AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪತ್ನಿಯ ಹುಟ್ಟುಹಬ್ಬಕ್ಕೆ ವಿಶ್​​ ಮಾಡದ ಫ್ಯಾಮಿಲಿ ಸದಸ್ಯರಿಗೆ ವಾಟ್ಸಪ್ ಗ್ರೂಪ್​​​ನಲ್ಲಿ ಈ ವ್ಯಕ್ತಿ ಹೇಳಿದ್ದೇನು ಗೊತ್ತಾ?

ಫ್ಯಾಮಿಲಿ ವಾಟ್ಸಾಪ್ ಗ್ರೂಪ್‌ನಲ್ಲಿ ಯಾರೂ ತನ್ನ ಹೆಂಡತಿಯ ಹುಟ್ಟುಹಬ್ಬಕ್ಕೆ ಶುಭಾಶಯ ಕೋರದಿದ್ದಾಗ, ಪತಿ ಹಾಸ್ಯಮಯವಾಗಿ ಕುಟುಂಬ ಸದಸ್ಯರನ್ನು ಪ್ರಶ್ನಿಸಿದ್ದಾರೆ. ಅವರ ಮಗ ಈ ಪೋಸ್ಟ್ ಅನ್ನು ರೆಡ್ಡಿಟ್‌ನಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಇದು ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ನೆಟ್ಟಿಗರಿಂದ ತಮಾಷೆಯ ಪ್ರತಿಕ್ರಿಯೆಗಳು ಬಂದಿದೆ. ಈ ಬಗ್ಗೆ ಇಲ್ಲಿದೆ ನೋಡಿ ಸ್ಟೋರಿ

ಪತ್ನಿಯ ಹುಟ್ಟುಹಬ್ಬಕ್ಕೆ ವಿಶ್​​ ಮಾಡದ ಫ್ಯಾಮಿಲಿ ಸದಸ್ಯರಿಗೆ ವಾಟ್ಸಪ್ ಗ್ರೂಪ್​​​ನಲ್ಲಿ ಈ ವ್ಯಕ್ತಿ ಹೇಳಿದ್ದೇನು ಗೊತ್ತಾ?
ಸಾಂದರ್ಭಿಕ ಚಿತ್ರ
ಅಕ್ಷಯ್​ ಪಲ್ಲಮಜಲು​​
|

Updated on:Nov 12, 2025 | 2:00 PM

Share

ರೆಡ್ಡಿಟ್​​​ನಲ್ಲಿ ತುಂಬಾ ಕ್ಯೂಟ್​​ ಆಗಿರುವ ಪೋಸ್ಟ್​​ವೊಂದು ವೈರಲ್​​ ಆಗಿದೆ. ತನ್ನ ಹೆಂಡತಿಯ ಹುಟ್ಟು ಹಬ್ಬಕ್ಕೆ ಫ್ಯಾಮಿಲಿ ವಾಟ್ಸಪ್ ಗ್ರೂಪ್​​​ನಲ್ಲಿ (Family WhatsApp group) ಯಾರೂ ವಿಶ್​​ ಮಾಡಿಲ್ಲ ಎಂದು ಗ್ರೂಪ್​​​ನಲ್ಲಿ ಕುಟುಂಬ ಸದಸ್ಯರಿಗೆ ಹಾಕಿರುವ ಸಂದೇಶ ಸೋಶಿಯಲ್​​​ ಮೀಡಿಯಾದಲ್ಲಿ ಭಾರೀ ವೈರಲ್​​ ಆಗಿದೆ. ಬಗ್ಗೆ ಅವರ ಮಗ ರೆಡ್ಡಿಟ್​​​ನಲ್ಲಿ ಹಂಚಿಕೊಂಡಿದ್ದಾರೆ. ಪೋಸ್ಟ್ಗೆ ತಂದೆ ಸಂದೇಶ ನನ್ನ ಇಡೀ ಕುಟುಂಬವನ್ನು ಲೋಲ್ ಎಂದು ಕರೆದರು ಎಂಬ ಶೀರ್ಷಿಕೆಯನ್ನು ನೀಡಿದ್ದಾರೆ. ಸೋಶಿಯಲ್​​ ಮೀಡಿಯಾದಲ್ಲಿ ನೆಟ್ಟಿಗರು ಕೂಡ ಪೋಸ್ಟ್​​ಗೆ ತಮಾಷೆಯಾಗಿ ಕಮೆಂಟ್ ಮಾಡಿದ್ದಾರೆ.

ಪೋಸ್ಟ್​​​ನಲ್ಲಿ ಹೀಗೆ ಬರೆದುಕೊಂಡಿದ್ದಾರೆ. “ನಮ್ಮ ಫ್ಯಾಮಿಲಿ ವಾಟ್ಸಪ್ ಗ್ರೂಪ್​​​ನಲ್ಲಿ ನನ್ನ ತಂದೆ, ತಾಯಿ, ಚಿಕ್ಕಮ್ಮ, ಚಿಕ್ಕಪ್ಪ, ದೊಡ್ಡಮ್ಮ ದೊಡ್ಡಪ್ಪ, ಅತ್ತೆಮಾವ, ಅವರ ಮಕ್ಕಳು , ನನ್ನ ಹೆಂಡತಿ, ಮಕ್ಕಳು ಎಲ್ಲರೂ ಕೂಡ ಇದ್ದಾರೆ. ಗ್ರೂಪ್​​ನಲ್ಲಿ ನನ್ನ ತಾಯಿಯ ಹುಟ್ಟು ಹಬ್ಬಕ್ಕೆ ಯಾರೊಬ್ಬರು ಕೂಡ ಶುಭಾಶಯ ತಿಳಿಸಿಲ್ಲ. ಅವರೆಲ್ಲ ಗ್ರೂಪ್​​ನಲ್ಲಿ ಆಕ್ಟಿವ್​​ ಆಗಿರುವುದು ಕಡಿಮೆ, ಹಾಗಾಗಿ ಗ್ರೂಪ್​​​ನಲ್ಲಿ ತುಂಬಾ ಮೌನ ಆವರಿಸಿತು. ವೇಳೆ ನನ್ನ ಅಮ್ಮ ಗ್ರೂಪ್​​​ನಲ್ಲಿ ಹೀಗೆ ಸುಮ್ಮನೆ ಒಂದು ಮೆಸೇಜ್​​ ಹಾಕಿದ್ರು, ಅಲ್ಲಿಂದ ಸ್ವಲ್ಪ ಚರ್ಚೆಗಳು ನಡೆಯಿತು. ಸ್ವಲ್ಪ ಹೊತ್ತಿನ ನಂತರ ಅಪ್ಪ ಇದರಲ್ಲಿ ಮಧ್ಯಪ್ರವೇಶ ಮಾಡಿದ್ರು, ನನ್ನ ಹೆಂಡತಿಯ ಹುಟ್ಟುಹಬ್ಬದಂದು ತುಂಬಾ ಪ್ರೀತಿಯನ್ನು ಸುರಿಸಿದ್ದಕ್ಕಾಗಿ ಎಲ್ಲರಿಗೂ ಧನ್ಯವಾದ ಎಂದು ಅಪ್ಪ ವ್ಯಂಗ್ಯವಾಗಿ ಹೇಳಿದ್ರು, ಎಲ್ಲರೂ ಕೂಡ ಮೆಸೇಜ್ಗೆ ​​​​ನಗುವಿನ ಎಮೋಜಿ ಕಳಿಸಿದ್ರು, ಗ್ರೂಪ್​​​ನಲ್ಲಿ ಕುಟುಂಬದ ಇತರರ ಸದಸ್ಯರ ಹುಟ್ಟುಹಬ್ಬದಂದು ಶುಭಾಶಯಗಳು ಬರುತ್ತದೆ. ಆದರೆ ನನ್ನ ತಾಯಿಗೆ ಯಾರೂ ಶುಭಾಶಯ ತಿಳಿಸಿಲ್ಲ. ಗ್ರೂಪ್​​​ನಲ್ಲಿ ಅಪ್ಪನ ಮೆಸೇಜ್​​ ಬರುತ್ತಿದ್ದಂತೆ ಹುಟ್ಟು ಹಬ್ಬದ ಸುರಿಮಳೆ ಶುರುವಾಯಿತುಎಂದು ಹೇಳಿದ್ದಾರೆ.

ಇದನ್ನೂ ಓದಿ: ಇದು ಆಪಲ್‌ ಕಂಪನಿಯ ತಾಕತ್ತು: 3 ದಿನ ಮಣ್ಣಿನಲ್ಲಿ ಹೂತುಹೋಗಿದ್ರೂ ಕೆಲಸ ಮಾಡ್ತಿದೆ ಐಫೋನ್ 17 ಪ್ರೊ

ವೈರಲ್​​​ ಪೋಸ್ಟ್​​ ಇಲ್ಲಿದೆ ನೋಡಿ: 

My father literally called my whole family out lol byu/constantdownfall_ inTeenIndia

ಸೂಪರ್​​​​​​​​ ಸರ್ನೀವು ಎಂದ ನೆಟ್ಟಿಗರು:

ನನ್ನ ಫ್ಯಾಮಿಲಿ ಗ್ರೂಪ್​​​​ನಲ್ಲಿ ಎಲ್ಲವೂ ಸರಳವಾಗಿದೆ. ಯಾರೂ ಯಾವುದೇ ಹುಟ್ಟುಹಬ್ಬವನ್ನು ನೆನಪಿಸಿಕೊಳ್ಳುವುದಿಲ್ಲ ಎಂದು ಒಬ್ಬರು ಹೇಳಿದ್ದಾರೆ. ಮತ್ತೊಬ್ಬರು ನಿಮ್ಮ ತಂದೆ ತುಂಬಾ ಪೂಕಿ (ಕ್ಯೂಟ್​​) ಎಂದು ತಮಾಷೆಯಾಗಿ ಹೇಳಿದ್ದಾರೆ. ಪುರುಷರು ತಮ್ಮ ಹೆಂಡತಿಯ ಪರವಾಗಿ ನಿಲ್ಲುವ ಧೈರ್ಯವಿಲ್ಲದಿದ್ದರೆ ಮದುವೆಯಾಗಬಾರದು ಎಂದು ಮತ್ತೊಬ್ಬರು ಕಮೆಂಟ್​​ ಮಾಡಿದ್ದಾರೆ. ನಿಮ್ಮ ಅಮ್ಮನ ಪರವಾಗಿ ನಿಂತಿದ್ದಕ್ಕಾಗಿ ನಿಮ್ಮ ತಂದೆಗೆ ಕೃತಜ್ಞತೆ ಹೇಳಿದೆ ಎಂದು ಮತ್ತೊಬ್ಬರು ಕಮೆಂಟ್​​​ ಮಾಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:54 pm, Wed, 12 November 25

Follow Us
Akshay Pallamajalu
Akshay Pallamajalu

ನನ್ನ ಹೆಸರು ಅಕ್ಷಯ್ ಕುಮಾರ್ ಪಲ್ಲಮಜಲು, ನನ್ನ ಊರು ದಕ್ಷಿಣ ಕನ್ನಡ ಜಿಲ್ಲೆ, ಬಂಟ್ವಾಳ ತಾಲ್ಲೂಕು, ಡಿಜಿಟಲ್​ ವಿಭಾಗದಲ್ಲಿ 3 ವರ್ಷಗಳ ಅನುಭವ, ಇದರ ಜತೆಗೆ ಸೋಶಿಯಲ್ ಮೀಡಿಯಾದ ಬಗ್ಗೆ ಹೆಚ್ಚಿನ ಆಸಕ್ತಿಯನ್ನು ಹೊಂದಿದ್ದು, ಟಿವಿ9ನಲ್ಲೂ ಸೋಶಿಯಲ್​​​ ಮೀಡಿಯಾವನ್ನು ನೋಡಿಕೊಳ್ಳುತ್ತಿದ್ದೇನೆ. ಡಿಜಿಟಲ್ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಸೋಶಿಯಲ್​​​ ಮೀಡಿಯಾದಲ್ಲಿ ಇನ್ನೂ ಹೆಚ್ಚಿನ ವಿಚಾರಗಳನ್ನು ತಿಳಿದುಕೊಳ್ಳವ ಆಸಕ್ತಿ ಇದೆ. ಇದರ ಜತೆಗೆ ರಾಷ್ಟ್ರೀಯ ಲೇಖನಗಳನ್ನು ಬರೆಯುತ್ತೇನೆ.

Read More
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ
ಗಿನ್ನಿಸ್​​ ದಾಖಲೆ ಬರೆದ ತುಮಕೂರು: ಪ್ರಮಾಣಪತ್ರ ಸ್ವೀಕರಿಸಿದ ಸಿದ್ದರಾಮಯ್ಯ