AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿಸಳ್​ ಪಾವ್​ ಇದೂ ಒಂದು ತಿನಿಸೇ? ಟ್ವೀಟ್ ಮಾಡಿದ ವ್ಯಕ್ತಿಗೆ ಪಾಠ ಮಾಡುತ್ತಿರುವ ನೆಟ್ಟಿಗರು

Misal Pav : ‘ಎಣ್ಣೆ ಬಸಿಯುವ ಉಸಳಿಯಲ್ಲಿ ದಾರಿತಪ್ಪಿ ಒಂದಷ್ಟು ಸೇವು ಬಿದ್ದರೆ ಹೇಗಿರುತ್ತೋ ಹಾಗಿದೆ ಅದು’ ವ್ಯಕ್ತಿಯೊಬ್ಬರು ಟ್ವಿಟರ್​ನಲ್ಲಿ ಟೀಕಿಸಿದ್ದಾರೆ. ಅದೆಲ್ಲ ಮೈಮುರಿದು ದುಡಿಯುವವರಿಗೆ ನಿಮ್ಮಂಥವರಿಗೆಲ್ಲ ಎಂದಿದ್ದಾರೆ ನೆಟ್ಟಿಗರು.

ಮಿಸಳ್​ ಪಾವ್​ ಇದೂ ಒಂದು ತಿನಿಸೇ? ಟ್ವೀಟ್ ಮಾಡಿದ ವ್ಯಕ್ತಿಗೆ ಪಾಠ ಮಾಡುತ್ತಿರುವ ನೆಟ್ಟಿಗರು
ಮಿಸಳ್​ ಪಾವ್​, (ಪ್ರಾತಿನಿಧಿಕ ಚಿತ್ರ)
ಶ್ರೀದೇವಿ ಕಳಸದ
ಶ್ರೀದೇವಿ ಕಳಸದ|

Updated on:Feb 01, 2023 | 12:39 PM

Share

Viral News : ಮಹಾರಾಷ್ಟ್ರ ಎಂದರೆ ಮಿಸಳ್​ ಪಾವ್ ಫಕ್ಕನೆ ಕಣ್ಮುಂದೆ ಬರುತ್ತದೆ. ಮಡಿಕೆ, ಕಡಲೆ ಅಥವಾ ಬಟಾಣಿಕಾಳುಗಳನ್ನು ನೆನೆಹಾಕಿ, ಈರುಳ್ಳಿ, ಶುಂಠಿ, ಬೆಳ್ಳುಳ್ಳಿ, ಹಸಿಮೆಣಸಿನಕಾಯಿ, ಟೊಮ್ಯಾಟೋ, ಆಲೂಗಡ್ಡೆ, ಉಪ್ಪು, ಖಾರ, ಸ್ವಲ್ಪ ಮಸಾಲೆಯೊಂದಿಗೆ ಮಾಡುವ ರಸಭರಿತವಾದ ಭಾಜೀ. ಅದರ ತುಂಬಾ ಶೇವ್​ ಸುರಿಯುವುದು, ನಿಂಬೆರಸ ಹಿಂಡಿಕೊಳ್ಳುವುದು, ಬನ್​ಗೆ ಬೆಣ್ಣೆ ಹಚ್ಚಿ ತವಾ ಮೇಲೆ ಬೇಯಿಸಿದರೆ ಪಾವ್​ ರೆಡಿ. ಬೇಕಿದ್ದರೆ ಎರಡು ತುಂಡು ಹಸೀ ಈರುಳ್ಳಿ. ಇಂಥ ರುಚಿಕರ ಮತ್ತು ಮಹಾರಾಷ್ಟ್ರಿಗರ ನಿತ್ಯದ ನಾಷ್ಟಾ ನೋಡಿದರೆ ಯಾರಿಗೆ ತಾನೆ ಇಷ್ಟವಿಲ್ಲ? ಆದರೆ ವ್ಯಕ್ತಿಯೊಬ್ಬ ಮಿಸಳ್​ ಪಾವ್​ ಬಗ್ಗೆ ನಕಾರಾತ್ಮಕವಾಗಿ ಟ್ವೀಟ್ ಮಾಡಿದ್ದಾನೆ. ನೆಟ್ಟಿಗರೆಲ್ಲ ಅವನಿಗೆ ಮುಗಿಬಿದ್ದಿದ್ದಾರೆ.

​ಬೋಧಿಸತ್ವ ಮಜುಂದಾರ್ ಎನ್ನುವ ವ್ಯಕ್ತಿಯೇ ಟ್ವಿಟರ್​ನಲ್ಲಿ ಟೀಕಿಸಿದವರು. ‘ಮಿಸಳ್ ಪಾವ್ ಎಂದರೆ, ಅದೂ ಒಂದು ತಿನಿಸೇ? ಎಣ್ಣೆ ಬಸಿಯುವ ಉಸಳಿಯಲ್ಲಿ ದಾರಿತಪ್ಪಿ ಒಂದಷ್ಟು ಸೇವು ಬಿದ್ದರೆ ಹೇಗಿರುತ್ತೋ ಹಾಗಿದೆ ಅದು’ ಎಂದಿದ್ದಾರೆ. ನೀವು ಮುಂಬೈನಲ್ಲಿದ್ದು ಮಿಸಳ್​ ಪಾವ್​ ನಿಂದಿಸುತ್ತಿದ್ದೀರಿ ಎಂದಿದ್ದಾರೆ. ನೀವು ದಾದರ್​ನ ಶಿವಾಜಿ ಪಾರ್ಕ್​ ಬಳಿ ಇರುವ ಆಸ್ವಾದ್​ ಮತ್ತು ಥಾಣೆಯಲ್ಲಿರುವ ಆಮಂತ್ರಣ್​ದಲ್ಲಿ ಪಾವ್​ ಭಾಜಿ ತಿಂದ ನೋಡಿ. ಆದರೆ ಮಾಮ್ಲೇದಾರ್​ ಫ್ರಾಂಚೈಸಿ ಹೋಟೆಲ್​ಗಳಲ್ಲಿ ತಿನ್ನಬೇಡಿ ಎಂದಿದ್ದಾರೆ ಮತ್ತೊಬ್ಬರು. ಹೀಗೆಲ್ಲ ಹೇಳಬೇಡಿ ಇದು ತುಂಬಾ ರುಚಿಯಾದ ಖಾದ್ಯ ಎಂದಿದ್ದಾರೆ ಮತ್ತೊಬ್ಬರು.

ಇದನ್ನೂ ಓದಿ : ರಸ್ತೆಯಲ್ಲಿ ಮೂರ್ಛೆ ಹೋಗಿದ್ದ ನಾಯಿಯನ್ನು ರಕ್ಷಿಸಿದ ವಿಡಿಯೋ ವೈರಲ್

ಇನ್ನೂ ಕೆಲವರು ಬೋಧಿಸತ್ವರ ಮಾತನ್ನು ಅನುಮೋದಿಸಿದ್ದಾರೆ. ಹೌದು ಇದನ್ನು ಕೆಟ್ಟದಾಗಿ ಮಾಡಿದ್ದಾರೆ ಎಂದಿದ್ದಾರೆ. ನಾನು ಪಾವ್​ ಭಾಜಿ ಅಂದರೆ ಪ್ರಾಣ. ಆದರೆ ಈ ಮಿಸಳ್​ ಪಾವ್​ ಎಂದರೆ ಏನು ಎಂದು ಮತ್ತೊಬ್ಬರು ಕೇಳಿದ್ದಾರೆ. ಯಾಕೆ ಹೀಗೆ ಎಣ್ಣೆಗಸಿಯನ್ನು ಸರಿದುಕೊಳ್ಳುತ್ತಾರೋ ಕಾಣೆ ಎಂದಿದ್ದಾರೆ ಕೆಲವರು.

ಇದೆಲ್ಲವೂ ಮೈಮುರಿದು ತಿನ್ನುವವರಿಗೆ ಮಾತ್ರ ನಿಮ್ಮಂಥವರಿಗೆ ಅಲ್ಲ. ಎಂದು ಕೆಲವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇದನ್ನು ಓದಿದ ನಿಮ್ಮ ಅಭಿಪ್ರಾಯವೇನು? ಮಹಾರಾಷ್ಟ್ರಿಯನ್​ ಮಿಸಳ್​ ಪಾವ್​ನ ಪಾಕವಿಧಾನ ತಿಳಿದುಕೊಳ್ಳಬೇಕೆ? ಕ್ಲಿಕ್ ಮಾಡಿ

ಮತ್ತಷ್ಟು ವೈರಲ್ ನ್ಯೂಸ್​ಗಾಗಿ ಕ್ಲಿಕ್ ಮಾಡಿ

Published On - 11:28 am, Wed, 1 February 23

Follow Us
Shridevi Kalasad
Shridevi Kalasad

ಶ್ರೀದೇವಿ ಕಳಸದ : ಮುಖ್ಯ ಉಪಸಂಪಾದಕಿ. ವಿಜಯ ಕರ್ನಾಟಕ, ಸುವರ್ಣ ನ್ಯೂಸ್, ಪ್ರಜಾವಾಣಿ ಮತ್ತು ವಿವಿಧ ಮಾಧ್ಯಮ ಸಂಸ್ಥೆಗಳು ಸೇರಿದಂತೆ ಒಟ್ಟು 16 ವರ್ಷಗಳ ಅನುಭವ. ಸಂಗೀತ, ಸಾಹಿತ್ಯ ಮತ್ತು ಲಲಿತ ಕಲೆಗಳಲ್ಲಿ ವಿಶೇಷ ಆಸಕ್ತಿ.

ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ