AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್

Delhi : ಇದು ದೆಹಲಿಯ ಮೋತಿ ಮಹಲ್​ ರೆಸ್ಟೋರೆಂಟ್​ ಬಿಲ್​. ಇಂದು ದೆಹಲಿಯಲ್ಲಿ ಒಂದು ಸಾದಾ ದೋಸೆಗೆ ರೂ. 92 ಬೇಕು. ಅಂದರೆ, ಐವತ್ತು ವರ್ಷಗಳಲ್ಲಿ ನಮ್ಮ ಕೊಳ್ಳುವ ಶಕ್ತಿ ಹೆಚ್ಚಾಗಿದೆಯಂತಲ್ಲವೆ!?

1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್
1971ರ ಮೋತಿ ಮಹಲ್​ ರೆಸ್ಟೋರೆಂಟ್​ನ ಬಿಲ್
TV9 Web
| Edited By: |

Updated on:Jan 17, 2023 | 1:00 PM

Share

Viral : ಇಂದು ಸಾಧಾರಣ ಹೋಟೆಲ್​ನಲ್ಲಿ ಒಂದು ಮಸಾಲೆ ದೋಸೆ ತಿನ್ನಬೇಕೆಂದರೆ ರೂ. 60 ಖರ್ಚಾಗುತ್ತದೆ. ಆದರೆ 1971ರಲ್ಲಿ? ಇದೀಗ ವೈರಲ್ ಆಗುತ್ತಿರುವ ದೆಹಲಿಯ ಮೋತಿ ಮಹಲ್​ ರೆಸ್ಟೋರೆಂಟ್​ನ ಬಿಲ್ ವಿವರ ನೋಡಿ. 51 ವರ್ಷಗಳ ಹಿಂದೆ ಎರಡು ಮಸಾಲೆ ದೋಸೆ ಮತ್ತು ಎರಡು ಕಾಫಿಗೆ ಕೇವಲ ರೂ. 2.16 ನೆಟ್ಟಿಗರಂತೂ ಈ ಬಿಲ್​ ನೋಡಿ, ಅದೇ ಕಾಲ ವಾಪಸ್ ಮರಳಬಾರದೆ ಎಂದು ಕೇಳಿಕೊಳ್ಳುತ್ತಿದ್ದಾರೆ.

ಹಲವಾರು ವರ್ಷಗಳಿಂದ ದಕ್ಷಿಣ ಮತ್ತು ಉತ್ತರ ಭಾರತದ ತಿಂಡಿತಿನಿಸುಗಳಿಗೆ ಹೆಸರುವಾಸಿಯಾದ ಈ ರೆಸ್ಟೋರೆಂಟ್​ ರಾಜಧಾನಿಯ ತಿಂಡಿಪ್ರಿಯರ ಸ್ವರ್ಗ. ಇಲ್ಲಿ ಕೈಗೆಟಕುವ ದರದಲ್ಲಿ ರುಚಿಯಾದ ತಿಂಡಿಗಳು ಲಭ್ಯ. ಇದೀಗ ವೈರಲ್ ಆಗಿರುವ ಈ ಬಿಲ್​ ಅನ್ನು 2017ರ ಫೆಬ್ರವರಿಯಲ್ಲಿ ಟ್ವೀಟ್ ಮಾಡಲಾಗಿದ್ದು ಇದು ಮತ್ತೀಗ ವೈರಲ್ ಆಗುತ್ತಿದೆ.

ಇದನ್ನೂ ಓದಿ : ನೇಪಾಳ ವಿಮಾನ ದುರಂತಕ್ಕೂ ಮುನ್ನ ಕೊನೆಯ ಟಿಕ್​ಟಾಕ್​ ಮಾಡಿದ ಗಗನಸಖಿಯ ವಿಡಿಯೋ ವೈರಲ್

ಇಂಡಿಯನ್ ಹಿಸ್ಟರಿ ವಿತ್​ ವಿಷ್ಣು ಶರ್ಮಾ ಎಂಬ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಳ್ಳಲಾಗಿದೆ. ಇಂದು ದೆಹಲಿಯ ರೆಸ್ಟೋರೆಂಟ್​ನಲ್ಲಿ ಒಂದು ಸಾದಾ ದೋಸೆಗೆ ರೂ. 92 ಖರ್ಚಾಗುತ್ತದೆ. ಐವತ್ತು ವರ್ಷಗಳಲ್ಲಿ ಕೊಳ್ಳುವ ಶಕ್ತಿ ಹೆಚ್ಚಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಈ ಪೋಸ್ಟ್​ ನೋಡಿದ ನೆಟ್ಟಿಗರು, ಇಲ್ಲಿ ಇನ್ನೂ ಮಸಾಲೆದೋಸೆ ಸಿಗುತ್ತದೆಯೇ ಎಂದು ಕೇಳಿದ್ಧಾರೆ.

ಇದನ್ನೂ ಓದಿ : ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರೌಡಿಗಳ ಬಂಧನ!

ಪಂಜಾಬಿ ರೆಸ್ಟೋರೆಂಟ್​ 1971ರಲ್ಲಿ ಎರಡು ರೂಪಾಯಿಗೆ ಇಷ್ಟೆಲ್ಲ ತಿಂಡಿ ಸರ್ವ್ ಮಾಡುತ್ತಿತ್ತೇ!? ಅಚ್ಚರಿಯಾಗುತ್ತಿದೆ ಎಂದಿದ್ದಾರೆ ಒಬ್ಬರು. ಇದನ್ನು ನೋಡಿದ ನೀವು ನಿಮ್ಮೂರಲ್ಲಿ ನಿಮ್ಮ ಬಾಲ್ಯಕಾಲದಲ್ಲಿ ಯಾವೆಲ್ಲ ಹೋಟೆಲ್​ನಲ್ಲಿ ಎಷ್ಟು ರೂಪಾಯಿಗೆಲ್ಲ ತಿಂಡಿ ತಿನಿಸುಗಳು ಸಿಗುತ್ತಿದ್ದವು ಎಂಬುದನ್ನು ನೆನಪಿಸಿಕೊಳ್ಳುತ್ತಿರಬಹುದು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:59 pm, Tue, 17 January 23

ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ
ಬಿಜೆಪಿ ಕಾರ್ಯಕರ್ತೆ ವಿವಸ್ತ್ರ ಕೇಸ್​: ಸಿಎಂ ವಿರುದ್ಧ ಜೋಶಿ ವಾಗ್ದಾಳಿ