AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್

Delhi : ಇದು ದೆಹಲಿಯ ಮೋತಿ ಮಹಲ್​ ರೆಸ್ಟೋರೆಂಟ್​ ಬಿಲ್​. ಇಂದು ದೆಹಲಿಯಲ್ಲಿ ಒಂದು ಸಾದಾ ದೋಸೆಗೆ ರೂ. 92 ಬೇಕು. ಅಂದರೆ, ಐವತ್ತು ವರ್ಷಗಳಲ್ಲಿ ನಮ್ಮ ಕೊಳ್ಳುವ ಶಕ್ತಿ ಹೆಚ್ಚಾಗಿದೆಯಂತಲ್ಲವೆ!?

1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್
1971ರ ಮೋತಿ ಮಹಲ್​ ರೆಸ್ಟೋರೆಂಟ್​ನ ಬಿಲ್
TV9 Web
| Edited By: ಶ್ರೀದೇವಿ ಕಳಸದ|

Updated on:Jan 17, 2023 | 1:00 PM

Share

Viral : ಇಂದು ಸಾಧಾರಣ ಹೋಟೆಲ್​ನಲ್ಲಿ ಒಂದು ಮಸಾಲೆ ದೋಸೆ ತಿನ್ನಬೇಕೆಂದರೆ ರೂ. 60 ಖರ್ಚಾಗುತ್ತದೆ. ಆದರೆ 1971ರಲ್ಲಿ? ಇದೀಗ ವೈರಲ್ ಆಗುತ್ತಿರುವ ದೆಹಲಿಯ ಮೋತಿ ಮಹಲ್​ ರೆಸ್ಟೋರೆಂಟ್​ನ ಬಿಲ್ ವಿವರ ನೋಡಿ. 51 ವರ್ಷಗಳ ಹಿಂದೆ ಎರಡು ಮಸಾಲೆ ದೋಸೆ ಮತ್ತು ಎರಡು ಕಾಫಿಗೆ ಕೇವಲ ರೂ. 2.16 ನೆಟ್ಟಿಗರಂತೂ ಈ ಬಿಲ್​ ನೋಡಿ, ಅದೇ ಕಾಲ ವಾಪಸ್ ಮರಳಬಾರದೆ ಎಂದು ಕೇಳಿಕೊಳ್ಳುತ್ತಿದ್ದಾರೆ.

ಹಲವಾರು ವರ್ಷಗಳಿಂದ ದಕ್ಷಿಣ ಮತ್ತು ಉತ್ತರ ಭಾರತದ ತಿಂಡಿತಿನಿಸುಗಳಿಗೆ ಹೆಸರುವಾಸಿಯಾದ ಈ ರೆಸ್ಟೋರೆಂಟ್​ ರಾಜಧಾನಿಯ ತಿಂಡಿಪ್ರಿಯರ ಸ್ವರ್ಗ. ಇಲ್ಲಿ ಕೈಗೆಟಕುವ ದರದಲ್ಲಿ ರುಚಿಯಾದ ತಿಂಡಿಗಳು ಲಭ್ಯ. ಇದೀಗ ವೈರಲ್ ಆಗಿರುವ ಈ ಬಿಲ್​ ಅನ್ನು 2017ರ ಫೆಬ್ರವರಿಯಲ್ಲಿ ಟ್ವೀಟ್ ಮಾಡಲಾಗಿದ್ದು ಇದು ಮತ್ತೀಗ ವೈರಲ್ ಆಗುತ್ತಿದೆ.

ಇದನ್ನೂ ಓದಿ : ನೇಪಾಳ ವಿಮಾನ ದುರಂತಕ್ಕೂ ಮುನ್ನ ಕೊನೆಯ ಟಿಕ್​ಟಾಕ್​ ಮಾಡಿದ ಗಗನಸಖಿಯ ವಿಡಿಯೋ ವೈರಲ್

ಇಂಡಿಯನ್ ಹಿಸ್ಟರಿ ವಿತ್​ ವಿಷ್ಣು ಶರ್ಮಾ ಎಂಬ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಳ್ಳಲಾಗಿದೆ. ಇಂದು ದೆಹಲಿಯ ರೆಸ್ಟೋರೆಂಟ್​ನಲ್ಲಿ ಒಂದು ಸಾದಾ ದೋಸೆಗೆ ರೂ. 92 ಖರ್ಚಾಗುತ್ತದೆ. ಐವತ್ತು ವರ್ಷಗಳಲ್ಲಿ ಕೊಳ್ಳುವ ಶಕ್ತಿ ಹೆಚ್ಚಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಈ ಪೋಸ್ಟ್​ ನೋಡಿದ ನೆಟ್ಟಿಗರು, ಇಲ್ಲಿ ಇನ್ನೂ ಮಸಾಲೆದೋಸೆ ಸಿಗುತ್ತದೆಯೇ ಎಂದು ಕೇಳಿದ್ಧಾರೆ.

ಇದನ್ನೂ ಓದಿ : ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರೌಡಿಗಳ ಬಂಧನ!

ಪಂಜಾಬಿ ರೆಸ್ಟೋರೆಂಟ್​ 1971ರಲ್ಲಿ ಎರಡು ರೂಪಾಯಿಗೆ ಇಷ್ಟೆಲ್ಲ ತಿಂಡಿ ಸರ್ವ್ ಮಾಡುತ್ತಿತ್ತೇ!? ಅಚ್ಚರಿಯಾಗುತ್ತಿದೆ ಎಂದಿದ್ದಾರೆ ಒಬ್ಬರು. ಇದನ್ನು ನೋಡಿದ ನೀವು ನಿಮ್ಮೂರಲ್ಲಿ ನಿಮ್ಮ ಬಾಲ್ಯಕಾಲದಲ್ಲಿ ಯಾವೆಲ್ಲ ಹೋಟೆಲ್​ನಲ್ಲಿ ಎಷ್ಟು ರೂಪಾಯಿಗೆಲ್ಲ ತಿಂಡಿ ತಿನಿಸುಗಳು ಸಿಗುತ್ತಿದ್ದವು ಎಂಬುದನ್ನು ನೆನಪಿಸಿಕೊಳ್ಳುತ್ತಿರಬಹುದು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:59 pm, Tue, 17 January 23

Follow Us
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ