೀಚೆಗಷ್ಟೇ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ವ್ಯಕ್ತಿಯೊಬ್ಬ ಈ ಡೆಂಟಲ್​​ ಕ್ಲಿನಿಕ್​​​ನಲ್ಲಿ ಸಾವನ್ನಪ್ಪಿರುವ ಘಟನೆ ಅಘಾತವನ್ನುಂಟು ಮಾಡಿದೆ. ಆದರೆ ಇಲ್ಲಿನ ದಂತ ವೈದ್ಯರ ನಿರ್ಲಕ್ಷ್ಯಗಳು ಇದೇ ಮೊದಲೇನಲ್ಲಾ ಈ ಹಿಂದೆಯೂ ಕೂಡ ಇಂತದ್ದೇ ಘಟನೆ ನಡೆದಿದೆ " ಎಂದು ಪೋಸ್ಟ್​​ನಲ್ಲಿ ಬರೆಯಲಾಗಿದೆ.

Viral Post: ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯ
ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿದ ವೈದ್ಯImage Credit source: Twitter
ಅಕ್ಷತಾ ವರ್ಕಾಡಿ
|

Updated on: Feb 23, 2024 | 6:12 PM

Share

ಹೈದರಾಬಾದ್‌: ಕೆಲ ದಿನಗಳ ಹಿಂದೆಯಷ್ಟೇ ಜುಬಿಲಿ ಹಿಲ್ಸ್‌ನಲ್ಲಿರುವ ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ಸ್ಮೈಲ್ ಡಿಸೈನಿಂಗ್ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ವ್ಯಕ್ತಿಯೊರ್ವನಿಗೆ ಶಸ್ತ್ರಚಿಕಿತ್ಸೆಯ ಸಂದರ್ಭದಲ್ಲಿ ನೀಡಲಾಗಿದ್ದ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ಸಾವನ್ನಪ್ಪಿರುವ ಸುದ್ದಿ ಎಲ್ಲೆಡೆ ವೈರಲ್​​ ಆಗಿತ್ತು. ಇದೀಗಾ ಇದಕ್ಕೆ ಪೂರಕ ಎಂಬಂತೆ ಇದೇ ಡೆಂಟಲ್​​​ ಆಸ್ಪತ್ರೆಯಲ್ಲಿ ನಡೆದಿದ್ದ ಮತ್ತೊಂದು ಘಟನೆ ಬೆಳಕಿಗೆ ಬಂದಿದೆ. ಇಲ್ಲಿನ ವೈದ್ಯರೊಬ್ಬರು ಹಲ್ಲಿನ ಚಿಕಿತ್ಸೆಗೆಂದು ಬಂದ ಮಹಿಳೆಯ ತುಟಿಯನ್ನೇ ಕತ್ತರಿಸಿ ಕಳುಹಿಸಿದ್ದಾರೆ. ಸದ್ಯ ಈ ಸುದ್ದಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್​ ಆಗಿದೆ.

ಇದೀಗಾ @sowmya_sangam ಎಂಬ ಟ್ವಿಟರ್​​ ಬಳಕೆದಾರರು ಎಫ್‌ಎಂಎಸ್ ಇಂಟರ್ನ್ಯಾಷನಲ್ ಡೆಂಟಲ್ ಕ್ಲಿನಿಕ್‌ನಲ್ಲಿ ತನ್ನ ಗೆಳತಿಗಾದ ಅನ್ಯಾಯವನ್ನು ಪೋಸ್ಟ್​ ಮೂಲಕ ಹಂಚಿಕೊಂಡಿದ್ದಾರೆ. “ಇತ್ತೀಚೆಗಷ್ಟೇ ಅನಸ್ತೇಶಿಯ ಒವರ್​​ ಡೋಸ್​​ನಿಂದಾಗಿ ವ್ಯಕ್ತಿಯೊಬ್ಬ ಈ ಡೆಂಟಲ್​​ ಕ್ಲಿನಿಕ್​​​ನಲ್ಲಿ ಸಾವನ್ನಪ್ಪಿರುವ ಘಟನೆ ಅಘಾತವನ್ನುಂಟು ಮಾಡಿದೆ. ಆದರೆ ಇಲ್ಲಿನ ದಂತ ವೈದ್ಯರ ನಿರ್ಲಕ್ಷ್ಯಗಳು ಇದೇ ಮೊದಲೇನಲ್ಲಾ ಈ ಹಿಂದೆಯೂ ಕೂಡ ಇಂತದ್ದೇ ಘಟನೆ ನಡೆದಿದೆ. ತನ್ನ ಗೆಳತಿಯೊಬ್ಬರು ಇಲ್ಲಿ ಹಲ್ಲಿನ ಚಿಕಿತ್ಸೆಗೆಂದು ಹೋದಾಗ ಚಿಕಿತ್ಸೆಯ ಸಮಯದಲ್ಲಿ ಡೆಂಟಲ್​​​ ಬ್ಲೆಡ್​ನಿಂದ ಆಕೆಯ ತುಟಿಗಳನ್ನೇ ಕತ್ತರಿಸಿದ್ದಾರೆ” ಎಂದು ಪೋಸ್ಟ್​​ನಲ್ಲಿ ಬರೆದುಕೊಂಡಿದ್ದಾರೆ.

ವೈರಲ್​​ ಪೋಸ್ಟ್​​​ ಇಲ್ಲಿದೆ ನೋಡಿ:

ಇದನ್ನೂ ಓದಿ: ‘Smile Designing’ Surgery: ಹಲ್ಲಿನ ಚಂದ ಹೆಚ್ಚಿಸಲು ಹೋಗಿ ಸಾವನ್ನಪ್ಪಿದ ಮದುಮಗ

ಈ ಪೋಸ್ಟ್​​​ ವೈರಲ್​​ ಆಗುತ್ತಿದ್ದು, ಸಾಕಷ್ಟು ನೆಟ್ಟಿಗರು ಕ್ಲಿನಿಕ್​ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ನಿಮಗಾದ ಅನ್ಯಾಯದ ವಿರುದ್ಧ ಆ ಡೆಂಟಲ್​ ಕ್ಲಿನಿಕ್​​ ವಿರುದ್ಧ ಕೋರ್ಟ್​​ನಲ್ಲಿ ಕೇಸು ದಾಖಲಿಸಿ” ಎಂದು ಸಾಕಷ್ಟು ನೆಟ್ಟಿಗರು ಬರೆದುಕೊಂಡಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Akshatha Vorkady
Akshatha Vorkady

ಅಕ್ಷತಾ ವರ್ಕಾಡಿ- ಹುಟ್ಟೂರು ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿ. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವೀಧರೆ. ಕಳೆದ ಮೂರು ವರ್ಷಗಳಿಂದ ‘ಉತ್ತಮ ಸಮಾಜಕ್ಕಾಗಿ’ ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ. ವೈರಲ್ ಸುದ್ದಿಗಳು, ಆಧ್ಯಾತ್ಮ, ಉದ್ಯೋಗವಕಾಶ, ಶಿಕ್ಷಣ, ಆರೋಗ್ಯ ಮತ್ತು ಪ್ರಯಾಣದ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!