AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸಳ್​ ಪಾವ್​ ಇದೂ ಒಂದು ತಿನಿಸೇ? ಟ್ವೀಟ್ ಮಾಡಿದ ವ್ಯಕ್ತಿಗೆ ಪಾಠ ಮಾಡುತ್ತಿರುವ ನೆಟ್ಟಿಗರು

Misal Pav : ‘ಎಣ್ಣೆ ಬಸಿಯುವ ಉಸಳಿಯಲ್ಲಿ ದಾರಿತಪ್ಪಿ ಒಂದಷ್ಟು ಸೇವು ಬಿದ್ದರೆ ಹೇಗಿರುತ್ತೋ ಹಾಗಿದೆ ಅದು’ ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಟೀಕಿಸಿದ್ದಾರೆ. ಅದೆಲ್ಲ ಮೈಮುರಿದು ದುಡಿಯುವವರಿಗೆ ನಿಮ್ಮಂಥವರಿಗೆಲ್ಲ ಎಂದಿದ್ದಾರೆ ನೆಟ್ಟಿಗರು.

ಮಿಸಳ್​ ಪಾವ್​ ಇದೂ ಒಂದು ತಿನಿಸೇ? ಟ್ವೀಟ್ ಮಾಡಿದ ವ್ಯಕ್ತಿಗೆ ಪಾಠ ಮಾಡುತ್ತಿರುವ ನೆಟ್ಟಿಗರು
ಮಿಸಳ್​ ಪಾವ್​, (ಪ್ರಾತಿನಿಧಿಕ ಚಿತ್ರ)
ಶ್ರೀದೇವಿ ಕಳಸದ
|

Updated on:Feb 01, 2023 | 12:39 PM

Share

Viral News : ಮಹಾರಾಷ್ಟ್ರ ಎಂದರೆ ಮಿಸಳ್​ ಪಾವ್ ಫಕ್ಕನೆ ಕಣ್ಮುಂದೆ ಬರುತ್ತದೆ. ಮಡಿಕೆ, ಕಡಲೆ ಅಥವಾ ಬಟಾಣಿಕಾಳುಗಳನ್ನು ನೆನೆಹಾಕಿ, ಈರುಳ್ಳಿ, ಶುಂಠಿ, ಬೆಳ್ಳುಳ್ಳಿ, ಹಸಿಮೆಣಸಿನಕಾಯಿ, ಟೊಮ್ಯಾಟೋ, ಆಲೂಗಡ್ಡೆ, ಉಪ್ಪು, ಖಾರ, ಸ್ವಲ್ಪ ಮಸಾಲೆಯೊಂದಿಗೆ ಮಾಡುವ ರಸಭರಿತವಾದ ಭಾಜೀ. ಅದರ ತುಂಬಾ ಶೇವ್​ ಸುರಿಯುವುದು, ನಿಂಬೆರಸ ಹಿಂಡಿಕೊಳ್ಳುವುದು, ಬನ್​ಗೆ ಬೆಣ್ಣೆ ಹಚ್ಚಿ ತವಾ ಮೇಲೆ ಬೇಯಿಸಿದರೆ ಪಾವ್​ ರೆಡಿ. ಬೇಕಿದ್ದರೆ ಎರಡು ತುಂಡು ಹಸೀ ಈರುಳ್ಳಿ. ಇಂಥ ರುಚಿಕರ ಮತ್ತು ಮಹಾರಾಷ್ಟ್ರಿಗರ ನಿತ್ಯದ ನಾಷ್ಟಾ ನೋಡಿದರೆ ಯಾರಿಗೆ ತಾನೆ ಇಷ್ಟವಿಲ್ಲ? ಆದರೆ ವ್ಯಕ್ತಿಯೊಬ್ಬ ಮಿಸಳ್​ ಪಾವ್​ ಬಗ್ಗೆ ನಕಾರಾತ್ಮಕವಾಗಿ ಟ್ವೀಟ್ ಮಾಡಿದ್ದಾನೆ. ನೆಟ್ಟಿಗರೆಲ್ಲ ಅವನಿಗೆ ಮುಗಿಬಿದ್ದಿದ್ದಾರೆ.

​ಬೋಧಿಸತ್ವ ಮಜುಂದಾರ್ ಎನ್ನುವ ವ್ಯಕ್ತಿಯೇ ಟ್ವಿಟರ್​ನಲ್ಲಿ ಟೀಕಿಸಿದವರು. ‘ಮಿಸಳ್ ಪಾವ್ ಎಂದರೆ, ಅದೂ ಒಂದು ತಿನಿಸೇ? ಎಣ್ಣೆ ಬಸಿಯುವ ಉಸಳಿಯಲ್ಲಿ ದಾರಿತಪ್ಪಿ ಒಂದಷ್ಟು ಸೇವು ಬಿದ್ದರೆ ಹೇಗಿರುತ್ತೋ ಹಾಗಿದೆ ಅದು’ ಎಂದಿದ್ದಾರೆ. ನೀವು ಮುಂಬೈನಲ್ಲಿದ್ದು ಮಿಸಳ್​ ಪಾವ್​ ನಿಂದಿಸುತ್ತಿದ್ದೀರಿ ಎಂದಿದ್ದಾರೆ. ನೀವು ದಾದರ್​ನ ಶಿವಾಜಿ ಪಾರ್ಕ್​ ಬಳಿ ಇರುವ ಆಸ್ವಾದ್​ ಮತ್ತು ಥಾಣೆಯಲ್ಲಿರುವ ಆಮಂತ್ರಣ್​ದಲ್ಲಿ ಪಾವ್​ ಭಾಜಿ ತಿಂದ ನೋಡಿ. ಆದರೆ ಮಾಮ್ಲೇದಾರ್​ ಫ್ರಾಂಚೈಸಿ ಹೋಟೆಲ್​ಗಳಲ್ಲಿ ತಿನ್ನಬೇಡಿ ಎಂದಿದ್ದಾರೆ ಮತ್ತೊಬ್ಬರು. ಹೀಗೆಲ್ಲ ಹೇಳಬೇಡಿ ಇದು ತುಂಬಾ ರುಚಿಯಾದ ಖಾದ್ಯ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ಇನ್ನೂ ಕೆಲವರು ಬೋಧಿಸತ್ವರ ಮಾತನ್ನು ಅನುಮೋದಿಸಿದ್ದಾರೆ. ಹೌದು ಇದನ್ನು ಕೆಟ್ಟದಾಗಿ ಮಾಡಿದ್ದಾರೆ ಎಂದಿದ್ದಾರೆ. ನಾನು ಪಾವ್​ ಭಾಜಿ ಅಂದರೆ ಪ್ರಾಣ. ಆದರೆ ಈ ಮಿಸಳ್​ ಪಾವ್​ ಎಂದರೆ ಏನು ಎಂದು ಮತ್ತೊಬ್ಬರು ಕೇಳಿದ್ದಾರೆ. ಯಾಕೆ ಹೀಗೆ ಎಣ್ಣೆಗಸಿಯನ್ನು ಸರಿದುಕೊಳ್ಳುತ್ತಾರೋ ಕಾಣೆ ಎಂದಿದ್ದಾರೆ ಕೆಲವರು.

ಇದೆಲ್ಲವೂ ಮೈಮುರಿದು ತಿನ್ನುವವರಿಗೆ ಮಾತ್ರ ನಿಮ್ಮಂಥವರಿಗೆ ಅಲ್ಲ. ಎಂದು ಕೆಲವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು? ಮಹಾರಾಷ್ಟ್ರಿಯನ್​ ಮಿಸಳ್​ ಪಾವ್​ನ ಪಾಕವಿಧಾನ ತಿಳಿದುಕೊಳ್ಳಬೇಕೆ? ಕ್ಲಿಕ್ ಮಾಡಿ

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:28 am, Wed, 1 February 23

Follow Us
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
2 ನಿಮಿಷ ತಡವಾಗಿ ಬಂದ ಬಾಲಕನಿಗೆ 2 ಗಂಟೆ ಬಿಸಿಲಲ್ಲಿ ನಿಲ್ಲಿಸಿ ಶಿಕ್ಷೆ!
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ