AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್

Delhi : ಇದು ದೆಹಲಿಯ ಮೋತಿ ಮಹಲ್​ ರೆಸ್ಟೋರೆಂಟ್​ ಬಿಲ್​. ಇಂದು ದೆಹಲಿಯಲ್ಲಿ ಒಂದು ಸಾದಾ ದೋಸೆಗೆ ರೂ. 92 ಬೇಕು. ಅಂದರೆ, ಐವತ್ತು ವರ್ಷಗಳಲ್ಲಿ ನಮ್ಮ ಕೊಳ್ಳುವ ಶಕ್ತಿ ಹೆಚ್ಚಾಗಿದೆಯಂತಲ್ಲವೆ!?

1971ರಲ್ಲಿ 2 ಮಸಾಲೆ ದೋಸೆ, 2 ಕಾಫಿಗೆ 2 ರೂಪಾಯಿ! ದೆಹಲಿಯ ರೆಸ್ಟೋರೆಂಟ್ ಬಿಲ್ ವೈರಲ್
1971ರ ಮೋತಿ ಮಹಲ್​ ರೆಸ್ಟೋರೆಂಟ್​ನ ಬಿಲ್
TV9 Web
| Edited By: |

Updated on:Jan 17, 2023 | 1:00 PM

Share

Viral : ಇಂದು ಸಾಧಾರಣ ಹೋಟೆಲ್​ನಲ್ಲಿ ಒಂದು ಮಸಾಲೆ ದೋಸೆ ತಿನ್ನಬೇಕೆಂದರೆ ರೂ. 60 ಖರ್ಚಾಗುತ್ತದೆ. ಆದರೆ 1971ರಲ್ಲಿ? ಇದೀಗ ವೈರಲ್ ಆಗುತ್ತಿರುವ ದೆಹಲಿಯ ಮೋತಿ ಮಹಲ್​ ರೆಸ್ಟೋರೆಂಟ್​ನ ಬಿಲ್ ವಿವರ ನೋಡಿ. 51 ವರ್ಷಗಳ ಹಿಂದೆ ಎರಡು ಮಸಾಲೆ ದೋಸೆ ಮತ್ತು ಎರಡು ಕಾಫಿಗೆ ಕೇವಲ ರೂ. 2.16 ನೆಟ್ಟಿಗರಂತೂ ಈ ಬಿಲ್​ ನೋಡಿ, ಅದೇ ಕಾಲ ವಾಪಸ್ ಮರಳಬಾರದೆ ಎಂದು ಕೇಳಿಕೊಳ್ಳುತ್ತಿದ್ದಾರೆ.

ಹಲವಾರು ವರ್ಷಗಳಿಂದ ದಕ್ಷಿಣ ಮತ್ತು ಉತ್ತರ ಭಾರತದ ತಿಂಡಿತಿನಿಸುಗಳಿಗೆ ಹೆಸರುವಾಸಿಯಾದ ಈ ರೆಸ್ಟೋರೆಂಟ್​ ರಾಜಧಾನಿಯ ತಿಂಡಿಪ್ರಿಯರ ಸ್ವರ್ಗ. ಇಲ್ಲಿ ಕೈಗೆಟಕುವ ದರದಲ್ಲಿ ರುಚಿಯಾದ ತಿಂಡಿಗಳು ಲಭ್ಯ. ಇದೀಗ ವೈರಲ್ ಆಗಿರುವ ಈ ಬಿಲ್​ ಅನ್ನು 2017ರ ಫೆಬ್ರವರಿಯಲ್ಲಿ ಟ್ವೀಟ್ ಮಾಡಲಾಗಿದ್ದು ಇದು ಮತ್ತೀಗ ವೈರಲ್ ಆಗುತ್ತಿದೆ.

ಇದನ್ನೂ ಓದಿ : ನೇಪಾಳ ವಿಮಾನ ದುರಂತಕ್ಕೂ ಮುನ್ನ ಕೊನೆಯ ಟಿಕ್​ಟಾಕ್​ ಮಾಡಿದ ಗಗನಸಖಿಯ ವಿಡಿಯೋ ವೈರಲ್

ಇಂಡಿಯನ್ ಹಿಸ್ಟರಿ ವಿತ್​ ವಿಷ್ಣು ಶರ್ಮಾ ಎಂಬ ಖಾತೆಯಲ್ಲಿ ಈ ಪೋಸ್ಟ್ ಹಂಚಿಕೊಳ್ಳಲಾಗಿದೆ. ಇಂದು ದೆಹಲಿಯ ರೆಸ್ಟೋರೆಂಟ್​ನಲ್ಲಿ ಒಂದು ಸಾದಾ ದೋಸೆಗೆ ರೂ. 92 ಖರ್ಚಾಗುತ್ತದೆ. ಐವತ್ತು ವರ್ಷಗಳಲ್ಲಿ ಕೊಳ್ಳುವ ಶಕ್ತಿ ಹೆಚ್ಚಾಗಿದೆ ಎಂಬುದನ್ನು ಇದು ತೋರಿಸುತ್ತದೆ. ಈ ಪೋಸ್ಟ್​ ನೋಡಿದ ನೆಟ್ಟಿಗರು, ಇಲ್ಲಿ ಇನ್ನೂ ಮಸಾಲೆದೋಸೆ ಸಿಗುತ್ತದೆಯೇ ಎಂದು ಕೇಳಿದ್ಧಾರೆ.

ಇದನ್ನೂ ಓದಿ : ಊಟದ ಬಿಲ್ ಕೇಳಿದ್ದಕ್ಕೆ ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ ಮಾಡಿದ್ದ ರೌಡಿಗಳ ಬಂಧನ!

ಪಂಜಾಬಿ ರೆಸ್ಟೋರೆಂಟ್​ 1971ರಲ್ಲಿ ಎರಡು ರೂಪಾಯಿಗೆ ಇಷ್ಟೆಲ್ಲ ತಿಂಡಿ ಸರ್ವ್ ಮಾಡುತ್ತಿತ್ತೇ!? ಅಚ್ಚರಿಯಾಗುತ್ತಿದೆ ಎಂದಿದ್ದಾರೆ ಒಬ್ಬರು. ಇದನ್ನು ನೋಡಿದ ನೀವು ನಿಮ್ಮೂರಲ್ಲಿ ನಿಮ್ಮ ಬಾಲ್ಯಕಾಲದಲ್ಲಿ ಯಾವೆಲ್ಲ ಹೋಟೆಲ್​ನಲ್ಲಿ ಎಷ್ಟು ರೂಪಾಯಿಗೆಲ್ಲ ತಿಂಡಿ ತಿನಿಸುಗಳು ಸಿಗುತ್ತಿದ್ದವು ಎಂಬುದನ್ನು ನೆನಪಿಸಿಕೊಳ್ಳುತ್ತಿರಬಹುದು.

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 12:59 pm, Tue, 17 January 23

ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಯಾವುದೇ ಸಾಂವಿಧಾನಿಕ ಅನುಮೋದನೆ ಬೇಕಿಲ್ಲ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ಅಪ್ಪನೇ ಗರ್ಭಿಣಿ ಮಗಳ ಕುರಿ ಕಡಿದಂಗೆ ಕಡಿದವ್ನೆ: ಭೀಕರತೆ ಬಿಚ್ಚಿಟ್ಟ ಮಹಿಳೆ
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ILT20: ಸೋತರೂ ಪ್ಲೇಆಫ್​ಗೇರಿದ ಡೆಸರ್ಟ್ ವೈಪರ್ಸ್
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಕುಕ್ಕೆ ಕಿರುಷಷ್ಠಿ: ಖಾದರ್ ಸೇರಿ ಅನ್ಯಧರ್ಮದ ನಾಯಕರ ಕರೆಸಿದ್ದಕ್ಕೆ ಆಕ್ರೋಶ
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
ಅಶ್ವಿನಿ-ಗಿಲ್ಲಿ ಮಧ್ಯೆ ಮತ್ತೆ ಶುರುವಾಯ್ತು ಮುನಿಸಿ; ಆರಂಭವಾಯ್ತು ಫೈಟ್
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
4719 ಎಸೆತಗಳಲ್ಲಿ ನಿರ್ಧಾರವಾದ ಆ್ಯಶಸ್ ಸರಣಿ ಫಲಿತಾಂಶ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ಹುಬ್ಬಳ್ಳಿ ಮಂದಿಗೆ ಸುದೀಪ್ ಥ್ಯಾಂಕ್ಸ್ ಹೇಳಿದ್ದು ಹೇಗೆ ನೋಡಿ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ದೆಹಲಿಗೆ ಡಿಕೆ ಶಿವಕುಮಾರ್: ಕಾರ್ಯಕಾರಿಣಿಗೂ ಮುನ್ನ ರಾಹುಲ್ ಭೇಟಿಗೆ ಪ್ರಯತ್ನ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಸ್ಲಾಮಿಸ್ಟ್​ಗಳು, ಇಸ್ಲಾಮಿಸಂ ಇಡೀ ವಿಶ್ವಕ್ಕೆ ದೊಡ್ಡ ಬೆದರಿಕೆ: ತುಳಸಿ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ
ಇಂದು ಈ ರಾಶಿಯವರು ಇತರರನ್ನು ನಂಬಿ ಮೋಸ ಹೋಗುವ ಸಾಧ್ಯತೆ