AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Viral: ರಾಜ್ಯ ಸರ್ಕಾರದಿಂದ ಜನರಿಗೆ ಶೀಘ್ರದಲ್ಲಿ ನಿಧಿ ಭಾಗ್ಯ, ಕುಕ್ಕೆ ಸುಬ್ರಹ್ಮಣ್ಯ ರಸ್ತೆಯಲ್ಲಿ ನಿಧಾನವಾಗಿ ಚಲಿಸಿ

ರಾಜ್ಯದ ಅಭಿವೃದ್ಧಿ ಆಗುತ್ತಿಲ್ಲ. ಸರ್ಕಾರ ಯಾವುದೇ ಹೊಸ ಯೋಜನೆಗಳನ್ನು ತಂದಿಲ್ಲ ಎಂದು ಜನ ಆರೋಪ ಮಾಡುತ್ತಿದ್ದಾರೆ. ಈ ಸಮಯದಲ್ಲೇ ಸರ್ಕಾರವನ್ನು ಎಚ್ಚರಿಸಲು ಕರಾವಳಿ ಭಾಗದ ಜನ ಬ್ಯಾನರ್​​ ಅಭಿಯಾನವನ್ನು ಮಾಡುತ್ತಿದ್ದಾರೆ. ಸಾರ್ವಜನಿಕರ ಸಮಸ್ಯೆಗಳನ್ನು ಕೇಳುವ ಸಮಯ ಜನಪ್ರತಿನಿಧಿಗಳಿಗೆ ಹಾಗೂ ಅಧಿಕಾರಿಗಳಿಗೆ ಇಲ್ಲ. ಹಾಗಾಗಿ ಈ ಬ್ಯಾನರ್​​ ಹಾಕಿ ಅವರಿಗೆ ಬಿಸಿ ಮುಟ್ಟಿಸುವ ಕೆಲಸ ಮಾಡುತ್ತಿದ್ದಾರೆ. ಈ ವೈರಲ್​​ ಬ್ಯಾನರ್​​​ನಲ್ಲಿದೆ ಏನಿದೆ ಎಂಬುದನ್ನು ಇಲ್ಲಿ ಹೇಳಲಾಗಿದೆ ನೋಡಿ.

Viral: ರಾಜ್ಯ ಸರ್ಕಾರದಿಂದ ಜನರಿಗೆ ಶೀಘ್ರದಲ್ಲಿ ನಿಧಿ ಭಾಗ್ಯ, ಕುಕ್ಕೆ ಸುಬ್ರಹ್ಮಣ್ಯ ರಸ್ತೆಯಲ್ಲಿ ನಿಧಾನವಾಗಿ ಚಲಿಸಿ
ವೈರಲ್​ ಪೋಸ್ಟ್​​​​​
ಸಾಯಿನಂದಾ
|

Updated on:Jul 11, 2025 | 2:10 PM

Share

ಕರ್ನಾಟಕದಲ್ಲಿ ಅಭಿವೃದ್ಧಿಯೇ ಆಗುತ್ತಿಲ್ಲ ಎಂದು ಅನೇಕರ ಅಭಿಪ್ರಾಯ. ಆದರೆ ರಾಜ್ಯ ಸರ್ಕಾರ ಈ ಯಾವುದಕ್ಕೂ ತಲೆಕೆಡಿಸಿಕೊಳ್ಳುತ್ತಿಲ್ಲ. ಜನರಿಗೆ ಭಾಗ್ಯಗಳನ್ನು ನೀಡಿ, ರಾಜ್ಯದಲ್ಲಿ ಅಭಿವೃದ್ದಿಯ ಕಡೆಗೆ ಗಮನ ನೀಡುತ್ತಿಲ್ಲ ಎಂಬುದು ಅನೇಕರ ಆರೋಪ. ರಾಜ್ಯದಲ್ಲಿ ಮಳೆಯು ಪ್ರಾರಂಭವಾಗಿದ್ದು, ರಸ್ತೆಗಳು ಗುಂಡಿ ಬಿದ್ದಿದೆ. ಅದರಲ್ಲೂ ಕರವಾಳಿ ಭಾಗದಲ್ಲಿ ಈ ಬಾರಿ ಹೆಚ್ಚು ಮಳೆಯಾಗಿದೆ. ಹೀಗಾಗಿ ಅಲ್ಲಿ ರಸ್ತೆಗಳು ಗುಂಡಿ ಬಿದ್ದು ಸಂಚಾರ ವ್ಯವಸ್ಥೆ ಅಪಾಯದಲ್ಲಿದೆ. ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಹೀಗಾಗಿ ರಸ್ತೆಗಳಲ್ಲಿ ಬಿದ್ದ ಹೊಂಡಗಳ ಬಗ್ಗೆ ಜನ ಟ್ರೋಲ್​ ಮಾಡುತ್ತಿದ್ದಾರೆ. ಆದರೆ ಇಲ್ಲೊಂದು ತುಂಬಾ ಸ್ವಾರಸ್ಯಕರವಾದ ಪೋಸ್ಟ್​​ ಒಂದು ವೈರಲ್​​ ಆಗಿದೆ. ಈ ಪೋಸ್ಟ್​​​ ಒಂದು ಕಡೆ ಸಾರ್ವಜನಿಕರನ್ನು ಎಚ್ಚರಿಸಿದರೆ, ಇನ್ನೊಂದು ಕಡೆ ಸರ್ಕಾರಕ್ಕೆ ಹಾಗೂ ಜನಪ್ರತಿನಿಧಿಗಳಿಗೆ ಬಿಸಿ ಮುಟ್ಟಿಸಿದ್ದಾರೆ. ಮಂಗಳೂರಿನ ಕೈಕಂಬದಿಂದ (Kaikamba) ಕುಕ್ಕೆ ಸುಬ್ರಹ್ಮಣ್ಯಕ್ಕೆ ( Kukke Subramanya) ಹೋಗುವ ರಸ್ತೆಯಲ್ಲಿ ಒಂದು ಬ್ಯಾನರ್​​ ಹಾಕಿದ್ದಾರೆ. ಆ ಬ್ಯಾನರ್​​​ನ ಫೋಟೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೀಗ ಈ ಪೋಸ್ಟ್​ ಎಲ್ಲಾ ಕಡೆ ವೈರಲ್​​​ ಆಗಿದೆ. ಈ ಬಗ್ಗೆ ಅನೇಕರು ಕಾಮೆಂಟ್​​ ಕೂಡ ಮಾಡಿ. ಸರ್ಕಾರವನ್ನು ಎಚ್ಚರಿಸಲು ಇದೊಂದು ಸೂಪರ್​​​​​ ಪ್ಲಾನ್​​ ಎಂದು ಹೇಳಿದ್ದಾರೆ.

ಈ ಪೋಸ್ಟ್​​ನ್ನು ಸಹನ ಎಂಬುವವರು ತಮ್ಮ ಎಕ್ಸ್​​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.  ಕರ್ನಾಟಕದಲ್ಲಿ ರತ್ನಗಳು. ಕನ್ನಡ ತಿಳಿದಿದ್ದರೆ ಓದಲು ಯೋಗ್ಯವಾಗಿದೆ ಎಂದು ಶೀರ್ಷಿಕೆಯನ್ನು ಕೂಡ ಬರೆದುಕೊಂಡಿದ್ದಾರೆ. ಈ ಬ್ಯಾನರ್​​ನಲ್ಲಿ​​​ ಏನಿದೆ? ಎಚ್ಚರಿಕೆ ಫಲಕ: “ಕೈಕಂಬದಿಂದ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗುವ ರಸ್ತೆಯಲ್ಲಿ ನಿಧಿ ಇದೆ ಎಂದು ಯಾರೋ ಮಾಂತ್ರಿಕ ಹೇಳಿದರು. ಈ ರಸ್ತೆಯಲ್ಲಿ ನಿಧಿ ಹುಡುಕಾಟ ನಡೆಯುತ್ತಿರುವ ಬಗ್ಗೆ ಎಚ್ಚೆತ್ತ ರಾಜ್ಯ ಸರ್ಕಾರ, ರಸ್ತೆಯ ಮಧ್ಯದಲ್ಲಿ ದೊಡ್ಡ ಗುಂಡಿಗಳನ್ನು ಅಗೆದು ಅವುಗಳನ್ನು ಅಲ್ಲಿಯೇ ಬಿಟ್ಟಿದೆ. ನಿಧಾನವಾಗಿ ಚಲಿಸಿ” ಎಂಬ ಬ್ಯಾನರ್​​​ನ್ನು ಹಾಕಿದ್ದಾರೆ. ಇದೀಗ ಈ ಬ್ಯಾನರ್​​ ಎಲ್ಲಾ ಕಡೆ ವೈರಲ್​​ ಆಗಿದ್ದು. ಅಲ್ಲಿನ ಜನ ಈ ಬ್ಯಾನರ್ ಹಾಕುವ ಮೂಲಕ ಸರ್ಕಾರವನ್ನು ಎಚ್ಚರಿಸಿದ್ದಾರೆ.

ಇದನ್ನೂ ಓದಿ
Image
ನಡುರಸ್ತೆಯಲ್ಲೇ ತಂದೆ ಮಗನ ಹೊಡೆದಾಟ
Image
ಪತ್ನಿಯನ್ನು ಹೊಗಳಿದ್ದನ್ನು ನೋಡಿ ಕೆಫೆ ಸಿಬ್ಬಂದಿ ಮೇಲೆ ಗರಂ ಆದ ಪತಿ
Image
7 ದಿನಕ್ಕಾಗುವಷ್ಟು ಅಡುಗೆಯನ್ನು ಒಂದೇ ದಿನ ಮಾಡಿದ ಮಹಿಳೆ
Image
ರೈಲ್ವೆ ಹಳಿ ಮೇಲೆ ಮರಿಗೆ ಜನ್ಮ ನೀಡಿದ ಆನೆ : ಎರಡು ಗಂಟೆ ಸ್ಥಗಿತಗೊಂಡ ರೈಲು

ಇದನ್ನೂ ಓದಿ: ಈ ಚಿತ್ರದಲ್ಲಿ 26ರ ನಡುವೆ ಅಡಗಿರುವ 62 ಸಂಖ್ಯೆಯನ್ನು ಕಂಡುಹಿಡಿಯಬಲ್ಲಿರಾ?

ವೈರಲ್​ ಪೋಸ್ಟ್​​ ಇಲ್ಲಿದೆ ನೋಡಿ:

ವೈರಲ್​​​ ಪೋಸ್ಟ್​ಗೆ ಅನೇಕರು ತಮಾಷೆಯಾಗಿ ಕಾಮೆಂಟ್​ ಮಾಡಿದ್ದಾರೆ. ಒಬ್ಬ ಬಳಕೆದಾರರು, “ROFL… ಇದನ್ನು ಮಾಡಿದವರಿಗೆ ಪ್ರಶಸ್ತಿ ಸಿಗಬೇಕು ಎಂದು ಹೇಳಿದ್ದಾರೆ. ಮತ್ತೊಬ್ಬ ಬಳಕೆದಾರ ಇನ್ನು ಕೆಜಿಎಫ್‌ನಲ್ಲಿ ಚಿನ್ನಕ್ಕಾಗಿ ಅಗೆಯುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರದಿಂದ ನಿಧಿ ಭಾಗ್ಯ ಸಿಕ್ಕಿದೆ ಎಂದು ಹೇಳಿದ್ದಾರೆ. ಇನ್ನು ಬೆಂಗಳೂರಿನ ವ್ಯಕ್ತಿಯೊಬ್ಬರು ಅದೇ ಜ್ಯೋತಿಷಿ ಬೆಂಗಳೂರಿನ ರಸ್ತೆಗಳ ಕೆಳಗೆ ನಿಧಿ ಇದೆ ಎಂದು ಭವಿಷ್ಯ ನುಡಿದಂತೆ ಕಾಣುತ್ತಿದೆ, ಹಾಗಾಗಿ ಇಲ್ಲಿಯೂ ಗುಂಡಿಗಳು ಬಿದ್ದಿದೆ ಎಂದು ಹೇಳಿದ್ದಾರೆ. ಇನ್ನು ಕೆಲವರು ಇಂತಹ ಪುಣ್ಯಸ್ಥಳಗಳಿಗೆ ಹೋಗುವ ರಸ್ತೆಗಳನ್ನು ಸರಿ ಮಾಡಬೇಕು ಎಂದು ಅನೇಕರು ಸಲಹೆ ನೀಡಿದ್ದಾರೆ.

ವೈರಲ್​​ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ ​​​​​

Published On - 2:10 pm, Fri, 11 July 25

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ